Thailand Open Badminton: ಕಿರಣ್‌ ಜಾರ್ಜ್‌ ಜಬರ್ದಸ್ತ್ ಗೆಲುವು


Team Udayavani, Jun 1, 2023, 6:10 AM IST

KIRAN GEORGE

ಬ್ಯಾಂಕಾಕ್‌: ಭಾರತದ ಕಿರಣ್‌ ಜಾರ್ಜ್‌ “ಥಾಯ್ಲೆಂಡ್‌ ಓಪನ್‌ ಸೂಪರ್‌-500 ಬ್ಯಾಡ್ಮಿಂಟನ್‌’ ಪಂದ್ಯಾವಳಿಯಲ್ಲಿ ಜಬರ್ದಸ್ತ್ ಗೆಲುವೊಂದನ್ನು ಸಾಧಿಸಿ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಬುಧವಾರದ ಪುರುಷರ ಸಿಂಗಲ್ಸ್‌ ಮೊದಲ ಸುತ್ತಿನ ಪಂದ್ಯದಲ್ಲಿ ಅವರು ವಿಶ್ವದ 9ನೇ ರ್‍ಯಾಂಕಿಂಗ್‌ ಆಟಗಾರ, ಚೀನದ ನಂ.1 ಶಟ್ಲರ್‌ ಶಿ ಯುಕಿಗೆ 21-18, 22-20ರಿಂದ ಆಘಾತವಿಕ್ಕಿದರು.

ಪ್ರಕಾಶ್‌ ಪಡುಕೋಣೆ ಅಕಾಡೆಮಿಯ ಸದಸ್ಯರೂ, ಒಡಿಶಾ ಓಪನ್‌ ಚಾಂಪಿಯನ್‌ ಕೂಡ ಆಗಿರುವ ಕಿರಣ್‌ ಜಾರ್ಜ್‌ ಅವರ ಬ್ಯಾಡ್ಮಿಂಟನ್‌ ಬಾಳ್ವೆಯ ದೊಡ್ಡ ಗೆಲುವು ಇದಾಗಿದೆ. ಕೂಟದಲ್ಲಿ 3ನೇ ಶ್ರೇಯಾಂಕ ಹೊಂದಿರುವ ಶಿ ಯುಕಿ 2018ರ ವಿಶ್ವ ಚಾಂಪಿಯನ್‌ಶಿಪ್‌ ಬೆಳ್ಳಿ ಪದಕ ವಿಜೇತ ಆಟಗಾರನಾಗಿದ್ದಾರೆ. ಕಿರಣ್‌ ಅವರಿನ್ನು ಚೀನದ ಮತ್ತೋರ್ವ ಆಟಗಾರ ವೆಂಗ್‌ ಹಾಂಗ್‌ ಯಾಂಗ್‌ ಅವರನ್ನು ಎದುರಿಸಬೇಕಿದೆ.

ಅಶ್ಮಿತಾ, ಸೈನಾ ಗೆಲುವು
ವನಿತಾ ಸಿಂಗಲ್ಸ್‌ ಮೊದಲ ಸುತ್ತಿನ ಆರಂಭಿಕ ಪಂದ್ಯಗಳಲ್ಲಿ ಅಶ್ಮಿತಾ ಚಾಲಿಹ, ಸೈನಾ ನೆಹ್ವಾಲ್‌ ಗೆಲುವು ಸಾಧಿಸಿದ್ದಾರೆ. ಅಶ್ಮಿತಾಗೆ ಶರಣಾದವರು ಭಾರತದವರೇ ಆದ ಮಾಳವಿಕಾ ಬನ್ಸೋಡ್‌. ಗೆಲುವಿನ ಅಂತರ 21-17, 21-14. ಸೈನಾ ನೆಹ್ವಾಲ್‌ ಕೆನಡಾದ ವೆನ್‌ ಯು ಜಾಂಗ್‌ ಅವರನ್ನು 21-13, 21-7 ಅಂತರದಿಂದ ಕೆಡವಿದರು.
ಅಶ್ಮಿತಾ ಚಾಲಿಹ ಅವರ ಮುಂದಿನ ಸವಾಲು ಕಠಿನವಾಗಿದ್ದು, ಇಲ್ಲಿ ಅವರು ರಿಯೋ ಒಲಿಂಪಿಕ್ಸ್‌ ಬಂಗಾರ ಪದಕ ವಿಜೇತೆ, ಸ್ಪೇನ್‌ನ ಕ್ಯಾರೊಲಿನಾ ಮರಿನ್‌ ಅವರನ್ನು ಎದುರಿಸಬೇಕಿದೆ. ಸೈನಾ ನೆಹ್ವಾಲ್‌ ಚೀನದ ಹಿ ಬಿಂಗ್‌ ಜಿಯಾವೊ ಅವರನ್ನು ಎದುರಿಸುವ ಸಾಧ್ಯತೆ ಇದೆ.

ಕಿರಣ್‌ ಜಾರ್ಜ್‌ ಹೊರತುಪಡಿಸಿ ಪುರುಷರ ಸಿಂಗಲ್ಸ್‌ ನಲ್ಲಿ ಭಾರತಕ್ಕೆ ಸೋಲಿನ ಸುದ್ದಿಗಳೇ ಎದುರಾಗಿವೆ. ಕೆ. ಶ್ರೀಕಾಂತ್‌, ಬಿ. ಸಾಯಿ ಪ್ರಣೀತ್‌, ಪ್ರಿಯಾಂಶು ರಾಜಾವತ್‌, ಸಮೀರ್‌ ವರ್ಮ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದರು.

ಕೆ. ಶ್ರೀಕಾಂತ್‌ ಅವರನ್ನು ಚೀನದ ವೆಂಗ್‌ ಹಾಂಗ್‌ ಯಾಂಗ್‌ 21-8, 16-21, 21-14ರಿಂದ ಮಣಿಸಿದರು. ವೆಂಗ್‌ ಕಳೆದ ವಾರವಷ್ಟೇ ಮಲೇಷ್ಯಾ ಮಾಸ್ಟರ್ ಟೂರ್ನಿಯ ಫೈನಲ್‌ ಪ್ರವೇಶಿಸಿದ್ದರು. ಬಿ. ಸಾಯಿ ಪ್ರಣೀತ್‌ ಅವರನ್ನು ಫ್ರಾನ್ಸ್‌ನ ಕ್ರಿಸ್ಟೊ ಪೊಪೋವ್‌ 21-14, 21-16 ನೇರ ಗೇಮ್‌ಗಳಲ್ಲಿ ಕೆಡವಿದರು.

ಇತ್ತೀಚೆಗಷ್ಟೇ “ಸ್ಲೊವೇನಿಯನ್‌ ಓಪನ್‌’ ಪ್ರಶಸ್ತಿ ಜಯಿ ಸಿದ ಸಮೀರ್‌ ವರ್ಮ ಅವರನ್ನು ಡೆನ್ಮಾರ್ಕ್‌ನ ಮ್ಯಾಗ್ನಸ್‌ ಜೊಹಾನ್ಸೆನ್‌ 21-15, 21-15ರಿಂದ ಸೋಲಿಸಿದರು. “ಓಲೀìನ್ಸ್‌ ಮಾಸ್ಟರ್’ ಚಾಂಪಿಯನ್‌ ಪ್ರಿಯಾಂಶು ರಾಜಾವತ್‌ ಅವರಿಗೆ ಮಲೇಷ್ಯಾದ ಎನ್‌ಜಿ ಟೆ ಯಾಂಗ್‌ 21-19, 21-10 ಅಂತರದಿಂದ ಆಘಾತವಿಕ್ಕಿದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.