ಅರೆಭಾಷೆ ಅಕಾಡೆಮಿ ಪ್ರಥಮ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್ ಸಂಪಾಜೆ ನಿಧನ
Team Udayavani, Jan 10, 2022, 3:08 PM IST
ಸುಳ್ಯ: ಸಾಹಿತಿ, ನಾಟಕಕಾರ, ಅರೆಭಾಷೆ ಅಕಾಡೆಮಿ ಪ್ರಥಮ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್ ಸಂಪಾಜೆ (78 ) ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಪತ್ನಿ ಎನ್.ಎಸ್. ದೇವಿಪ್ರಸಾದರು, ಇಬ್ಬರು ಪುತ್ರಿಯರು, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸಂಪಾಜೆ ಜೂನಿಯರ್ ಕಾಲೇಜ್ ಸಂಚಾಲಕರಾಗಿದ್ದ ಅವರು ಸಂಪಾಜೆಯ ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ಥಸರರಾಗಿದ್ದರು. ಕೆಲವು ವರ್ಷಗಳ ಹಿಂದೆ ಸುಳ್ಯದಿಂದ ಮಂಗಳೂರು ವರೆಗೆ ಅಮರಕ್ರಾಂತಿ ಕಾಲ್ನಡಿಗೆ ಜಾಥಾ ಏರ್ಪಡಿಸಿದ್ದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಅವರು ಕೊಡಗು ಪ್ರಜಾ ವೇದಿಕೆಯ ಅಧ್ಯಕ್ಷರಾಗಿ ಕೊಡಗು ಪ್ರತ್ಯೇಕ ರಾಜ್ಯ ಬೇಡಿಕೆಯ ವಿರುದ್ಧ ಹೋರಾಟ ಸಂಘಟಿಸಿದ್ದರು.
ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಸೋಮವಾರ ಅರೆಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾಗಿದ್ದರು.