ದೇಶದ ದುಸ್ಥಿತಿಗೆ ಕೇಂದ್ರದ ದುರಾಡಳಿತ ಕಾರಣ: ಡಿಕೆಶಿ


Team Udayavani, May 30, 2020, 8:37 PM IST

ದೇಶದ ದುಸ್ಥಿತಿಗೆ ಕೇಂದ್ರದ ದುರಾಡಳಿತ ಕಾರಣ: ಡಿಕೆಶಿ

ಬೆಂಗಳೂರು: ದೇಶದ ಈಗಿನ ದುಸ್ಥಿತಿಗೆ ಕೋವಿಡ್-19 ಮಾತ್ರವಲ್ಲ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವವರ ಆಡಳಿತದಲ್ಲಿನ ವೈಫಲ್ಯ, ಕಳಪೆ ನಾಯಕತ್ವ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ನಂತರ ದೇಶ ಕಟ್ಟಲು, ಪ್ರಜಾತಂತ್ರ ವ್ಯವಸ್ಥೆ ಉಳಿಸಿಕೊಳ್ಳಲು ಸಂವಿಧಾನ, ಗಣರಾಜ್ಯ ರಚಿಸಿಕೊಂಡೆವು ಆದರೆ ಇಂದು ಈ ಸಂವಿಧಾನ ಹಾಗೂ ಗಣರಾಜ್ಯ ವ್ಯವಸ್ಥೆಯನ್ನೇ ಬದಲಿಸಲು ಕೇಂದ್ರ ಸರ್ಕಾರ ಮುಂದಾಗುತ್ತಿದೆ ಎಂದು ಆರೋಪಿಸಿದರು.

ದೇಶದ ಆರ್ಥಿಕ ಪರಿಸ್ಥಿತಿ ಪ್ರತಿ ಹಂತದಲ್ಲೂ ಹದಗೆಡುತ್ತಿದೆ. ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದ್ದು, ಪ್ರತಿ ಡಾಲರ್‌ ಗೆ 75.52 ರೂಪಾಯಿಗೆ ತಲುಪಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕುಸಿದರೂ ಕೇಂದ್ರ ಸರ್ಕಾರ ಪೆಟ್ರೊಲ್‌ ಡಿಸೆಲ್‌ ದರ ಕಡಿಮೆ ಮಾಡದೇ ಜನರಿಗೆ ವಂಚನೆ ಮಾಡುತ್ತಿದೆ ಎಂದು ದೂರಿದರು.

ಕೋವಿಡ್-19 ಪೂರ್ವದಲ್ಲಿ ಆರ್ಥಿಕ ಹಿಂಜರಿತದಿಂದಾಗಿ ಜಿಡಿಪಿ ಶೇ.3.1ಕ್ಕೆ ಕುಸಿತ ಕಂಡಿತ್ತು. ಈಗ ಅದು ಮತ್ತಷ್ಟು ಕುಸಿತ ಕಂಡಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ದೇಶದಲ್ಲಿ ಆಟೋಮೊಬೈಲ್‌, ಉತ್ಪಾದನಾ ವಲಯ,, ಕೃಷಿ, ರಿಯಲ್‌ ಎಸ್ಟೇಟ್‌ ನಿರ್ಮಾಣ ಕ್ಷೇತ್ರ ಸೇರಿದಂತೆ ಬಹುತೇಕ ಎಲ್ಲ ವಲಯಗಳೂ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿವೆ.

ಕೇಂದ್ರ ಸರ್ಕಾರದ ಕಳೆದೊಂದು ವರ್ಷದಲ್ಲಿ ಮತೀಯ ದ್ವೇಷಕ್ಕೆ ಕುಮ್ಮಕ್ಕು ನೀಡಿರುವುದೇ ಸಾಧನೆ. ಸಿಎಎ ವಿಚಾರದಿಂದ ಹಿಡಿದು, ಕೋವಿಡ್-19 ವಿಚಾರದವರೆಗೂ ಪ್ರತಿ ಹಂತದಲ್ಲೂ ಒಂದು ಕೋಮು, ಒಂದು ಸಮುದಾಯವನ್ನು ಗುರಿಯಾಗಿಸಿ ಹೇಳಿಕೆ ನೀಡುತ್ತ ದೇಶದ ಜನರಲ್ಲಿ ದ್ವೇಷದ ವಿಷ ಬೀಜ ಬಿತ್ತುತ್ತಿದ್ದಾರೆ. ಭಾರತದಲ್ಲಿ ಭಾರತೀಯನೇ ತನ್ನ ಪೌರತ್ವದ ಬಗ್ಗೆ ಪ್ರಶ್ನೆ ಮಾಡಿಕೊಳ್ಳುವಂತಹ ಸ್ಥಿತಿ ತಂದಿಟ್ಟರು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆಯೇ ಹೊರತು ಅಭಿವೃದ್ಧಿ ರಾಜಕಾರಣವಲ್ಲ. ಜನ ಜಾಗೃತರಾಗುತ್ತಿದ್ದಾರೆ. ಕೇಂದ್ರ ಸರ್ಕಾರ ಕಳೆದ ಒಂದು ವರ್‌ಷದಲ್ಲಿ ಇಂತಹ ಕೀಳು ರಾಜಕಾರಣ ಬಿಟ್ಟು ಬೇರೆ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಘೋಷಣೆ ಮಾಡಿರುವ ಪರಿಹಾರ ಇದುವರೆಗೂ ಯಾರಿಗೂ ತಲುಪಿಲ್ಲ. ಕಾರ್ಮಿಕರು ಅವರ ಊರುಗಳಿಗೆ ಹೋಗಲು ಅನುಕೂಲ ಕಲ್ಪಿಸದೇ ಅವರನ್ನು ಹೀನಾಯವಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಘೋಷಿಸಿರುವ 20 ಲಕ್ಷ ಕೋಟಿಯ ಸುಳ್ಳಿನ ಪ್ಯಾಕೇಜ್‌ ನಿಂದ ದೇಶದ ಜನಸಂಖ್ಯೆಯ ಶೇ. 10ರಷ್ಟು ಜನರಿಗೂ ಸಹಾಯವಾಗುವುದಿಲ್ಲ. ನರೇಗಾಗೈ ಶೇ.10ರಷ್ಟು ಹಣ ನೀಡಿದ್ದು ಬಿಟ್ಟರೆ ಉಳಿದೆಲ್ಲವೂ ಬ್ಯಾಂಕುಗಳಿಂದ ಸಾಲ ನೆರವು ನೀಡುತ್ತಾರಂತೆ. ಯಾವುದಾದರೂ ಬ್ಯಾಂಕ್‌ ಯಾರಿಗಾದರೂ ಸಹಾಯ ಮಾಡಿರುವ ಉದಾಹರಣೆ ಇದೆಯೇ. ಬ್ಯಾಂಕ್‌ ಗಳು ನೆರವು ನೀಡುವುದನ್ನು ಬಿಟ್ಟು ಜನರ ಮೇಲೆ ದೌರ್ಜನ್ಯ ನಡೆಸುತ್ತಿವೆ ಎಂದು ಆರೋಪಿಸಿದರು.

ಬಿಜೆಪಿ ಆಂತರಿಕ ವಿಚಾರ ನಮಗೆ ಬೇಡ
ಕಾಂಗ್ರೆಸ್‌ ಪಕ್ಷದ ನಾಯಕರಾಗಲಿ, ಪದಾಧಿಕಾರಿಗಳಾಗಲಿ ಅಥವಾ ಕಾರ್ಯಕರ್ತರಾಗಲಿ, ಅನ್ಯ ರಾಜಕೀಯ ಪಕ್ಷಗಳ ಆಂತರಿಕ ಬೆಳವಣಿಗೆಗಳ ಬಗ್ಗೆ ಯಾವುದೇ ಹೇಳಿಕೆ ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು. ಈ ವಿಚಾರಗಳ ಬಗ್ಗೆ ಶಾಸಕಾಂಗ ಪಕ್ಷದ ನಾಯಕರು ಅಥವಾ ಪಕ್ಷದ ಅಧ್ಯಕ್ಷನಾಗಿ ನಾನು ಮಾತ್ರ ಮಾತನಾಡುತ್ತೇನೆ. ಸದ್ಯ ಪಕ್ಷವನ್ನು ಮತ್ತಷ್ಟು ಸಂಘಟಿಸುವುದು ಮತ್ತು ಸದೃಢಗೊಳಿಸಬೇಕಿದ್ದು, ಇದು ನಮ್ಮ ಏಕೈಕ ಗುರಿಯಾಗಿರಬೇಕು. ಈ ಗುರಿಸಾಧನೆಯತ್ತ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.