Viral: ನಿಮ್ಮಿಂದಾಗಿ ನಮ್ಮ ಜನರಿಗೆ ಕೆಲಸವಿಲ್ಲ…ರೈಲಿನೊಳಗೆ ವಲಸೆ ಕಾರ್ಮಿಕರ ಮೇಲೆ ಹಲ್ಲೆ
ಪ್ರಯಾಣಿಕನಿಗಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
Team Udayavani, Feb 17, 2023, 4:17 PM IST
ಚೆನ್ನೈ: ನೀವು ತಮಿಳರಾ ಅಥವಾ ಹಿಂದಿ ಮಾತನಾಡುವವರಾ? ಹೀಗೆಂದು ಪ್ರಶ್ನಿಸಿದ ಪ್ರಯಾಣಿಕನೊಬ್ಬ ರೈಲ್ವೆ ಬೋಗಿಯೊಳಗೆ ಮೂವರು ವಲಸೆ ಕಾರ್ಮಿಕರ ಮೇಲೆ ಹಿಗ್ಗಾಮುಗ್ಗಾ ಥಳಿಸಿ, ಕೆಟ್ಟ ಶಬ್ದದಿಂದ ಬೈಯುತ್ತಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆಯ ವಿಡಿಯೋ ವೈರಲ್ ಆದ ನಂತರ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಯಾಣಿಕನಿಗಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ವಿಡಿಯೋದಲ್ಲೇನಿದೆ?
ರೈಲಿನಲ್ಲಿ ಬೋಗಿಯೊಳಗೆ ಪ್ರಯಾಣಿಕರ ಗುಂಪು ನಿಂತಿದ್ದು, ವ್ಯಕ್ತಿಯೊಬ್ಬ ವಲಸಿಗ ಯುವಕನ ಬೆನ್ನುತಟ್ಟಿ ಕರೆದು ನೀನು ತಮಿಳಾ ಅಥವಾ ಹಿಂದಿಯೋ ಅಂತ ಪ್ರಶ್ನಿಸುತ್ತಾನೆ. ಬಳಿಕ ಆತನ ಸಮೀಪದಲ್ಲಿದ್ದಾತ ನಾವೆಲ್ಲರೂ ಹಿಂದಿ, ಹಿಂದಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
This assault is a hate crime which is a result of hate politics happening in the state . From name calling to physical assault , the guy abuses the prime minister of the country . @mkstalin inaction in such cases is a sin putting tamils elsewhere at risk . @annamalai_k @AmitShah pic.twitter.com/HBpLVyS4wz
— karthik gopinath (@karthikgnath) February 15, 2023
ಹಿಂದಿ ಅಂತ ಹೇಳಿದ ಕೂಡಲೇ ವಲಸಿಗ ಕಾರ್ಮಿಕರನ್ನು ಹಿಗ್ಗಾಮುಗ್ಗಾ ಥಳಿಸಿ…ಕೆಟ್ಟ ಭಾಷೆಯಲ್ಲಿ ಬೈಯ್ಯುತ್ತಿರುವುದು ವಿಡಿಯೋದಲ್ಲಿದೆ. ನಾನು ನಿಮ್ಮನ್ನೆಲ್ಲಾ ಹೊಡೆದು ಬಿಡುತ್ತೇನೆ…ಸೂ..ಮಕ್ಕಳಾ…ನಿಮ್ಮಿಂದಾಗಿ ನಮ್ಮ ಜನರಿಗೆ (ತಮಿಳರಿಗೆ) ಕೆಲಸ ಇಲ್ಲದಂತಾಗಿದೆ. ಕೊನೆಗೆ ಪ್ರಧಾನಿ ಮೋದಿ ವಿರುದ್ಧವೂ ಕೆಟ್ಟ ಭಾಷೆ ಬಳಸಿರುವ ಆತ ಮತ್ತೊಬ್ಬ ವಲಸಿಗ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿದೆ.
ಚಲಿಸುತ್ತಿದ್ದ ರೈಲಿನ ಜನರಲ್ ಕಂಪಾರ್ಟ್ ಮೆಂಟ್ ನೊಳಗೆ ಈ ಇಡೀ ಘಟನೆ ನಡೆದಿದ್ದು, ಈ ಬಗ್ಗೆ ಎಫ್ ಐಆರ್ ದಾಖಲಾಗಿದ್ದು, ಆರೋಪಿಯನ್ನು ಕೂಡಲೇ ಬಂಧಿಸುವುದಾಗಿ ತಮಿಳುನಾಡು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ