ಭಯೋತ್ಪಾದಕ ಚಟುವಟಿಕೆಗೆ ಹಣಕಾಸು ನೆರವು ಕೇಸ್: ಪ್ರತ್ಯೇಕತಾವಾದಿ ಮುಖಂಡ ಶಾ ಮನೆ ಜಪ್ತಿ
ಶಬೀರ್ ಅಹ್ಮದ್ ಶಾ ವಿರುದ್ಧ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ದಾಖಲಿಸಿತ್ತು.
Team Udayavani, Nov 4, 2022, 3:42 PM IST
ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗೆ ಪ್ರಚೋದನೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ವರ್ಗಾವಣೆಯ ತನಿಖೆಯ ಭಾಗವಾಗಿ ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ಮುಖಂಡ ಶಬೀರ್ ಅಹ್ಮದ್ ಶಾನ ಶ್ರೀನಗರದ ಮನೆಯನ್ನು ಜಾರಿ ನಿರ್ದೇಶನಾಲಯ ಶುಕ್ರವಾರ (ನವೆಂಬರ್ 04) ಜಪ್ತಿ ಮಾಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ರೋಗಿಗಳು ತುರ್ತು ಪರಿಸ್ಥಿತಿಯಲ್ಲಿ ಯಾವುದೇ ದಾಖಲೆ ನೀಡಬೇಕಿಲ್ಲ: ಸಚಿವ ಡಾ.ಕೆ.ಸುಧಾಕರ್
ಶ್ರೀನಗರದ ಬಝ್ರುಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬೋಟ್ಶಾ ಕಾಲೋನಿಯ ಸುನಾತ್ ನಗರದಲ್ಲಿರುವ ಈ ಮನೆ 21.80 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.
2017ರಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಶಬೀರ್ ಅಹ್ಮದ್ ಶಾ ವಿರುದ್ಧ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಜಮ್ಮು-ಕಾಶ್ಮೀರ ಕಣಿವೆ ಪ್ರದೇಶದಲ್ಲಿನ ಮೆರವಣಿಗೆ, ಬಂದ್, ಹರತಾಳ ಮತ್ತು ಕಲ್ಲು ತೂರಾಟ ಸೇರಿದಂತೆ ಗಲಭೆಗೆ ಕುಮ್ಮಕ್ಕು ನೀಡು ಕಾರ್ಯದಲ್ಲಿ ಶಬೀರ್ ಅಹ್ಮದ್ ಶಾ ಶಾಮೀಲಾಗಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ.
ಶಬೀರ್ ಅಹ್ಮದ್ ಶಾ ಹಿಜ್ಬುಲ್ ಮುಜಾಹಿದೀನ್ ಸೇರಿದಂತೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಂದ ಹಣಕಾಸು ಪಡೆದಿದ್ದು, ಈ ಹಣವನ್ನು ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಉಗ್ರಗಾಮಿ ಚಟುವಟಿಕೆಗೆ ಬೆಂಬಲ ನೀಡಲು ಬಳಸಿರುವುದಾಗಿ ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?