ಸಿಬಂದಿ ಕೊರತೆಯಿಂದ ಅರಣ್ಯ ಇಲಾಖೆ ಪರದಾಟ

4,562 ಹುದ್ದೆಗಳು ಹಲವು ವರ್ಷಗಳಿಂದ ಖಾಲಿ, 731 ಫಾರೆಸ್ಟ್‌ ಗಾರ್ಡ್‌ ಅಗತ್ಯ

Team Udayavani, Jan 18, 2023, 6:50 AM IST

ಸಿಬಂದಿ ಕೊರತೆಯಿಂದ ಅರಣ್ಯ ಇಲಾಖೆ ಪರದಾಟ

ಬೆಂಗಳೂರು: ವೈವಿಧ್ಯ ಮಯ ಸಸ್ಯ ಪ್ರಭೇದ ಹೊಂದಿರುವ ಕರ್ನಾಟಕದ ಅರಣ್ಯ ಸಂಪತ್ತನ್ನು ಸಂರಕ್ಷಿಸಲು ಅರಣ್ಯ ಇಲಾಖೆಗೆ ಸಿಬಂದಿ ಕೊರತೆ ಎದುರಾಗಿದೆ. ರಾಜ್ಯದ ಅರಣ್ಯ ಇಲಾಖೆಯಲ್ಲಿ ಬರೊಬ್ಬರಿ 4,562 ಹುದ್ದೆಗಳು ಹಲವು ವರ್ಷಗಳಿಂದ ಖಾಲಿ ಬಿದ್ದಿವೆ.

ಹೌದು, ಶ್ರೀಗಂದಧ ಗುಡಿ ಎಂದೇ ವಿಶ್ವಭೂಪಟದಲ್ಲಿ ಗುರುತಿಸಿ ಕೊಂಡಿರುವ ಕರುನಾಡಿನ ಅರಣ್ಯ ಸಂಪತ್ತು ನಿರ್ವಹಣೆಗೆ ಅಗತ್ಯ ಸಿಬಂದಿ ಇಲ್ಲದೇ ಪರದಾಡುವ ಸ್ಥಿತಿ ಎದುರಾಗಿದೆ. ಇಲಾಖೆಯಲ್ಲಿನ ಸಿಬಂದಿ ಕೊರತೆಯು ವಿವಿಧ ಮೂಲಗಳಿಂದ ವನ್ಯಜೀವಿ ಮತ್ತು ಅರಣ್ಯ ಸಂಪತ್ತು ನಾಶಕ್ಕೆ ಕಾರಣವಾ ಗಿದೆ. ಕಾಡನ್ನು ಕಾಳಜಿಯಿಂದ ನೋಡಿಕೊಳ್ಳುವ ಜವಾಬ್ದಾರಿ ಹೊತ್ತುಕೊಂಡಿ ರುವ 731 ಅರಣ್ಯ ರಕ್ಷಕ (ಫಾರೆಸ್ಟ್‌ ಗಾರ್ಡ್‌) ಹುದ್ದೆಗಳು ಕಳೆದ 3 ವರ್ಷಗಳಿಂದ ಭರ್ತಿಯಾಗಿಲ್ಲ.

ಕಾಡುಗಳಿಗೆ ಮಾರಕವಾಗುವ ಯಾವುದೇ ಪ್ರಕರಣ ನಡೆದರೂ ಅದನ್ನು ಪರಿಹರಿಸಲೆಂದೇ ಸೃಷ್ಟಿಸಿರುವ 403 ಅರಣ್ಯ ವೀಕ್ಷಕರ ಕೊರತೆಯಿದೆ. ಅರಣ್ಯ ಇಲಾಖೆಯ ಸಂಪೂರ್ಣ ಹೊಣೆ ಹೊತ್ತಿರುವ 52 ಐಎಫ್ಎಸ್‌ ಕುರ್ಚಿಗಳು ಖಾಲಿ ಇವೆ. ಉಪ ವಲಯ ಅರಣ್ಯಾಧಿಕಾರಿ 133, ರಾಜ್ಯ ಅರಣ್ಯ ಸೇವೆಯಲ್ಲಿ 78, ವಲಯ ಅರಣ್ಯ ಅಧಿಕಾರಿ 96, ಮಾವುತರು 42, ಆನೆ ಕಾವಡಿಗ 66 ಹಾಗೂ 108 ಚಾಲಕ ಹುದ್ದೆಗಳಿಗೆ ನೇಮಕಾತಿಯೇ ನಡೆದಿಲ್ಲ. ಕಾಡಂಚಿನಲ್ಲಿ ಕಾರ್ಯಾಚರಣೆ ನಡೆಸುವ 1,751ಕ್ಕೂ ಅಧಿಕ ಸಿಬಂದಿಯ ಅಗತ್ಯವಿದೆ. ಇನ್ನು ಇಲಾಖೆಯ ಮಂತ್ರಿ ಮಂಡಲದಲ್ಲಿ 753 ಹುದ್ದೆಗಳಿಗೆ ನೇಮಕಾತಿ ಭಾಗ್ಯ ದೊರೆತಿಲ್ಲ. ಒಟ್ಟಾರೆ ಅರಣ್ಯ ಇಲಾಖೆಗೆ ಮಂಜೂರಾಗಿರುವ 12,320 ಹುದ್ದೆಗಳ ಪೈಕಿ ಬಾಕಿ ಇರುವ 4,562 ಹುದ್ದೆಗೆ ತುರ್ತಾಗಿ ಸಿಬಂದಿ ನೇಮಿಸುವ ಅಗತ್ಯತೆ ಉದ್ಬವಿಸಿದೆ. ಮತ್ತೂಂದೆಡೆ ಅರಣ್ಯ ಇಲಾಖೆಗೆ ಸಿಬಂದಿ ನೇಮಿಸಿದ ಬೆನ್ನಲ್ಲೇ ಅವರಿಗೆ ತರಬೇತಿ ನೀಡಲಾಗುತ್ತದೆ. ರಾಜ್ಯದಲ್ಲಿ ಅರಣ್ಯ ಸಿಬಂದಿಗೆ ತರಬೇತಿ ನೀಡುವ ಕೇಂದ್ರದ ಕೊರತೆಯೂ ಇದೆ.

ಶೇ. 60ರಷ್ಟು ಭಾಗ
ಪಶ್ಚಿಮ ಘಟ್ಟದ ಪಾಲು
ಕರ್ನಾಟಕವು 1,91,791 ಚದರ ಕಿ.ಮೀ. ಭೂಭಾಗ ಹೊಂದಿದ್ದು, ಈ ಪೈಕಿ 38,724 ಚ.ಕಿ.ಮೀ. ಅರಣ್ಯ ಪ್ರದೇಶಗಳಿವೆ. ರಾಜ್ಯದ ಶೇ.60ರಷ್ಟು ಅರಣ್ಯಗಳು ಪಶ್ಚಿಮ ಘಟ್ಟದ ಪ್ರದೇಶಗಳಲ್ಲಿವೆ. ಉಳಿದ ಕಾಡುಗಳು ಪೂರ್ವ ಬಯಲು ಪ್ರದೇಶದಲ್ಲಿವೆ. ಇವು ವ್ಯಾಪ್ತಿಯಲ್ಲಿ ಸೀಮಿತವಾಗಿದ್ದರೂ ಔಷಧೀಯ ಸಸ್ಯ ಪ್ರಭೇದಗಳ ವೈವಿಧ್ಯತೆ ಹೊಂದಿವೆ. ಈ ವರೆಗೆ ಕರ್ನಾಟಕದಲ್ಲಿ ಸುಮಾರು 4,700 ಪ್ರಭೇದದ ಹೂ ಬಿಡುವ ಸಸ್ಯ ಗುರುತಿಸಲಾಗಿದೆ. ಇನ್ನು ರಾಜ್ಯದ ಜೀವನಾಡಿಯಾಗಿರುವ ಎಲ್ಲಾ ನದಿಗಳು ಪಶ್ಚಿಮಘಟ್ಟಗಳ ಕಾಡುಗಳಲ್ಲಿ ಉಗಮವಾಗುತ್ತವೆ. ಕರ್ನಾಟಕ ಅರಣ್ಯಗಳು ವನ್ಯಜೀವಿಗಳಿಂದಾಗಿ ಸಮೃದ್ಧವಾ ಗಿದ್ದು, ಭಾರತದ ಶೇ.25ರಷ್ಟು ಆನೆ ಸಂತತಿ ಹಾಗೂ ಶೇ. 18 ರಷ್ಟು ಹುಲಿ ಸಂತತಿ ಹೊಂದಿದೆ. 5 ರಾಷ್ಟ್ರೀಯ ಉದ್ಯಾನವನಗಳು, 30 ವನ್ಯಜೀವಿ ಅಭಯಾರಣ್ಯಗಳು ಹಾಗೂ 16 ಸಂರಕ್ಷಿತ ಮೀಸಲುಗಳನ್ನು ಒಳಗೊಂಡಂತೆ ರಾಜ್ಯದ ಶೇ. 25 ಅರಣ್ಯ ಪ್ರದೇಶ ವನ್ಯಜೀವಿ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ಮೀಸಲಿಡಲಾಗಿದೆ.

ಸಿಬಂದಿ ಕೊರತೆಯಿಂದ ತೊಡಕೇನು?
ಅರಣ್ಯ ಸಿಬಂದಿ ಕೊರತೆಯು ಟಿಂಬರ್‌ ಮಾಫಿಯಾ, ಕಾಡು ಪ್ರಾಣಿಗಳ ಬೇಟೆಗಾರರಿಗೆ ವರದಾನವಾದರೆ, ಸೂಕ್ತ ನಿರ್ವಹಣೆ ಇಲ್ಲದೇ ಕೆಲ ಕಾಡುಗಳು ಅವಸಾನದ ಅಂಚಿನತ್ತ ಸಾಗುತ್ತಿವೆ. ರಾಜ್ಯದ ದಟ್ಟ ಅಡವಿಯಲ್ಲಿರುವ ಬೆಲೆ ಬಾಳುವ ಶ್ರೀಗಂಧ, ರಕ್ತಚಂದನ, ತೇಗ, ಹೊನ್ನೆ, ಬೀಟೆ ಸೇರಿದಂತೆ ಸಂಪದ್ಭರಿತ ಮರಗಳು ಮಾಯವಾಗುತ್ತಿವೆ. ಕಾಡಂಚಿನ ಸಾವಿರಾರು ಎಕರೆ ಪ್ರದೇಶಗಳು ಈಗಾಗಲೇ ಒತ್ತುವರಿಯಾಗಿವೆ. ಜತೆಗೆ, ಕಾಡ್ಗಿಚ್ಚು, ಕಾಡು ಪ್ರಾಣಿಗಳ ಬೇಟೆಗಳ ನಿಯಂತ್ರಣ, ಸೂಕ್ಷ್ಮ ಅರಣ್ಯ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ವಿಫ‌ಲವಾಗಿದೆ.

ಅರಣ್ಯ ಇಲಾಖೆಯ ಖಾಲಿ ಇರುವ ಅಗತ್ಯ ಹುದ್ದೆ ಭರ್ತಿ ಮಾಡುವ ನಿಟ್ಟಿನಲ್ಲಿ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಕೆಲವು ಸಿಬಂದಿ ನೇಮಿಸಲು ಕ್ರಮ ಕೈಗೊಳ್ಳಲಾಗಿದೆ. ಹೊಸದಾಗಿ ಸಿಬಂದಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
– ಜಾವೆದ್‌ ಅಖ್ತರ್‌, ಅಪರ ಮುಖ್ಯ ಕಾರ್ಯದರ್ಶಿ (ಅರಣ್ಯ), ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ

– ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.