ಕುಟುಂಬ ರಾಜಕಾರಣದ ಚಿತ್ರಣ ಸಂಪೂರ್ಣ ಬದಲಾಗಿದೆ: ತೇಜಸ್ವಿ ಸೂರ್ಯ
Team Udayavani, Nov 12, 2021, 4:01 PM IST
ಪಣಜಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ದೇಶದಲ್ಲಿ ಕುಟುಂಬ ರಾಜಕಾರಣದ ಚಿತ್ರ ಕಂಡುಬರುತ್ತಿತ್ತು. ಆದರೆ ಪ್ರಜಾಪ್ರಭುತ್ವದಿಂದಾಗಿ ಸಂಪೂರ್ಣ ಚಿತ್ರಣವೇ ಬದಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ ನುಡಿದರು.
ಪಣಜಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುವ ಸಂಸತ್ನಲ್ಲಿ ಮಾತನಾಡಿ, ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಮಾರ್ಗದರ್ಶನದಲ್ಲಿ ಗೋವಾದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿಯಾಗಿದೆ. ಮುಂದೆಯೂ ಕೂಡ ಯುವಕರ ಸಹಕಾರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.
ಇದನ್ನೂ ಓದಿ:ಲಕ್ಷಾಧಿಪತಿಯ ರಹಸ್ಯಗಳು; 4 ಅವಧಿಗಳ ಸರಳ, ಸುಲಭ ವಾಟ್ಸಪ್ ತರಬೇತಿ ಕಾರ್ಯಾಗಾರ
ಕೌಟುಂಬಿಕ ರಾಜಕಾರಣದ ಅಗತ್ಯವಿಲ್ಲ
ಗೋವಾ ರಾಜ್ಯದಲ್ಲಿ ಕೌಟುಂಬಿಕ ರಾಜಕಾರಣದ ಅಗತ್ಯವಿಲ್ಲ, ಇದರಿಂದಾಗಿ ಯುವಕರು ಭವಿಷ್ಯತ್ತಿನ ನಾಯಕರಾಗಲು ಮುಂದೆಬರಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕರೆ ನೀಡಿದರು.
ರಾಜಕೀಯ ಕ್ಷೇತ್ರದಲ್ಲಿ ಯುವಕರಿಗೆ ಹೆಚ್ಚು ಪ್ರತಿನಿಧಿತ್ವ ಲಭಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರ ನ್ಯೂ ಇಂಡಿಯಾ ಮಿಷನ್ ಸಂಬಂಧಿತ ಉದ್ದೇಶವನ್ನು ಪೂರ್ಣಗೊಳಿಸುವ ಕಾರ್ಯವನ್ನು ಕೇವಲ ಯುವಕರು ಮಾತ್ರ ಮಾಡಲು ಸಾಧ್ಯ. ಸರ್ಕಾರವು ಯುವಕರ ಭವಿಷ್ಯಕ್ಕಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸಿಕೊಡಲು ಪ್ರಯತ್ನ ನಡೆಸುತ್ತದೆ. ಈ ನಿಟ್ಟಿನಲ್ಲಿ ಹಲವು ಯೋಜನೆಗಳು ಕೂಡ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ಸಾವಂತ್ ನುಡಿದರು.
ಈ ಸಂದರ್ಭದಲ್ಲಿ ಮೌಲಾನಾ ಡಾ. ಸಯ್ಯದ್ ಕಲ್ಬೆ ರಿಜ್ವಿ ಮಾತನಾಡಿ, ದೇಶವನ್ನು ಮನಸ್ಸಿನಿಂದ ಪ್ರೀತಿಸಬೇಕು. ಭಾರತ ಮಾತೆ ಹಾಗೂ ನಮ್ಮ ತಾಯಿಯ ಮರ್ಯಾದೆಯನ್ನು ಕೆಳಕ್ಕೆ ಬೀಳುವ ಪರಿಸ್ಥಿತಿ ತಂದುಕೊಳ್ಳಬಾರದು ಎಂದರು.
ಈ ಸಂದರ್ಭದಲ್ಲಿ ಎಂಐಟಿಯ ರಾಹುಲ್ ಕರಾಡ್, ಪದ್ಮವಿಭೂಷಣ ಡಾ. ಸೋನಲ್ ಮಾನಸಿಂಗ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ