ಸಂಪೂರ್ಣ ಹದಗೆಟ್ಟ ಕೊರ್ಗಿ-ಶಿರಿಯಾರ ಸಂಪರ್ಕ ರಸ್ತೆ : ವಿಳಂಬಗತಿ ಕಾಮಗಾರಿ ವಿರುದ್ಧ ಆಕ್ರೋಶ


Team Udayavani, Mar 8, 2021, 5:20 AM IST

ಸಂಪೂರ್ಣ ಹದಗೆಟ್ಟ ಕೊರ್ಗಿ-ಶಿರಿಯಾರ ಸಂಪರ್ಕ ರಸ್ತೆ : ವಿಳಂಬಗತಿ ಕಾಮಗಾರಿ ವಿರುದ್ಧ ಆಕ್ರೋಶ

ತೆಕ್ಕಟ್ಟೆ: ತಾಲೂಕಿನ ಕೊರ್ಗಿ ಗ್ರಾ.ಪಂ. ವ್ಯಾಪ್ತಿಯ ಕೊರ್ಗಿ- ಶಿರಿಯಾರ ಗ್ರಾಮೀಣ ಸಂಪರ್ಕ ರಸ್ತೆ ಸಂಪೂರ್ಣ ಡಾಮರು ಎದ್ದು ಹೋಗಿ ಹೊಂಡಗಳದ್ದೇ ಕಾರುಬಾರು. ಇದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಸಮೀಪದ ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ವಾಹನ ಸವಾರರಿಗೆ ಅಡಚಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ರಸ್ತೆ ವಿಸ್ತರಿಸಲು ನೆಲ ಸಮತಟ್ಟಾಗಿಸಿ, ಅಲ್ಲಲ್ಲಿ ಮೋರಿಗಳನ್ನು ನಿರ್ಮಿಸಿ ಒಂದು ವರ್ಷ ಕಳೆದರೂ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯ ನಡೆಯದೆ ಇರುವುದರಿಂದ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಳಂಬಗತಿ ಕಾಮಗಾರಿ ವಿರುದ್ಧ ಪ್ರತಿಭಟಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಕೊರ್ಗಿಯಿಂದ ಶಿರಿಯಾರ ಸಂಪರ್ಕಿ ಸುವ ಸುಮಾರು 5.5 ಕಿ.ಮೀ. ಉದ್ದದ ರಸ್ತೆಯುದ್ದಕ್ಕೂ ಹೊಂಡಗಳಿದ್ದು ರಸ್ತೆಯ ಸ್ಥಿತಿ ಮಾತ್ರ ಹೇಳತೀರದು. ಕಳೆದ ಹಲವು ದಶಕಗಳಿಂದಲೂ ಕೊರ್ಗಿ ಗ್ರಾಮಸ್ಥರ ಕನಸಾಗಿಯೇ ಉಳಿದಿರುವ ಈ ರಸ್ತೆ ಬರೀ ತೇಪೆ ಕಾರ್ಯದಲ್ಲಿಯೇ ತೃಪ್ತಿ ಕಂಡಿದ್ದು, ಈ ಬಾರಿಯಾದರೂ ಸುವ್ಯವಸ್ಥಿತ ರಸ್ತೆ ನಿರ್ಮಾಣವಾಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ.

ಅನುಮೋದನೆ ಸಿಗುವಲ್ಲಿ ವಿಳಂಬ
ಸುಮಾರು 5 ಕೋಟಿ 90 ಲ.ರೂ.ನ ಸುಮಾರು 5.5 ಕಿ.ಮೀ. ವರೆಗೆ ಸಂಪೂರ್ಣ ರಸ್ತೆ ಸಂಪೂರ್ಣ ವಿಸ್ತರಣೆ ಕಾಮಗಾರಿಗೆ ಅನುಮೋದನೆ ಸಿಗುವಲ್ಲಿ ಸ್ವಲ್ಪ ವಿಳಂಬವಾದ ಹಿನ್ನೆಲೆಯಲ್ಲಿ ಕಾಮಗಾರಿ ಮಂದ ಗತಿಯಲ್ಲಿ ಸಾಗಿದೆ. ಮುಂದಿನ ದಿನಗಳಲ್ಲಿ ಕೊರ್ಗಿಯಿಂದ ಶಿರಿಯಾರದವರೆಗೆ ಸುವ್ಯವಸ್ಥಿತವಾದ ರಸ್ತೆ ನಿರ್ಮಾಣವಾಗಬೇಕಾಗಿದೆ. -ಹರ್ಷವರ್ಧನ್‌, ಸಹಾಯಕ ಎಂಜಿನಿಯರ್‌

ಧೂಳುಮಯ ರಸ್ತೆಯಿಂದ ಸಂಚಾರ ದುಸ್ತರ
ಗ್ರಾಮೀಣ ಮುಖ್ಯ ರಸ್ತೆಯ ಅಭಿವೃದ್ಧಿಪಡಿಸುವ ನಿಟ್ಟಿನಿಂದ ಅಲ್ಲಲ್ಲಿ ಮೋರಿಗಳನ್ನು ಅಳವಡಿಸಿ ವರ್ಷಗಳೇ ಕಳೆದರೂ ಕಾಮಗಾರಿ ವೇಗ ಪಡೆಯದೆ ಧೂಳುಮಯ ರಸ್ತೆಯಿಂದಾಗಿ ಸಂಚಾರ ದುಸ್ತರವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಶಾಶ್ವತ ಪರಿಹಾರ ಕಲ್ಪಿಸಬೇಕಾಗಿದೆ .
-ಕೆ.ಎನ್‌.ಚಂದ್ರಶೇಖರ್‌ ಶೆಟ್ಟಿ,, ನಿವೃತ್ತ ಮುಖ್ಯೋಪಾಧ್ಯಾಯರು, ಹೆಸ್ಕಾತ್ತೂರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.