ರೈಲಿನಲ್ಲಿ ವ್ಯಕ್ತಿಗೆ ಬೆಂಕಿ ಪ್ರಕರಣ : ಎನ್ಐಎ ಜತೆಗೆ ತನಿಖೆ ಚುರುಕು !
Team Udayavani, Apr 5, 2023, 7:17 AM IST
ತಿರುವನಂತಪುರಂ: ಅಲಪ್ಪುಜ-ಕಣ್ಣೂರು ಎಕ್ಸ್ಪ್ರೆಸ್ ರೈಲಿನಲ್ಲಿ ವ್ಯಕ್ತಿಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಉಗ್ರ ಕೈವಾಡದ ಶಂಕೆ ವ್ಯಕ್ತವಾದ ಬೆನ್ನಲ್ಲೇ, ಕೇರಳ ವಿಶೇಷ ತನಿಖಾ ತಂಡ (ಎಸ್ಐಟಿ), ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಹಾಗೂ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಸೇರಿದಂತೆ ಹಲವು ತನಿಖಾ ಸಂಸ್ಥೆಗಳು ಪ್ರಕರಣದ ತನಿಖೆ ಚುರುಕುಗೊಳಿಸಿವೆ.
ಎನ್ಐಎ ಹಾಗೂ ಆರ್ಪಿಎಫ್ ಅಧಿಕಾರಿಗಳು ಘಟನೆ ನಡೆದ ರೈಲಿನ ಬೋಗಿಗೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಅಲ್ಲದೇ, ಆರೋಪಿಯ ಕುರಿತು ಕೆಲ ಸುಳಿವು ದೊರೆತಿದ್ದು, ಅದನ್ನು ಪರಿಶೀಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಮತ್ತೂಂದೆಡೆ, ಪ್ರಕರಣ ಸಂಬಂಧಿಸಿದಂತೆ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರ ತಂಡ (ಎಟಿಎಸ್) ವಶಕ್ಕೆ ಪಡೆದಿದ್ದ ವ್ಯಕ್ತಿಯನ್ನೂ ಬಿಡುಗಡೆಗೊಳಿಸಲಾಗಿದೆ. ಘಟನಾಸ್ಥಳದಲ್ಲಿ ದೊರೆತ ಬ್ಯಾಗ್ನಲ್ಲಿದ್ದ ಮಾಹಿತಿಯನ್ನು ಆಧರಿಸಿ, ಎಟಿಸಿ ತಂಡವು ಸೋಮವಾರ ರಾತ್ರಿ ಬುಲಂದರ್ಶಹರ್ನ ನಿವಾಸಿ ಶಾರುಖ್ ಸೈಫಿ ಎಂಬಾತನನ್ನು ವಶಕ್ಕೆ ಪಡೆದಿತ್ತು. ಆತನನ್ನು ಮರುದಿನವೂ ವಿಚಾರಣೆ ನಡೆಸಿದ ಬಳಿಕ, ಆತನ ಕೈವಾಡವಿಲ್ಲವೆಂದು ತಿಳಿದು ಬಿಡುಗಡೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ