![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Parliament: ಸಂಸತ್ ಗೆ ನುಗ್ಗಿದ ಇಬ್ಬರ ಗುರುತು ಪತ್ತೆ; ಯಾರೀತ ಮೈಸೂರು ಮೂಲದ ಮನೋರಂಜನ್?
Team Udayavani, Dec 13, 2023, 3:30 PM IST
![Parliament: ಸಂಸತ್ ಗೆ ನುಗ್ಗಿದ ಇಬ್ಬರ ಗುರುತು ಪತ್ತೆ; ಯಾರೀತ ಮೈಸೂರು ಮೂಲದ ಮನೋರಂಜನ್?](https://www.udayavani.com/wp-content/uploads/2023/12/Parli-620x349.jpg)
ನವದೆಹಲಿ/ಮೈಸೂರು: ಲೋಕಸಭಾ ಕಲಾಪದ ವೇಳೆ ಸಂಸತ್ ನೊಳಕ್ಕೆ ನುಗ್ಗಿದ ಇಬ್ಬರು ದುಷ್ಕರ್ಮಿಗಳ ಗುರುತು ಪತ್ತೆ ಹಚ್ಚಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಂಸತ್ ಭವನದ ಭದ್ರತಾ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಸಂಸತ್ ನೊಳಕ್ಕೆ ನುಗ್ಗಿದ ಇಬ್ಬರು ಯುವಕರಲ್ಲಿ ಒಬ್ಬಾತ ಮೈಸೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಮನೋರಂಜನ್ ಹಾಗೂ ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ.
ಮನೋರಂಜನ್ ತಂದೆ ಹೇಳೋದೇನು?
ಸಂಸತ್ ಭವನಕ್ಕೆ ನುಗ್ಗಿ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿರುವ ಮನೋರಂಜನ್ ಮನೆಗೆ ಎಸಿಪಿ ಗಜೇಂದ್ರ ಪ್ರಸಾದ್, ವಿಜಯ್ ನಗರ ಇನ್ಸ್ ಪೆಕ್ಟರ್ ಸುರೇಶ್ ಭೇಟಿ ನೀಡಿ ಮನೋರಂಜನ್ ತಂದೆ ದೇವರಾಜೇಗೌಡ ಅವರಿಂದ ಮಾಹಿತಿ ಪಡೆದಿದ್ದಾರೆ.
“ನನ್ನ ಮಗ ಬಿಇ ಓದಿದ್ದು, ದೆಹಲಿ-ಬೆಂಗಳೂರು ಅಂತ ಓಡಾಡುತ್ತಿರುತ್ತಾನೆ. ಆದರೆ ಆತ ಎಲ್ಲಿದ್ದಾನೆ, ಏನು ಮಾಡುತ್ತಿದ್ದಾನೆ ಎಂಬುದು ಗೊತ್ತಿಲ್ಲ. ಮನೋರಂಜನ್ ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ಆತ 2014ರಲ್ಲಿ ಬಿಇ ಮುಗಿಸಿದ್ದ. ನಾನೊಬ್ಬ ರೈತ, ಆತ ಯಾಕಾಗಿ ಈ ರೀತಿ ಮಾಡಿದ್ದಾನೆ ಎಂಬುದು ಗೊತ್ತಿಲ್ಲ. ಆತ ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಲಿ ಎಂದು ತಂದೆ ಪ್ರತಿಕ್ರಿಯೆ ನೀಡಿದ್ದಾರೆ.
ಭದ್ರತಾ ಲೋಪದ ಪ್ರಕರಣದಲ್ಲಿ ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಹರ್ಯಾಣದ ನೀಲಮ್, ಮಹಾರಾಷ್ಟ್ರದ ಅಮೋಲ್ ಶಿಂಧೆ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಸಂಸತ್ ಗೆ ನುಗ್ಗಿದ ಇಬ್ಬರು ಮೈಸೂರು ಮೂಲದವರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿಯಾಗಿದೆ. ಇಬ್ಬರೂ ಸಂಸದ ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಸಂಸತ್ ವೀಕ್ಷಕರ ಗ್ಯಾಲರಿ ಪಾಸ್ ಪಡೆದಿದ್ದಾರೆನ್ನಲಾಗಿದೆ.
ಭದ್ರತಾ ಲೋಪದ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ:
ಸಂಸತ್ ಭವನಕ್ಕೆ ಇಬ್ಬರು ದುಷ್ಕರ್ಮಿಗಳು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಂಜೆ 4ಗಂಟೆಗೆ ಸರ್ವ ಪಕ್ಷ ಸಭೆಯನ್ನು ಕರೆದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.