ಅತ್ಯಂತ ಕೆಟ್ಟ ಆಡಳಿತ ನಡೆಸಿದ್ದರಿಂದ ಕಾಂಗ್ರೆಸ್ ಗೆ ಈ ಸ್ಥಿತಿ: ಕಾರಜೋಳ ಲೇವಡಿ
Team Udayavani, Mar 12, 2022, 11:47 AM IST
ಬೆಳಗಾವಿ: ನಮ್ಮದು ಶತಮಾನದ ಇತಿಹಾಸ ಹೊಂದಿರುವ ಮತ್ತು ರಾಷ್ಟ್ರೀಯ ಪಕ್ಷ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಉತ್ತರಪ್ರದೇಶದಲ್ಲಿ ಎರಡು ಸ್ಥಾನ ಗೆಲ್ಲುತ್ತದೆ ಎಂದರೆ ಅದರ ನಾಯಕರಿಗೆ ನಾಚಿಕೆಯಾಗಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಶನಿವಾರ ತೀವ್ರ ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ೬೦ ವರ್ಷಗಳ ಕಾಲ ಕಾಂಗ್ರೆಸ್ ಅತ್ಯಂತ ಕೆಟ್ಟದಾಗಿ ಆಡಳಿತ ನಡೆಸಿದ್ದರಿಂದ ಇಂದು ಅದಕ್ಕೆ ಈ ಕೆಟ್ಟ ಸ್ಥಿತಿ ಬಂದಿದೆ ಎಂದರು. ಕಾಂಗ್ರೆಸ್ ಈಗ ಮುಳುಗುವ ಹಡಗಲ್ಲ. ಇನ್ನು ಸ್ವಲ್ಪವೇ ದಿನದಲ್ಲಿ ಅದು ಮೋಡಕಾ ಬಜಾರ್ ಗೆ ಬಂದು ಬೀಳುತ್ತದೆ. ಅಲ್ಲಿಯೂ ಅದನ್ನು ಯಾರೂ ನೋಡುವುದಿಲ್ಲ ಎಂದು ಲೇವಡಿ ಮಾಡಿದರು.
ಒಂದು ಪಕ್ಷ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವುದು ಸಾಮಾನ್ಯದ ಮಾತಲ್ಲ. ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ, ಗೋವಾದಲ್ಲಿ ಮೂರನೇ ಸಲ ಅಧಿಕಾರಕ್ಕೆ ಬಂದಿದೆ ಎಂದರೆ ಅಲ್ಲಿನ ಜನ ಬಿಜೆಪಿ ಆಡಳಿತ ಹಾಗೂ ಕಾರ್ಯಕ್ರಮ ಮೆಚ್ಚಿದ್ದಾರೆ ಎಂದರ್ಥ. ಕರ್ನಾಟಕದಲ್ಲಿ’ಸಹ ಇದೇ ಇತಿಹಾಸ ನಿರ್ಮಾಣವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್