ಹೃದಯಾಘಾತದಿಂದ ಮೃತಪಟ್ಟಿದ್ದ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಉಸಿರಾಟ!
Team Udayavani, Mar 30, 2021, 7:23 PM IST
ಕುಣಿಗಲ್: ಹೃದಯಾಘಾತದಿಂದ ಮೃತಪಟ್ಟಿದ್ದ ವ್ಯಕ್ತಿ ಶವಸಂಸ್ಕಾರದ ವೇಳೆ ಮತ್ತೇ ಉಸಿರಾಡಿದ ಎಂದು ಗ್ರಾಮಸ್ಥರು ಆಸ್ಪತ್ರೆಗೆ ಕರೆತಂದು ತಪಾಸಣೆ ನಡೆಸಿದ ಘಟನೆ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಶೆಟ್ಟಿಹಳ್ಳಿ ಗ್ರಾಮದ ವಾಸಿ ಹನುಮಂತಯ್ಯ(40) ಸೋಮವಾರ ಸಂಬಂಧಿಕರ ಮನೆಗೆ ಹೋಗಿ ರಾತ್ರಿ 9.30 ರ ಸಮಯದಲ್ಲಿ ಕುಣಿಗಲ್ಗೆ ಬಂದಿದ್ದಾರೆ. ಸ್ವಗ್ರಾಮಕ್ಕೆ ತೆರಳಲು ಆಟೋ ಸಿಗದ ಕಾರಣ ನಡೆದುಕೊಂಡು ಹೊರಟಿದ್ದಾರೆ. ಈ ವೇಳೆ ಚಿಕ್ಕಕೆರೆ ಏರಿ ಬಳಿ ಕುಸಿದು ಬಿದ್ದಿದ್ದಾರೆ. ಇಡೀ ರಾತ್ರಿ ರಸ್ತೆ ಬದಿಯಲ್ಲೇ ಹನುಮಂತಯ್ಯ ಬಿದ್ದಿದ್ದಾರೆ. ಬೆಳಗ್ಗಿನ ಜಾವ ಕುಣಿಗಲ್ ಪಟ್ಟಣಕ್ಕೆ ಹೂ ವ್ಯಾಪಾರಕ್ಕೆ ಬರುತ್ತಿದ್ದ ಶೆಟ್ಟಿಹಳ್ಳಿ ಗ್ರಾಮಸ್ಥರು ಗಮನಿಸಿ ಕುಣಿಗಲ್ ಆಸ್ಪತ್ರೆಗೆ ಕರೆ ತಂದಿದ್ದಾರೆ.
ಇದನ್ನೂ ಓದಿ :ಪಶ್ಚಿಮ ಬಂಗಾಳ : ಎರಡನೇ ಹಂತದ ಜಿದ್ದಾಜಿದ್ದಿನ ಚುನಾವಣಾ ಪ್ರಚಾರ ಅಂತ್ಯ
ಈ ವೇಳೆ ವೈದ್ಯರು ಹನುಮಂತಯ್ಯ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ನಂತರ ಶವವನ್ನು ಗ್ರಾಮಕ್ಕೆ ತಂದು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿ, ಶವಕ್ಕೆ ಸ್ನಾನ ಮಾಡಿಸುವಾಗ ಉಸಿರು ಬಿಟ್ಟಂತಾಗಿದೆ. ಇದರಿಂದ ಹನುಮಂತಯ್ಯ ಇನ್ನೂ ಬದುಕಿದ್ದಾನೆ ಎಂದು ಗ್ರಾಮಸ್ಥರು, ಸಂಬಂಧಿಕರು ಕುಣಿಗಲ್ ಎಂಎಂ ಆಸ್ಪತ್ರೆಗೆ ಕರೆ ತಂದಿದ್ದಾರೆ. ಮತ್ತೆ ಪರೀಕ್ಷಿಸಿದ ವೈದ್ಯರು ಹನುಮಂತಯ್ಯ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಹೃದಯದಲ್ಲಿ ಕಟ್ಟಿಕೊಂಡಿದ್ದ ಉಸಿರು ಸ್ನಾನ ಮಾಡಿಸುವಾಗ ಹೊರ ಬಂದಿದೆ ಅಷ್ಟೆ ಎಂದು ತಿಳಿಸಿದ್ದಾರೆ. ನಂತರ ಗ್ರಾಮಸ್ಥರು ಶವಸಂಸ್ಕಾರ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ