ಜೀವಂತವಾಗಿ ಬಂದಿದ್ದೇನೆ…ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ-ಮೋದಿ;ಪಂಜಾಬ್ ನಲ್ಲಿ ನಡೆದಿದ್ದೇನು?
ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುರುತರವಾದ ಭದ್ರತಾ ಲೋಪವಾಗಿದೆ
Team Udayavani, Jan 5, 2022, 4:16 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ(ಜನವರಿ05) ಪಂಜಾಬ್ ನ ಫಿರೋಜ್ ಪುರದಲ್ಲಿ 42,750 ಕೋಟಿ ರೂ ಮೊತ್ತದ ಬಹುಕೋಟಿ ರೂಪಾಯಿಗಳ ಯೋಜನೆಗಳ ಶಂಕುಸ್ಥಾಪನೆಗೆ ತೆರಳುತ್ತಿದ್ದ ವೇಳೆ ಫ್ಲೈಓವರ್ ಬಳಿಯೇ ಪ್ರಧಾನಿ ಬೆಂಗಾವಲು ಪಡೆ ವಾಹನವನ್ನು ಪ್ರತಿಭಟನಾಕಾರರು ತಡೆದುಬಿಟ್ಟಿದ್ದರು. ಇದರ ಪರಿಣಾಮ ಪ್ರಧಾನಿ ಅವರ ಕಾರು ಸುಮಾರು 15-20 ನಿಮಿಷಗಳ ಕಾಲ ನಿಲ್ಲುವಂತಾಗಿತ್ತು. ಇದೊಂದು ಗಂಭೀರವಾದ ಭದ್ರತಾ ಲೋಪ ಎಂದು ಕೇಂದ್ರ ಗೃಹ ಸಚಿವಾಲಯ ಆರೋಪಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುರುತರವಾದ ಭದ್ರತಾ ಲೋಪವಾಗಿದೆ. ಇದರಿಂದಾಗಿ ಅವರು ಭೇಟಿಯನ್ನು ರದ್ದುಗೊಳಿಸಿ ದೆಹಲಿಗೆ ವಾಪಸ್ ಆಗುತ್ತಿದ್ದಾರೆ ಎಂದು ಗೃಹ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಪಂಜಾಬ್ ಸರ್ಕಾರ ಭದ್ರತೆಯನ್ನು ನಿಯೋಜಿಸಬೇಕಿತ್ತು. ಆದರೆ ಪಂಜಾಬ್ ಸರ್ಕಾರ ಇದಕ್ಕೆ ಹೊಣೆ ಹೊತ್ತು, ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಪ್ರಕಟಣೆಯಲ್ಲಿ ಸೂಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹೆಲಿಕಾಪ್ಟರ್ ನಲ್ಲಿ ತೆರಳಬೇಕಾಗಿತ್ತು, ಆದರೆ ಹವಾಮಾನ ವೈಪರೀತ್ಯದಿಂದಾಗಿ ರಸ್ತೆ ಮಾರ್ಗದಲ್ಲಿ ತೆರಳಲು ನಿರ್ಧರಿಸಿದ್ದರು ಎಂದು ವರದಿ ವಿವರಿಸಿದೆ.
Officials at Bhatinda Airport tell ANI that PM Modi on his return to Bhatinda airport told officials there,“Apne CM ko thanks kehna, ki mein Bhatinda airport tak zinda laut paaya.” pic.twitter.com/GLBAhBhgL6
— ANI (@ANI) January 5, 2022
ಜೀವಂತವಾಗಿ ಬಂದಿದ್ದೇನೆ..ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ: ಮೋದಿ
ಫ್ಲೈಓವರ್ ನಲ್ಲಿ ಪ್ರತಿಭಟನಾಕಾರರು ಬೆಂಗಾವಲು ಪಡೆ ಕಾರನ್ನು ತಡೆದ ಘಟನೆಯಿಂದ ಅಸಮಾಧಾನಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು, ಭಟಿಂಡಾ ಏರ್ ಪೋರ್ಟ್ ನಲ್ಲಿ, ನಾನು ಇಲ್ಲಿಯವರೆಗೆ ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ತಿಳಿಸಿ ಎಂದು ಏರ್ ಪೋರ್ಟ್ ಸಿಬಂದಿ ಬಳಿ ಹೇಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ