ನಾನು ಗವರ್ನರ್ ಆಗಿದ್ದಾಗ ಉಗ್ರರು ಶ್ರೀನಗರದ ಒಳಗೆ ನುಸುಳಿಲ್ಲ: ಸತ್ಯಪಾಲ್ ಮಲಿಕ್
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ಕಲಂ ಅನ್ನು ರದ್ದುಗೊಳಿಸಿತ್ತು.
Team Udayavani, Oct 18, 2021, 5:14 PM IST
ರಾಜಸ್ಥಾನ್: ನಾನು ಜಮ್ಮು-ಕಾಶ್ಮೀರದ ರಾಜ್ಯಪಾಲನಾಗಿದ್ದ ಸಂದರ್ಭದಲ್ಲಿ ಶ್ರೀನಗರದ 50ರಿಂದ 100 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಉಗ್ರರು ಒಳನುಸುಳಿರಲಿಲ್ಲ. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸೋಮವಾರ(ಅಕ್ಟೋಬರ್ 18) ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ನಾನು ಗವರ್ನರ್ ಆಗಿದ್ದ ಅವಧಿಯಲ್ಲಿ ಉಗ್ರರು ಶ್ರೀನಗರದ 100 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಪ್ರವೇಶಿಸಿರಲಿಲ್ಲ. ಆದರೆ ಈಗ ಶ್ರೀನಗರದಲ್ಲಿ ಉಗ್ರರು ಅಮಾಯಕರ ಹತ್ಯೆಗೈಯುತ್ತಿದ್ದಾರೆ. ಇದು ನಿಜಕ್ಕೂ ದುಃಖದ ವಿಚಾರವಾಗಿದೆ ಎಂದು ಮಲಿಕ್ ಹೇಳಿದರು.
ಸತ್ಯಪಾಲ್ ಮಲಿಕ್ 2018ರ ಆಗಸ್ಟ್ ನಿಂದ 2019ರ ಅಕ್ಟೋಬರ್ ವರೆಗೆ ಜಮ್ಮು-ಕಾಶ್ಮೀರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. ಮಲಿಕ್ ರಾಜ್ಯಪಾಲರಾಗಿದ್ದ ಅವಧಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ಕಲಂ ಅನ್ನು ರದ್ದುಗೊಳಿಸಿತ್ತು. ಬಳಿಕ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು.
ಸತ್ಯಪಾಲ್ ಮಲಿಕ್ ಅವರು 2019ರ ಆಗಸ್ಟ್ ನಿಂದ 2020ರ ಆಗಸ್ಟ್ 18ರವರೆಗೆ ಗೋವಾದ ರಾಜ್ಯಪಾಲರಾಗಿದ್ದರು. ನಂತರ 2020ರ ಆಗಸ್ಟ್ 20ರಂದು ಮೇಘಾಲಯದ ಗವರ್ನರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
MUST WATCH
ಹೊಸ ಸೇರ್ಪಡೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ