ಅಜಾಗೃತೆಯಿಂದ ಬಂದ ಟ್ಯಾಂಕರ್ ಢಿಕ್ಕಿ : ಬೈಕ್ ಸವಾರ ದಾರುಣ ಸಾವು.
ಟ್ಯಾಂಕರ್, ಢಿಕ್ಕಿ,ಬೈಕ್ ಸವಾರ,Tanker accident: bike rider Udayavani News
Team Udayavani, Oct 8, 2021, 12:18 PM IST
ಚಿಂತಾಮಣಿ : ಅತಿ ವೇಗ ಮತ್ತು ಅಜಾಗೃತೆಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ದಾರುಣವಾಗಿ ಸಾವನ್ನಪ್ಪಿರುವ ಅವಘಡ ನಗರದ ಕೋಲಾರ ವೃತ್ತದಲ್ಲಿ ಶುಕ್ರವಾರ ಸಂಭವಿಸಿದೆ.
ಮದನಪಲ್ಲಿ ಕಡೆಯಿಂದ ಶುಕ್ರವಾರ ಬೆಳ್ಳಗ್ಗೆ 9.30ರ ವೇಳೆಗೆ ಅವಘಡ ಸಂಭವಿಸಿದ್ದು, ಚಿಂತಾಮಣಿ ಕಡೆಗೆ ತೆರಳುತ್ತಿದ್ದ ಆಯಿಲ್ ಟ್ಯಾಂಕರ್ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ಬೈಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ.
ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮೃತ ದ್ವಿಚಕ್ರ ವಾಹನ ಸವಾರನ ಗುರುತು ಇದುವರೆಗೆ ತಿಳಿದು ಬಂದಿಲ್ಲ.
ರಸ್ತೆಯಲ್ಲಿ ಇರುವ ಉಬ್ಬುಗಳನ್ನು ಏಕಾಏಕಿಯಾಗಿ ತೆರವುಗೊಳಿಸಿದ ಪರಿಣಾಮವೇ ಈ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ