ಮಳೆ ಪಂದ್ಯದಲ್ಲಿ ಬಾಂಗ್ಲಾಕ್ಕೆ ಟಾರ್ಗೆಟ್‌ ಗೊಂದಲ


Team Udayavani, Mar 30, 2021, 10:50 PM IST

ಮಳೆ ಪಂದ್ಯದಲ್ಲಿ ಬಾಂಗ್ಲಾಕ್ಕೆ ಟಾರ್ಗೆಟ್‌ ಗೊಂದಲ

ನೇಪಿಯರ್‌: ನ್ಯೂಜಿಲ್ಯಾಂಡ್‌ ಎದುರಿನ ದ್ವಿತೀಯ ಟಿ20 ಪಂದ್ಯದಲ್ಲಿ ಡಿಎಲ್‌ಎಸ್‌ ಟಾರ್ಗೆಟ್‌ ಗೊಂದಲಕ್ಕೆ ಸಿಲುಕಿದ ಬಾಂಗ್ಲಾದೇಶ 28 ರನ್ನುಗಳ ಸೋಲಿಗೆ ತುತ್ತಾಗಿ ಸರಣಿ ಕಳೆದುಕೊಂಡಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲ್ಯಾಂಡ್‌ 17.5 ಓವರ್‌ಗಳಲ್ಲಿ 5ಕ್ಕೆ 173 ರನ್‌ ಮಾಡಿದ ವೇಳೆ ಮಳೆ ಸುರಿಯಿತು. ಬಳಿಕ ಬಾಂಗ್ಲಾಕ್ಕೆ 16 ಓವರ್‌ಗಳ ಇನ್ನಿಂಗ್ಸ್‌ ನಿಗದಿಗೊಳಿಸಲಾಯಿತು. ಆದರೆ ಟಾರ್ಗೆಟ್‌ ಎಷ್ಟು ಎಂಬುದು ಒಂದೂವರೆ ಓವರ್‌ ಆಗುವ ತನಕವೂ ಬಾಂಗ್ಲಾಕ್ಕೆ ಸ್ಪಷ್ಟವಿರಲಿಲ್ಲ. ಅದು 16 ಓವರ್‌ಗಳಲ್ಲಿ 148 ರನ್‌ ಗುರಿ ಎಂದೇ ಭಾವಿಸಿತ್ತು. ನ್ಯೂಜಿಲ್ಯಾಂಡ್‌ ಕ್ರಿಕೆಟ್‌ ಮಂಡಳಿ ತನ್ನ ಅಧಿಕೃತ ಟ್ವಿಟರ್‌ನಲ್ಲೂ 148 ರನ್‌ ಟಾರ್ಗೆಟ್‌ ಎಂದೇ ದಾಖಲಿಸಿತ್ತು. ಬಳಿಕ ಗುರಿ 170 ರನ್‌ ಎಂದು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಬಾಂಗ್ಲಾದೇಶ ತಂಡದ ಕೋಚ್‌ ರಸೆಲ್‌ ಡೊಮಿಂಗೊ ಮತ್ತು ಮ್ಯಾನೇಜರ್‌ ಶಬ್ಬೀರ್‌ ಖಾನ್‌ ಸೇರಿಕೊಂಡು ಮ್ಯಾಚ್‌ ರೆಫ್ರಿ ಜೆಫ್‌ ಕ್ರೋವ್‌ ಅವರೊಂದಿಗೆ ಚರ್ಚೆ ನಡೆಸಿದರು. 4ನೇ ಅಂಪಾಯರ್‌ ಶಾನ್‌ ಹೇಗ್‌ ಕೂಡ ಜತೆಗೂಡಿ ಟಾರ್ಗೆಟ್‌ ಗೊಂದಲವನ್ನು ಪರಿಹರಿಸಿದರು.

ಇಲ್ಲಿಯೂ ಎಡವಟ್ಟು!
ಆದರೆ ಇಲ್ಲಿಯೂ ಎಡವಟ್ಟಾಗಿತ್ತು. ಲೆಕ್ಕಾಚಾರದಂತೆ ಬಾಂಗ್ಲಾದೇಶದ ಗುರಿ 171 ರನ್‌ ಆಗಬೇಕಿತ್ತು. ಇದನ್ನು ಸರಿಪಡಿಸಿದ್ದು ಬಾಂಗ್ಲಾದ 13ನೇ ಓವರಿನಲ್ಲಿ! ಅಂತಿಮವಾಗಿ ಬಾಂಗ್ಲಾದೇಶ 7 ವಿಕೆಟಿಗೆ 142 ರನ್‌ ಮಾಡಿ ಶರಣಾಯಿತು.

ಸಂಕ್ಷಿಪ್ತ ಸ್ಕೋರ್‌
ನ್ಯೂಜಿಲ್ಯಾಂಡ್‌-17.5 ಓವರ್‌ಗಳಲ್ಲಿ 5 ವಿಕೆಟಿಗೆ 173 (ಫಿಲಿಪ್ಸ್‌ ಔಟಾಗದೆ 58, ಮಿಚೆಲ್‌ ಔಟಾಗದೆ 34, ಗಪ್ಟಿಲ್‌ 21, ಮಹೆದಿ ಹಸನ್‌ 45ಕ್ಕೆ 2). ಬಾಂಗ್ಲಾದೇಶ-16 ಓವರ್‌ಗಳಲ್ಲಿ 7 ವಿಕೆಟಿಗೆ 142 (ಸರ್ಕಾರ್‌ 51, ನೈಮ್‌ 38, ಸೌಥಿ 21ಕ್ಕೆ 2, ಬೆನೆಟ್‌ 31ಕ್ಕೆ 2).

ಪಂದ್ಯಶ್ರೇಷ್ಠ: ಗ್ಲೆನ್‌ ಫಿಲಿಪ್ಸ್‌.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.