ತಮಿಳುನಾಡು BJP ಮುಖಂಡನ ಹತ್ಯೆ
Team Udayavani, Apr 29, 2023, 7:51 AM IST
ಚೆನ್ನೈ: ತಮಿಳುನಾಡು ಬಿಜೆಪಿ ಎಸ್ಸಿ/ಎಸ್ಟಿ ಘಟಕದ ರಾಜ್ಯ ಖಜಾಂಚಿ ಮತ್ತು ವಲರಪುರಂ ಪಂಚಾಯತ್ ಅಧ್ಯಕ್ಷ ಪಿ.ಪಿ.ಜಿ.ಶಂಕರ್ ಅವರನ್ನು ಚೆನ್ನೈ ಹೊರವಲಯದ ನಜರತ್ಪೇಟ್ನಲ್ಲಿ ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿದೆ. ಶಂಕರ್ ತಮ್ಮ ಕಾರಿನಲ್ಲಿ ಗುರುವಾರ ರಾತ್ರಿ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಕನಿಷ್ಠ 4 ಮಂದಿ ಅವರ ಕಾರಿನ ಮೇಲೆ ಕಚ್ಚಾ ಬಾಂಬ್ ಎಸೆದಿದ್ದಾರೆ. ಕೂಡಲೇ ಶಂಕರ್ ಕಾರಿನಿಂದ ಇಳಿದು ಓಡಿ ಹೋಗಿದ್ದಾರೆ. ಬೆನ್ನತ್ತಿದ್ದ ರೌಡಿಗಳು ಸಾರ್ವಜನಿಕರ ಎದುರೇ ಮಚ್ಚು, ಲಾಂಗ್ಗಳಿಂದ ಅವರನ್ನು ಹತ್ಯೆ ಮಾಡಿದ್ದಾರೆ. ಮುಂಜಾಗ್ರತ ಕ್ರಮವಾಗಿ ವಲರಪುರಂನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ
UNICEF ಇಂಡಿಯಾಗೆ ಕರೀನಾ ಕಪೂರ್ ರಾಯಭಾರಿ
Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ