ಜಮ್ಮು-ಕಾಶ್ಮೀರ: ಉಗ್ರರಿಗೆ ಸ್ಫೋಟಕ, ಶಸ್ತ್ರಾಸ್ತ್ರ ಸರಬರಾಜು- ಓರ್ವ ಸಹಚರನ ಬಂಧನ
ಬ್ಯಾಗ್ ನಲ್ಲಿ 1.2 ಕೆಜಿ ತೂಕದಷ್ಟು ಸ್ಫೋಟಕ ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
Team Udayavani, Jul 8, 2021, 2:50 PM IST
ಜಮ್ಮು-ಕಾಶ್ಮೀರ್: ಉಗ್ರಗಾಮಿ ಸಂಘಟನೆಯ ಸಹಚರನೊಬ್ಬನನ್ನು ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಗುರುವಾರ (ಜುಲೈ 08) ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಈತನನ್ನು ಚೆಕ್ ಸಾರಿ ಸಿಂಗ್ ಪೊರಾ ಪಟ್ಟನ್ ನಿವಾಸಿ ಮೊಹಮ್ಮದ್ ಅಶ್ರಫ್ ದಾರ್ ಪುತ್ರ ಡ್ಯಾನಿಶ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕೆಆರ್ ಎಸ್ ಜಲಾಶಯದಲ್ಲಿ ಬಿರುಕು ವಿಚಾರ ಕೇವಲ ಊಹಾಪೋಹ: ಸಚಿವ ನಿರಾಣಿ
ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ, ಅರ್ಚಂದ್ ಹಾಮಾ ಮಗಂ ಸಮೀಪದ ರೈಲ್ವೆ ಕ್ರಾಸಿಂಗ್ ಬಳಿ ತಪಾಸಣೆ ನಡೆಸುತ್ತಿದ್ದಾಗ, ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಚೀಲವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ತಡೆದಿದ್ದರು, ಈ ಸಂದರ್ಭದಲ್ಲಿ ಆತ ಪರಾರಿಯಾಗಲು ಯತ್ನಿಸಿದಾಗ ಬಂಧಿಸಿರುವುದಾಗಿ ತಿಳಿಸಿದ್ದಾರೆ.
ದಾರ್ ನನ್ನು ಬಂಧಿಸಿ ಚೀಲವನ್ನು ಪರಿಶೀಲಿಸಿದಾಗ ಆತನ ಬ್ಯಾಗ್ ನಲ್ಲಿ 1.2 ಕೆಜಿ ತೂಕದಷ್ಟು ಸ್ಫೋಟಕ ಮತ್ತು ಎರಡು ಎಲೆಕ್ಟ್ರಾನಿಕ್ ಡಿಟೋನೇಟರ್ ಅನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಬುಡ್ಗಾಮ್ ನ ವಿವಿಧ ಪ್ರದೇಶದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೊಯ್ಬಾ ಭಯೋತ್ಪಾದಕರಿಗೆ ಸ್ಫೋಟಕ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುವ ಕಾರ್ಯದಲ್ಲಿ ದಾರ್ ತೊಡಗಿಕೊಂಡಿರುವುದಾಗಿ ಪ್ರಾಥಮಿಕ ತನಿಖೆ ವೇಳೆ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏರ್ ಇಂಡಿಯಾ ವಿಮಾನದ ಎಂಜಿನ್ ಸ್ಥಗಿತ !: ಮುಂಬೈಯಲ್ಲಿ ತುರ್ತು ಭೂಸ್ಪರ್ಶ
ಹಲ್ಲೆ ಪ್ರಕರಣ: ಶರಣಾಗಲು 2 ವಾರಗಳ ಕಾಲಾವಕಾಶ ಕೊಡಿ: ಸುಪ್ರೀಂಕೋರ್ಟ್ ಗೆ ಸಿಧು
ತಮಿಳುನಾಡು: ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ..!
ಜಮ್ಮುವಿನ ಹೆದ್ದಾರಿಯಲ್ಲಿ ಸುರಂಗ ಕುಸಿತ : 9 ಮಂದಿ ಅವಶೇಷಗಳ ಅಡಿ ; ರಕ್ಷಣಾ ಕಾರ್ಯ
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
MUST WATCH
ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?
ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ
ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!
ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..
ಹೊಸ ಸೇರ್ಪಡೆ
ಏರ್ ಇಂಡಿಯಾ ವಿಮಾನದ ಎಂಜಿನ್ ಸ್ಥಗಿತ !: ಮುಂಬೈಯಲ್ಲಿ ತುರ್ತು ಭೂಸ್ಪರ್ಶ
ಹೆಬ್ರಿ : ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಕ ನಿತ್ಯಾನಂದ ಶೆಟ್ಟಿ ಆಯ್ಕೆ
ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಸಾಕ್ಷರತೆ ಅಗತ್ಯ
ಸುರಿಯುವ ಮಳೆಯಲ್ಲೇ ಪೌರಕಾರ್ಮಿಕರ ಪೊರಕೆ ಪ್ರತಿಭಟನೆ
ಕಾಪು : ಪೊಲಿಪುವಿನಲ್ಲಿ ಕಡಲ್ಕೊರೆತ ಭೀತಿ, ಕಾಮಗಾರಿ ವಿಳಂಬ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ