ಮೃತ ಬಾಲಕನನ್ನು ಬದುಕಿಸಲು ಉಪ್ಪಿನ ರಾಶಿಯಲ್ಲಿ ಮಲಗಿಸಿದ ಪೋಷಕರು
ನಾಲ್ಕೈದು ಗಂಟೆಗಳ ಕಾಲ ಕಾದು ಕುಳಿತರೂ ಬಾಲಕ ಬದುಕಲಿಲ್ಲ
Team Udayavani, Sep 5, 2022, 7:04 PM IST
ಬಳ್ಳಾರಿ: ನೀರಿನ ಹೊಂಡದಲ್ಲಿ ಈಜಲು ಹೋಗಿ ಮೃತಪಟ್ಟಿದ್ದ ಬಾಲಕನನ್ನು ಉಪ್ಪಿನ ರಾಶಿಯಲ್ಲಿ ಮಲಗಿಸಿದರೆ ಬದುಕುತ್ತಾನಂತೆ……!!! ಇಂತಹದ್ದೊಂದು ಮನಕಲಕುವ ಘಟನೆಯೊಂದು ತಾಲೂಕಿನ ಸಿರಿವಾರ ಗ್ರಾಮದಲ್ಲಿ ಸೋಮವಾರ ನಡೆದಿದ್ದು, ಬದುಕುಳಿಯದ್ದನ್ನು ಅರಿತ ಪೋಷಕರು ಕೊನೆಗೂ ಅಂತ್ಯಸಂಸ್ಕಾರ ಮಾಡಿದ್ದಾರೆ.
ತಾಲೂಕಿನ ಸಿರಿವಾರ ಗ್ರಾಮದ ಸುರೇಶ್ (10) ಮೃತ ಬಾಲಕ. ನೀರಿನ ಹೊಂಡದಲ್ಲಿ ಈಜಾಡಲೆಂದು ಸ್ನೇಹಿತರೊಂದಿಗೆ ತೆರಳಿದ್ದ ಬಾಲಕ ಈಜು ಬಾರದೆ ಹೊಂಡದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೋಷಕರು, ಮೃತಪಟ್ಟವರನ್ನು ಉಪ್ಪಿನ ರಾಶಿಯಲ್ಲಿ ಮಲಗಿಸಿದರೆ ಬದುಕುತ್ತಾರೆಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದ ಸಂದೇಶವನ್ನು ನಂಬಿ, ಕೂಡಲೇ ನಾಲ್ಕೈದು ಚೀಲದಲ್ಲಿ ಉಪ್ಪು ತಂದು ತಲೆಯನ್ನು ಹೊರತುಪಡಿಸಿ ಇಡೀ ಮೃತ ದೇಹವನ್ನು ಉಪ್ಪಿನಲ್ಲಿ ಮುಚ್ಚಿ ಮಲಗಿಸಿದ್ದಾರೆ.
ಸುಮಾರು ನಾಲ್ಕೈದು ಗಂಟೆಗಳ ಕಾಲ ಕಾದು ಕುಳಿತರೂ ಬಾಲಕ ಬದುಕಲಿಲ್ಲ. ಬದುಕುಳಿಯದ್ದನ್ನು ಅರಿತ ಪೋಷಕರು ಕೊನೆಗೂ ಮಗನ ಮೃತ ದೇಹವನ್ನು ಅಂತ್ಯಸಂಸ್ಕಾರ ಮಾಡಿದ್ದಾರೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ. ಉಪ್ಪಿನಲ್ಲಿ ಮೃತದೇಹವನ್ನು ಮಲಗಿಸಿದ್ದ ಫೋಟೊಗಳು ಮಾತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ