ಶಿಕ್ಷಕಿಯ ಕೊಲೆ ಕೇಸ್: ಒಡಿಶಾ ಸಿಎಂರದ್ದು ರಾವಣ,ದುರ್ಯೋಧನನ ಸೊಕ್ಕು; ಪ್ರಧಾನ್
Team Udayavani, Nov 20, 2021, 12:05 PM IST
ಭುವನೇಶ್ವರ್ : ಶಿಕ್ಷಕಿಯೊಬ್ಬರ ಅಪಹರಣ ಮತ್ತು ಕೊಲೆ ಕೇಸ್ ಗೆ ಸಂಬಂಧಿಸಿ ಪ್ರಮುಖ ಆರೋಪಿ ಎನ್ನಲಾದ ಒಡಿಶಾದ ಸಚಿವ ಡಿ.ಎಸ್. ಮಿಶ್ರಾ ಅವರನ್ನು ರಕ್ಷಿಸಲಾಗುತ್ತಿದೆ ಎಂದು ಬಿಜೆಪಿ ತೀವ್ರ ಆಕ್ರೋಶ ಹೊರ ಹಾಕಿದ್ದು, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ರಾವಣ, ದುರ್ಯೋಧನ ಎಂದು ಕರೆದಿದೆ.
ಹಿರಿಯ ಬಿಜೆಪಿ ನಾಯಕ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ವಿರುದ್ಧ ಕಿಡಿ ಕಾರಿ, ಮುಖ್ಯಮಂತ್ರಿಯೂ ಆಗಿರುವ ಬಿಜೆಡಿ ಅಧ್ಯಕ್ಷರು ರಾವಣ, ದುರ್ಯೋಧನನ ಸೊಕ್ಕು ತೋರುತ್ತಿದ್ದಾರೆ ಎಂದಿದ್ದಾರೆ.
ಪಟ್ನಾಯಕ್ ಅವರು ಡಿ.ಎಸ್. ಮಿಶ್ರಾ ಅವರ ವಿಚಾರದಲ್ಲಿ ಡಬಲ್ ಸ್ಟ್ಯಾಂಡ್ ಹೊಂದಿದ್ದು,ಈ ಹಿಂದೆ ಆರೋಪ ಹೊತ್ತಿದ್ದ ಹಲವರನ್ನು ನೈತಿಕ ಆಧಾರದ ಮೇಲೆ ಉಚ್ಚಾಟಿಸಿದ್ದರು. ಆದರೆ, ಕಾಳಹಂಡಿ ಶಿಕ್ಷಕಿಯ ಪ್ರಕರಣದಲ್ಲಿ ಗೃಹ ಖಾತೆಯ ರಾಜ್ಯ ಸಚಿವರಾಗಿರುವ ಪ್ರಧಾನ ಆರೋಪಿಯನ್ನು ಪೋಷಿಸುತ್ತಿದ್ದಾರೆ.ಸರ್ಕಾರವು ಈಗ ಮೌನವನ್ನು ವಹಿಸುತ್ತಿದೆ ಎಂದು ಪ್ರಧಾನ್ ಆರೋಪಿಸಿದ್ದಾರೆ.
ಪ್ರಧಾನ್ ಆರೋಪಕ್ಕೆ ಬಿಜು ಜನತಾ ದಳ ತಿರುಗೇಟು ನೀಡಿದ್ದು, ಉತ್ತರ ಪ್ರದೇಶದಲ್ಲಿ ರೈತರ ಹತ್ಯೆ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಜೈಲು ಸೇರಿದ್ದು, ಬಿಜೆಪಿಯಿಂದ ನಾವು ನೈತಿಕತೆಯ ಪಾಠ ಕಲಿಯ ಬೇಕಾಗಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ