ಟೆಸ್ಟ್‌ ರ‍್ಯಾಂಕಿಂಗ್‌: ದ್ವಿತೀಯ ಸ್ಥಾನದಲ್ಲಿ ವಿಲಿಯಮ್ಸನ್‌

ಏಕದಿನ: ಬೌಲಿಂಗ್‌ನಲ್ಲಿ 3ನೇ ಸ್ಥಾನಕ್ಕೆ ಇಳಿದ ವೇಗಿ ಮೊಹಮ್ಮದ್‌ ಸಿರಾಜ್‌

Team Udayavani, Mar 24, 2023, 7:02 AM IST

williomson

ದುಬೈ: ಶ್ರೀಲಂಕಾ ವಿರುದ್ಧ ನಡೆದ ದ್ವಿತೀಯ ಟೆಸ್ಟ್‌ನಲ್ಲಿ 215 ರನ್‌ ಗಳಿಸಿದ್ದ ನ್ಯೂಜಿಲೆಂಡಿನ ಕೇನ್‌ ವಿಲಿಯಮ್ಸನ್‌ ಅವರು ನೂತನ ಐಸಿಸಿ ರ್‍ಯಾಂಕಿಂಗ್‌ನ ಟೆಸ್ಟ್‌ ಬ್ಯಾಟರ್‌ ಪಟ್ಟಿಯಲ್ಲಿ ನಾಲ್ಕು ಸ್ಥಾನ ಮೇಲಕ್ಕೇರಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಳೆದ ಜನವರಿಯಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಆಡದಿದ್ದರೂ ಜೋಶ್‌ ಹೇಝಲ್‌ವುಡ್‌ ಅವರು ಏಕದಿನ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್‌ ಪಡೆದಿದ್ದ ಮೊಹಮ್ಮದ್‌ ಸಿರಾಜ್‌ ಮೂರನೇ ಸ್ಥಾನಕ್ಕೆ ಜಾರಿದ್ದಾರೆ. 2022ರ ಸೆಪ್ಟೆಂಬರ್‌ನಲ್ಲಿ ಈ ಹಿಂದಿನ ಏಕದಿನ ಆಡಿದ್ದ ಟ್ರೆಂಟ್‌ ಬೌಲ್ಟ್ ದ್ವಿತೀಯ ಸ್ಥಾನದಲ್ಲಿದ್ದಾರೆ.

ಕೇನ್‌ ವಿಲಿಯಮ್ಸನ್‌ ಶ್ರೀಲಂಕಾ ವಿರುದ್ಧದ ಮೊದಲ ಮತ್ತು ದ್ವಿತೀಯ ಟೆಸ್ಟ್‌ನಲ್ಲಿ ಅಮೋಘ ನಿರ್ವಹಣೆ ನೀಡಿದ್ದರು. ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ ಕೊನೆಯ ಎಸೆತದಲ್ಲಿ ನಾಟಕೀಯ ಗೆಲುವು ದಾಖಲಿಸಲು ಅವರ ಬ್ಯಾಟಿಂಗ್‌ ವೈಭವ ಕಾರಣವಾಗಿತ್ತು. ಅವರ ಅಜೇಯ 121 ರನ್‌ ಸಾಧನೆಯಿಂದ ತಂಡ ಜಯ ಸಾಧಿಸಿತ್ತು. ದ್ವಿತೀಯ ಟೆಸ್ಟ್‌ನಲ್ಲಿ ಅವರ ಉತ್ತಮ ನಿರ್ವಹಣೆಯಿಂದ ನ್ಯೂಜಿಲೆಂಡ್‌ ಇನಿಂಗ್ಸ್‌ ಮತ್ತು 58 ರನ್ನುಗಳಿಂದ ಜಯ ಸಾಧಿಸಿತ್ತು. ಇದರಿಂದಾಗಿ ವಿಲಿಯಮ್ಸನ್‌ ನಾಲ್ಕು ಸ್ಥಾನ ಮೇಲಕ್ಕೇರಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರು ಈ ಹಿಂದೆ ನಂ.1 ಸ್ಥಾನ ಕೂಡ ಪಡೆದಿದ್ದರು.
ಅವರ ಜತೆಗಾರ ಹೆನ್ನಿ ನಿಕೋಲ್ಸ್‌ ಕೂಡ ರ್‍ಯಾಂಕಿಂಗ್‌ನಲ್ಲಿ ಉತ್ತಮ ಸ್ಥಾನ ಪಡೆದಿದ್ದಾರೆ. ಅಜೇಯ 200 ರನ್‌ ಬಾರಿಸಿದ್ದ ಅವರು 20 ಸ್ಥಾನ ಮೇಲಕ್ಕೇರಿ 27ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡಿನ ನಾಯಕ ಟಿಮ್‌ ಸೌದಿ 11ನೇ ಸ್ಥಾನದಲ್ಲಿದ್ದರೆ ಶ್ರೀಲಂಕಾದ ದಿಮುತ್‌ ಕರುಣರತ್ನೆ ಬ್ಯಾಟಿಂಗ್‌ನಲ್ಲಿ 10ನೇ ಸ್ಥಾನ ಪಡೆದಿದ್ದಾರೆ.

ಸಿರಾಜ್‌-ಸ್ಟಾರ್ಕ್‌ ಜಂಟಿ 3ನೇ ಸ್ಥಾನ: ಇನ್ನು ಬೌಲಿಂಗ್‌ ವಿಭಾಗದ ಏಕದಿನ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಜಾರಿರುವ ಮೊಹಮ್ಮದ್‌ ಸಿರಾಜ್‌, ಇದೀಗ ಮಿಚೆಲ್‌ ಸ್ಟಾರ್ಕ್‌ ಜತೆ ಜಂಟಿಯಾಗಿ 3ನೇ ಸ್ಥಾನ ಹಂಚಿಕೊಂಡಿದ್ದಾರೆ. ಏಕದಿನ ಸರಣಿಯಲ್ಲಿ 53ಕ್ಕೆ 5 ಮತ್ತು 49ಕ್ಕೆ 3 ವಿಕೆಟ್‌ ಕಿತ್ತ ಸಾಧನೆ ಮಾಡತಿದ ಸ್ಟಾರ್ಕ್‌ ತನ್ನ ಸ್ಥಾನವನ್ನು ಉತ್ತಮಪಡಿಸಿಕೊಂಡು ಸಿರಾಜ್‌ಗೆ ಪೈಪೋಟಿ ನೀಡಿದ್ದಾರೆ.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.