ಅಪಾರ ಮಾನವ ಸಂಪನ್ಮೂಲ, ಹಣದ ಅಪವ್ಯಯ ತಡೆ ಸಾಧ್ಯ


Team Udayavani, Mar 19, 2021, 6:35 AM IST

ಅಪಾರ ಮಾನವ ಸಂಪನ್ಮೂಲ, ಹಣದ ಅಪವ್ಯಯ ತಡೆ ಸಾಧ್ಯ

ಏಕಕಾಲದಲ್ಲಿ ಕೇಂದ್ರ  ರಾಜ್ಯ ಚುನಾವಣೆಗಳನ್ನು ನಡೆಸಲು ತಾನು ಸಿದ್ಧವಿರುವುದಾಗಿ ಆಯೋಗವು ಹೇಳಿದೆ. ಇದರಿಂದ ಆರ್ಥಿಕ ನಷ್ಟದ ತಡೆ, ಚುನಾವಣ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ. ಅಭಿವೃದ್ಧಿಪರ ತೀರ್ಮಾನಗಳನ್ನು ಸರಕಾರಗಳು ಕೈಗೊಳ್ಳಲು ಸಾಧ್ಯವಾಗಬಹುದು. ಪದೇ ಪದೆ ಬಂದೆರಗುವ ನೀತಿ ಸಂಹಿತೆ ಭೀತಿಯೂ ಇರುವುದಿಲ್ಲ.

ಈಗ ನಡೆಯುತ್ತಿರುವ ವಿಧಾನಸಭೆಯ ಅಧಿವೇಶನವು ಹೊಸದೊಂದು ವಿಪರ್ಯಾಸಕ್ಕೆ ಸಾಕ್ಷಿಯಾಗಿದೆ. ತಮ್ಮ ವಿಷಯ ಮಂಡನೆಗೆ ಸಭಾಧ್ಯಕ್ಷರು ಅನುಮತಿ ನೀಡುತ್ತಿಲ್ಲ ಎಂದು ವಿಪಕ್ಷಗಳು ಗೋಳಿಡುವುದು ಸಹಜವಾಗಿತ್ತು. ಆದರೆ ಮೊನ್ನೆಯ ಅಧಿವೇಶನ ಇದಕ್ಕೆ ಅಪವಾದದಂತಿತ್ತು. ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು “ಒಂದು ದೇಶ ಒಂದು ಚುನಾವಣೆ’ ಎಂಬ ವಿಷಯದ ಕುರಿತು ವಿಶೇಷ ಚರ್ಚೆಗೆ ಮುನ್ನುಡಿ ಹಾಡಿದ್ದರು. ಜತೆಗೆ ವಿಧಾನಸಭೆಯ ಮೂಲ ಉದ್ದೇಶವೇ ಅಭಿಪ್ರಾಯವನ್ನು ವ್ಯಕ್ತಪಡಿಸುವುದಾಗಿದೆ. ಮುಕ್ತ­ವಾದ ಅವಕಾಶವನ್ನು ನೀಡುತ್ತಿದ್ದೇನೆ, ಸದನದ ಬಾವಿಗಿಳಿದು ಏಕೆ ಆಕ್ರೋಶವನ್ನು ವ್ಯಕ್ತಪಡಿಸದೆ, ಆಸನಗಳಲ್ಲಿ ಕುಳಿತು ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಎಂದರೂ, ಕಾಂಗ್ರೆಸ್‌ ಶಾಸಕರು ಅದನ್ನು ಪುರಸ್ಕರಿಸುವ ಮನಃಸ್ಥಿತಿ ಹೊಂದಿರಲಿಲ್ಲ. ಅವಕಾಶ ನೀಡಿದರೂ ಚರ್ಚಿಸುವುದಿಲ್ಲ, ಬೇರೆ ಯವರು ಚರ್ಚಿಸಲೂ ಬಿಡುವುದಿಲ್ಲ ಎಂಬ ಮೊಂಡುವಾದಕ್ಕೆ ಕಲಾಪ ಬಲಿಯಾಯಿತು.

“ಒಂದು ದೇಶ-ಒಂದು ಚುನಾವಣೆ’ ಎಂಬುದು ಕೇವಲ ಚರ್ಚಾ ವಿಷಯವಲ್ಲ. ಈ ದೇಶದ ಇಂದಿನ ಅಗತ್ಯತೆ ಎಂಬುದನ್ನು ಪ್ರಧಾನಿ ಮೋದಿಯವರು ಒತ್ತಿ ಹೇಳಿದ್ದಾರೆ. ಪ್ರಧಾನಿಗಳು ಕಳೆದ ಸರಕಾರದ ಅವಧಿಯಿಂದಲೂ ಈ ವಿಷಯ ಪ್ರಸ್ತಾವಿಸುತ್ತಿದ್ದಾರೆ. ಹಿಂದಿನ ರಾಷ್ಟ್ರಪತಿಗಳಾಗಿದ್ದ ಪ್ರಣವ್‌ ಮುಖರ್ಜಿ ಹಾಗೂ ಇಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಸಹ ಭಾರತಕ್ಕೆ ಇದು ಆವಶ್ಯಕ ಎಂದಿದ್ದು ಸ್ಮರಣೀಯ. ದೇಶದ ಅಭಿವೃದ್ಧಿ ಪಥದ ಮಾರ್ಗದರ್ಶಕ ಸಂಸ್ಥೆ ಎನಿಸಿಕೊಳ್ಳುವ ನೀತಿ ಆಯೋಗ ಭಾರತ ದೇಶಕ್ಕೆ ಅಭಿವೃದ್ಧಿಯ ದೃಷ್ಟಿಯಿಂದ ಒಂದು ಚುನಾವಣೆ ಎಂಬ ಪರಿಕಲ್ಪನೆ ಆವಶ್ಯಕವಾಗಿದೆ ಎಂದು ಹೇಳುತ್ತಾ, ಕೆಲವು ಮಾರ್ಗದರ್ಶಕ ಸೂತ್ರಗಳನ್ನೂ ನೀಡಿದೆ. ಭಾರತದ ಕಾನೂನು ಆಯೋಗವು ಇದನ್ನು ಪ್ರಶಂಸಿಸಿದೆ. ಸಂಸದೀಯ ಕಮೀಟಿಯೂ ಇದರ ಆವಶ್ಯಕತೆಯನ್ನು ಒತ್ತಿ ಹೇಳಿದೆ.

ಏನಿದು ಒಂದು ದೇಶ-ಒಂದು ಚುನಾವಣೆ ಪರಿಕಲ್ಪನೆ?
ದೇಶದ 28 ರಾಜ್ಯಗಳು 9 ಕೇಂದ್ರಾಡಳಿತ ಪ್ರದೇಶಗಳು ಒಂದೇ ಸಮಯದಲ್ಲಿ ಚುನಾವಣೆಯನ್ನು ಎದುರಿಸುತ್ತಿಲ್ಲ. ಸರಾಸರಿ 2 ತಿಂಗಳುಗಳಲ್ಲಿ ನಾಲ್ಕೆ çದು ರಾಜ್ಯಗಳಲ್ಲಿ ಚುನಾವಣೆಯು ಜರಗುತ್ತಲೇ ಇರುತ್ತವೆ. ಹಾಗಾಗಿ ನೀತಿ ಆಯೋಗವು ಪ್ರಜಾಪ್ರಭುತ್ವ ವ್ಯವಸ್ಥೆ ಸದಾ ಚುನಾವಣ ಗುಂಗಿನಲ್ಲಿರುತ್ತದೆ ಎಂದಿದೆ. 1952ರಿಂದ ಪ್ರಾರಂಭವಾದ ಸಾರ್ವತ್ರಿಕ ಚುನಾವಣೆಗಳು 1967ರ ವರೆಗೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ ಚುನಾವಣೆಗಳನ್ನು ಒಟ್ಟಾಗಿಯೆ ಎದುರಿಸಿದ್ದವು. ಅನಂತರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಿಂದ ಏರು ಪೇರಾದವು. ಇದರ ಪರಿಣಾಮ ಚುನಾವಣ ಆಯೋಗವು ಸದಾ ಚುನಾವಣ ಪ್ರಕ್ರಿಯೆ ಯಲ್ಲಿಯೇ ಇರುವಂತಾಯಿತು. ಪ್ರಜಾಪ್ರಾತಿನಿಧ್ಯ ಕಾಯ್ದೆಯು ವಿಧಾನಸಭೆ ಹಾಗೂ ಸಂಸತ್ತಿನ ಅವಧಿಯ ಅಂತ್ಯಕ್ಕೆ 6 ತಿಂಗಳ ಮುಂಚಿತವಾಗಿ ಚುನಾವಣೆಯನ್ನು ಘೋಷಿಸುವ ಅಧಿಕಾರ ನೀಡಿದೆ. ಹಾಗೆಯೇ ಭಾರತದ ಸಂವಿಧಾನ ಅನುಚ್ಛೇದ 356 ಅವಧಿ ಮುಗಿದಿದ್ದರೂ 6 ತಿಂಗಳ ವರೆಗೆ ಚುನಾವಣೆ ಮುಂದೂಡುವ ಅಧಿಕಾರವನ್ನು ರಾಷ್ಟ್ರಪತಿಗಿದೆ. ಇವೆರೆಡೂ ಅಂಶಗಳನ್ನು ಗಮನಿಸಿದರೆ ಸಮಯದ ಹೊಂದಾಣಿಕೆಯೊಂದಿಗೆ ಏಕಕಾಲದ ಚುನಾವಣೆ ನಡೆಸಲು ಅವಕಾಶವನ್ನು ಕಲ್ಪಿಸಿದಂತಾಗಿದೆ.

“ಒಂದು ದೇಶ-ಒಂದು ಚುನಾವಣೆ’ ಕೇವಲ ಏಕ ಕಾಲದಲ್ಲಿ ಚುನಾವಣೆಯನ್ನು ನಡೆಸುವುದು ಮಾತ್ರವಲ್ಲ. ಕೇಂದ್ರ ಚುನಾವಣ ಆಯೋಗ ಹಾಗೂ ರಾಜ್ಯ ಚುನಾವಣ ಆಯೋಗ­ಳನ್ನು ಬೆಸೆಯುವಂಥದ್ದಾಗಿದೆ. ಈಗಿರುವ ಕಾನೂನಿನನ್ವಯ ಕೇಂದ್ರ ಚುನಾವಣ ಆಯೋಗವು ಸಾರ್ವತ್ರಿಕ ಚುನಾವಣೆಗಳಿ­ಗಾಗಿ ಚುನಾವಣ ಪಟ್ಟಿಯನ್ನು ಸಿದ್ಧಗೊಳಿಸುತ್ತದೆ. ಅವುಗಳನ್ನು ಬೂತ್‌ಗಳೆಂದು ಕರೆಯಲಾಗುತ್ತದೆ. ರಾಜ್ಯ ಚುನಾವಣ ಆಯೋಗವೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗಾಗಿ ಮತದಾರ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಅವುಗಳನ್ನು ವಾರ್ಡ್‌ಗಳೆಂದು ಕರೆಯಲಾಗುತ್ತದೆ. ಒಂದೇ ಮತದಾರರ ಎರಡೆರೆಡು ಪಟ್ಟಿಗಳು ಸಿದ್ಧಗೊಳ್ಳುತ್ತವೆ. ಕೇಂದ್ರ ಆಯೋಗವು ತಯಾರಿಸುವ ಅದೇ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗವು ವಾರ್ಡ್‌ಗಳಾಗಿ ತಯಾರಿಸುವುದಕ್ಕೆ ಅಪಾರ ಪ್ರಮಾಣದ ಹಣ ಹಾಗೂ ಮಾನವ ಸಂಪನ್ಮೂಲ ವ್ಯರ್ಥವಾಗುತ್ತಿದೆ. “ಒಂದು ರಾಷ್ಟ್ರ-ಒಂದು ಚುನಾವಣೆ’ಯನ್ನು ಜಾರಿಗೆ ತರುವುದಕ್ಕಾಗಿ ಭಾರತದ ಸಂವಿಧಾನದ ಕೆಲವು ಅನುಚ್ಛೇದಗಳನ್ನು ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆಯ ಕೆಲವು ಕಲಂಗಳನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಇದರಿಂದ ಮಾನವ ಸಂಪನ್ಮೂಲ ಮತ್ತು ಹಣದ ಅಪವ್ಯಯ ತಪ್ಪಿಸಬಹುದಾಗಿದೆ.

ಭಾರತದಲ್ಲಿ ಅನುಷ್ಠಾನಕ್ಕೆ ತರಲು ಸಾಧ್ಯವೆ?
ರಾಜ್ಯಗಳಲ್ಲಿ ಸರಕಾರಗಳು ವಿಸರ್ಜನೆಗೊಂಡರೆ ಅಥವಾ ಅವಧಿಪೂರ್ವ ಚುನಾವಣೆ ಎದುರಾದರೆ ಅಂಥ ಸಂದರ್ಭ ಹೇಗೆ ಎದುರಿಸುವುದು? ಎಂಬ ಗೊಂದಲಗಳಿಗೆ ನೀತಿ ಆಯೋಗ, ಕಾನೂನು ಆಯೋಗಗಳು ಮಾರ್ಗಸೂಚಿಗಳನ್ನು ನೀಡಿವೆ.
ಗ್ರಾಪಂನಿಂದ ಪಾರ್ಲಿಮೆಂಟಿನ ಎಲ್ಲ ಚುನಾವಣೆಗಳಿಗೂ ಅನ್ವಯವಾಗುವ ಮತದಾರರ ಒಂದೇ ಪಟ್ಟಿಯನ್ನು ತಯಾರಿಸುವುದು. ಸಂವಿಧಾನದ ತಿದ್ದುಪಡಿಯ ಮೂಲಕ ಆಯ್ಕೆಯಾದ ದಿನದಿಂದ ಮುಂದಿನ ಐದು ವರ್ಷಗಳ ಅವಧಿಯವರೆಗೆ ವಿಧಾನಸಭೆ ಅಥವಾ ಸಂಸತ್ತಿನ ಅವಧಿ ಎಂಬುದರ ಬದಲಾಗಿ ಸಂಸತ್ತು ಹಾಗೂ ವಿಧಾನ ಮಂಡಲಗಳ ಅವಧಿಯನ್ನು ನಿಗದಿತ ದಿನಾಂಕದಿಂದ ಐದು ವರ್ಷಗಳವರೆಗೆ ಎಂಬುದಾಗಿ ತಿದ್ದುಪಡಿಗೊಳಿಸಿ ಏಕಕಾಲದಲ್ಲಿ ಕೇಂದ್ರ ಮತ್ತು ರಾಜ್ಯಗಳ ಚುನಾವಣೆಯನ್ನು ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಶಿಫಾರಸು ಮಾಡಿದೆ. ಉದಾಹರಣೆಗೆ ಈಗಿರುವ ಸಂಸತ್ತನ್ನು 17ನೇ ಸಂಸತ್ತು ಎಂದು ಘೋಷಿಸಲಾಗಿದೆ. “ಒಂದು ರಾಷ್ಟ್ರ-ಒಂದು ಚುನಾವಣೆ’ ಜಾರಿಗೆ ಬಂದರೆ ಮುಂದಿನ 18ನೇ ಸಂಸತ್ತಿನ ಅವಧಿ 2024ರಿಂದ 2029ರ ವರೆಗೆ ಎಂದು ನಿರ್ಧರಿತವಾಗುತ್ತದೆ. ಎಲ್ಲ ರಾಜ್ಯಗಳ ವಿಧಾನಮಂಡಲಗಳ ಚುನಾವಣೆಯನ್ನು ಒಂದು ಅಥವಾ ಎರಡು ಹಂತಗಳಲ್ಲಿ ಅವಧಿ ವಿಸ್ತರಣೆ ಅಥವಾ ಅವಧಿ ಪೂರ್ವ ಚುನಾವಣೆಯಾಗಿ ಪರಿಗಣಿಸಿ ಏಕಕಾಲದಲ್ಲಿ ಕೈಗೊಳ್ಳ ಲಾಗುತ್ತದೆ. ಹೀಗೆ ಆಯ್ಕೆಯಾಗುವ ಸಂಸತ್‌ ಹಾಗೂ ವಿಧಾನ ಮಂಡಲಗಳ ಅವಧಿಯು 5 ವರ್ಷಗಳದ್ದಾಗಿರುತ್ತದೆ. ಮಧ್ಯದಲ್ಲಿ ಯಾವುದಾದರೂ ರಾಜ್ಯ ವಿಧಾನಸಭೆ ಅಥವಾ ಪಾರ್ಲಿಮೆಂಟ್‌ ವಿಸರ್ಜನೆಯಾದರೆ ಆಗ ನಡೆಯುವ ಉಪಚುನಾವಣೆಯು ಉಳಿದ ಅವಧಿಯವರೆಗೆ ಮಾತ್ರ ಮೀಸಲಿರಿಸಿ ಚುನಾವಣೆಯನ್ನು ಕೈಗೊಳ್ಳಲಾಗುತ್ತದೆ. ಇಂಥ ಅಂಶ ಶಿಫಾರಸಿನಲ್ಲಿದೆ.

ಏಕಕಾಲದಲ್ಲಿ ಕೇಂದ್ರ ಹಾಗೂ ರಾಜ್ಯ ಚುನಾವಣೆಗಳನ್ನು ನಡೆಸಲು ತಾನು ಸಿದ್ಧವಿರುವುದಾಗಿ ಕೇಂದ್ರ ಚುನಾವಣ ಆಯೋಗವು ಹೇಳಿದೆ. ಇದರಿಂದ ಆರ್ಥಿಕ ನಷ್ಟದ ತಡೆ, ಚುನಾವಣ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ. ಅಭಿವೃದ್ಧಿಪರ ತೀರ್ಮಾನಗಳನ್ನು ಸರಕಾರಗಳು ಕೈಗೊಳ್ಳಲು ಸಾಧ್ಯವಾಗಬಹುದು. ಪದೇ ಪದೆ ಬಂದೆರಗುವ ನೀತಿ ಸಂಹಿತೆ ಭೀತಿಯೂ ಇರುವುದಿಲ್ಲ.

ಈ ಕುರಿತು ಸಾಧಕ ಭಾದಕಗಳ ಬಗ್ಗೆ ಬೆಳಕು ಚೆಲ್ಲಬೇಕಾದ ಪ್ರಮುಖ ವಿಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿರುವುದು ವಿಪರ್ಯಾ ಸವಾಗಿದೆ. ಕರ್ನಾಟಕ ವಿಧಾನಸಭೆಯಲ್ಲಾಗಬೇಕಾದ ಪ್ರಮುಖ ಚರ್ಚೆಯು ರಾಜಕೀಯ ಕಾರಣಕ್ಕಾಗಿ ಹಳಿ ತಪ್ಪಿದುದರಿಂದಾಗಿ ಅದರ ಬಗ್ಗೆ ಜನಾಭಿಪ್ರಾಯವನ್ನು ರೂಪಿಸುವ ಹೊಣೆ ಜನಸಾಮಾನ್ಯರ ಹೆಗಲೇರಿದೆ. ಹಾಗಾಗಿ ಸಾಹಿತಿಗಳ ಗೋಷ್ಠಿಗಳು, ಶಾಲಾ-ಕಾಲೇಜುಗಳಲ್ಲಿ ನಡೆಯುವ ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಗಳು ಮಾಧ್ಯಮಗಳ ಚರ್ಚಾ ವಿಷಯಗಳು ಒಂದು ರಾಷ್ಟ್ರ-ಒಂದು ಚುನಾವಣೆ ಎಂಬ ಪರಿಕಲ್ಪನೆಯ ಕುರಿತು ಅಭಿಪ್ರಾಯಗಳು ವ್ಯಕ್ತವಾಗಲಾರಂಭಿಸಿದರೆ ಆಗ ಹೊಮ್ಮುವ ಪರ ಅಥವಾ ವಿರೋಧಿ ಜನಮತಕ್ಕೆ ನಿಜವಾದ ಮನ್ನಣೆ ದೊರೆಯಲಿದೆ.

– ಪಿ.ರಾಜೀವ್‌ ಶಾಸಕರು, ಕುಡಚಿ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಂಗೇರಿದ ಪ್ರಚಾರ: ಅಸ್ಸಾಂ ಚುನಾವಣಾ ಅಖಾಡದಲ್ಲಿ 264 ಅಭ್ಯರ್ಥಿಗಳು ಕೋಟ್ಯಧಿಪತಿಗಳು

ರಂಗೇರಿದ ಪ್ರಚಾರ: ಅಸ್ಸಾಂ ಚುನಾವಣಾ ಅಖಾಡದಲ್ಲಿ 264 ಅಭ್ಯರ್ಥಿಗಳು ಕೋಟ್ಯಧಿಪತಿಗಳು!

ಒಂದು ರಾಷ್ಟ್ರ; ಒಂದು ಚುನಾವಣೆ; ಬದಲಾವಣೆಗೆ ನಾಂದಿ

ಒಂದು ರಾಷ್ಟ್ರ; ಒಂದು ಚುನಾವಣೆ; ಬದಲಾವಣೆಗೆ ನಾಂದಿ

ರಾಷ್ಟ್ರವನ್ನು ಏಕತೆಯ ತತ್ತ್ವದಲ್ಲಿ ಸಂರಚಿಸುವ ಆಶಯ

ರಾಷ್ಟ್ರವನ್ನು ಏಕತೆಯ ತತ್ತ್ವದಲ್ಲಿ ಸಂರಚಿಸುವ ಆಶಯ

ಪ್ರಜಾಪ್ರಭುತ್ವಕ್ಕೆ ಬಲ ತಂದರೆ ಚುನಾವಣೆಗೂ ಬೆಲೆ

ಪ್ರಜಾಪ್ರಭುತ್ವಕ್ಕೆ ಬಲ ತಂದರೆ ಚುನಾವಣೆಗೂ ಬೆಲೆ

ondu

ರಾಷ್ಟ್ರವ್ಯಾಪಿ ವಿಚಾರ ಮಂಥನ ಅತ್ಯವಶ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.