ಹೆಚ್ಚುತ್ತಿರುವ ಕೋವಿಡ್ ಎರಡನೇ ಅಲೆ : ಜಿ.ಪಂ., ತಾ.ಪಂ. ಚುನಾವಣೆ ಮುಂದೂಡಿಕೆ?


Team Udayavani, Apr 19, 2021, 1:45 AM IST

ಹೆಚ್ಚುತ್ತಿರುವ ಕೋವಿಡ್ ಎರಡನೇ ಅಲೆ : ಜಿ.ಪಂ., ತಾ.ಪಂ. ಚುನಾವಣೆ ಮುಂದೂಡಿಕೆ?

ಉಡುಪಿ: ಮಾಸಾಂತ್ಯದೊಳಗೆ ಅವಧಿ ಮುಗಿಯುವ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಸದ್ಯ ನಿರೀಕ್ಷಿಸಿದ ಚುನಾವಣೆ ಕೊರೊನಾ ಕಾರಣದಿಂದ ನಡೆಯುವ ಸಾಧ್ಯತೆಯಿಲ್ಲ. ಸರಕಾರವೂ ಚುನಾವಣೆಯನ್ನು ಸದ್ಯ ಮುಂದೂಡುವ ಚಿಂತನೆಯಲ್ಲಿದೆ.

ರಾಜ್ಯದ 31 ಜಿಲ್ಲೆಗಳಲ್ಲಿ ಒಟ್ಟು 1,190 ಜಿ.ಪಂ. ಕ್ಷೇತ್ರಗಳು, 3,273 ತಾ.ಪಂ. ಕ್ಷೇತ್ರಗಳಿಗೆ ಅಧಿಸೂಚನೆಯನ್ನು ರಾಜ್ಯ ಚುನಾವಣ ಆಯೋಗ ಹೊರಡಿಸಿದೆ. ಇದಕ್ಕೆ ಇನ್ನಷ್ಟೇ ಮೀಸಲಾತಿ ಪ್ರಕಟವಾಗಬೇಕಿದೆ. ಈ ಬಾರಿ ಎಲ್ಲ ಜಿಲ್ಲೆಗಳಲ್ಲೂ ಜನಸಂಖ್ಯೆ ಆಧಾರ
ದಲ್ಲಿ ಜಿ.ಪಂ.ಗಳು ಹಿಂದಿಗಿಂತ ಹೆಚ್ಚಿಗೆಯಾಗಿದ್ದು, ತಾ.ಪಂ.ಗಳು ಹಿಂದಿಗಿಂತ ಕಡಿಮೆಯಾಗಿದೆ. ಇದಕ್ಕೆ ದ.ಕ., ಉಡುಪಿ ಜಿಲ್ಲೆಗಳೂ ಹೊರತಲ್ಲ. ಚುನಾವಣ ಆಯೋಗ ಮತದಾರರ ಪಟ್ಟಿ ಸಿದ್ಧಪಡಿಸಲು ಸಿದ್ಧತೆ ಮಾಡಿದೆ. ಆದರೆ ಈಗ ಸೋಂಕಿನ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡುವ ಎಲ್ಲ ಲಕ್ಷಣಗಳಿವೆ.

ಈಗಷ್ಟೇ ಮುಗಿದ ಉಪಚುನಾವಣೆಯಿಂದ ಕೊರೊನಾ ಪ್ರಕರಣ ಜಾಸ್ತಿಯಾಗಿದೆ ಎಂಬ ವರದಿ ಇರುವುದರಿಂದ ಸರಕಾರ ಜಿ.ಪಂ., ತಾ.ಪಂ. ಚುನಾವಣೆಯನ್ನು ಮುಂದೂಡಲು ಒಲವು ತೋರಿದೆ.

ವಿವಿಧ ರಾಜಕೀಯ ಪಕ್ಷಗಳ ಮುಖಂಡರೂ ಈ ವಿಷಯದಲ್ಲಿ ಏಕ ಅಭಿಪ್ರಾಯವನ್ನು ಹೊಂದಿರುವಂತಿದೆ. ಇದಕ್ಕೆ ಪೂರಕವಾಗಿ ಸಚಿವರೂ ಚುನಾವಣೆಯನ್ನು ಸದ್ಯ ಮುಂದೂಡಲು ಒಲವು ಹೊಂದಿದ್ದಾರೆ. ಹೀಗಾಗಿ ಚುನಾವಣೆ ಮುಂದಕ್ಕೆ ಹೋದರೆ ಅಚ್ಚರಿ ಇಲ್ಲ.

ಆಡಳಿತಾಧಿಕಾರಿಗಳ ನೇಮಕ
ಎಪ್ರಿಲ್‌ ತಿಂಗಳ ಕೊನೆಯೊಳಗೆ ಬಹುತೇಕ ಎಲ್ಲ ಜಿ.ಪಂ. ಮತ್ತು ತಾ.ಪಂ.ಗಳ ಹಾಲಿ ಆಡಳಿತ ಮಂಡಳಿ ಅವಧಿ ಮುಗಿಯಲಿದೆ. ಕಾನೂನು ಪ್ರಕಾರ ಜಿ.ಪಂ.ಗೆ ವಿಭಾಗೀಯ ಅಧಿಕಾರಿಗಳು ಮತ್ತು ತಾ.ಪಂ.ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆಡಳಿತಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಬೇಕು. ಹೀಗೆ ಆಡಳಿತಾಧಿಕಾರಿಗಳ ಅವಧಿ ಆರು ತಿಂಗಳು. ಇನ್ನು ಆರು ತಿಂಗಳೊಳಗೆ ಚುನಾವಣೆ ನಡೆಸಬೇಕು. ವಿಶೇಷ ಕಾರಣಕ್ಕಾಗಿ ಚುನಾವಣೆ ನಡೆಸಲು ಆಗದಿದ್ದರೆ ಮತ್ತೆ ಆಡಳಿತಾಧಿಕಾರಿಗಳ ಅವಧಿ ವಿಸ್ತರಿಸುವ ಅವಕಾಶವೂ ಇದೆ.

ಸದ್ಯದಲ್ಲಿಯೇ ಮಳೆಗಾಲ ಆರಂಭ
ವಾಗುವುದರಿಂದ ಮುಂದಿನ ನವೆಂಬರ್‌- ಡಿಸೆಂಬರ್‌ ವೇಳೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದರೆ ಚುನಾವಣೆ ನಡೆಸಬಹುದು.

ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಚುನಾವಣೆಯನ್ನು ಮುಂದೂಡಬಹುದು ಎಂದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಸರಕಾರ ಸಚಿವ ಸಂಪುಟದಲ್ಲಿ ವಿಷಯವನ್ನು ಮಂಡಿಸಿ ನಿರ್ಧಾರ ತೆಗೆದುಕೊಳ್ಳಬಹುದು. ರಾಜ್ಯ ಚುನಾವಣ ಆಯೋಗಕ್ಕೂ ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಆಯೋಗವೂ ಪೂರಕವಾಗ ಸ್ಪಂದಿಸುವ ಸಾಧ್ಯತೆಯಿದೆ.
– ಕೆ.ಎಸ್‌. ಈಶ್ವರಪ್ಪ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ

ಟಾಪ್ ನ್ಯೂಸ್

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.