ಮೂಲ ಕಾಂಗ್ರೆಸಿಗರ ಸರ್ವನಾಶವೇ ಸಿದ್ದರಾಮೋತ್ಸವದ ಉದ್ದೇಶ: ಬಿಜೆಪಿ ವ್ಯಂಗ್ಯ
ಪಿಸು ಮಾತು ಬಂದಾಗಲೇ ಡಿ.ಕೆ.ಶಿವಕುಮಾರ್ ಎಚ್ಚೆತ್ತುಕೊಳ್ಳಬೇಕಿತ್ತು....
Team Udayavani, Jul 23, 2022, 1:59 PM IST
ಬೆಂಗಳೂರು: ಸಿದ್ದರಾಮಯ್ಯ ಬೆಂಬಲಿಗರ ಸಿದ್ದರಾಮೋತ್ಸವದ ಬಗ್ಗೆ ಬಿಜೆಪಿ ವ್ಯಂಗ್ಯ ಮಾಡಿದ್ದು, ಸರಣಿ ಟ್ವೀಟ್ ಮಾಡಿದೆ.
ಸಿದ್ದರಾಮೋತ್ಸವ ಎನ್ನುವುದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬಣದ ಪೊಲಿಟಿಕಲ್ ಟೂಲ್ ಕಿಟ್!. ಇದೊಂದು ವ್ಯವಸ್ಥಿತವಾದ ರಾಜಕೀಯ ಗುಪ್ತಮಾರ್ಗಸೂಚಿಯ ಭಾಗ, ಮೂಲ ಕಾಂಗ್ರೆಸಿಗರ ಸರ್ವನಾಶವೇ ಇದರ ಉದ್ದೇಶ ಎಂದು ಬರೆದಿದೆ.
ರಾಜಕೀಯ ಚದುರಂಗದಾಟದಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಸಿದ್ದರಾಮೋತ್ಸವ ಏಕಾಏಕಿ ಆಯೋಜನೆಗೊಂಡಿದ್ದಲ್ಲ. ಯಾವ ದಾಳವನ್ನು ಯಾವಾಗ ಯಾರ ಮುಂದೆ ಉರುಳಿಸಬೇಕೆಂಬ ಅನುಭವ ಸಿದ್ದರಾಮಯ್ಯಗಿದೆ. ಸಿದ್ದರಾಮೋತ್ಸವದ ಮೂಲಕ ಮುಂದೆ ಡಿಕೆಶಿ, ಪರಮೇಶ್ವರ್ ಹಾಗೂ ಖರ್ಗೆ ಅವರನ್ನು ಮಕಾಡೆ ಮಲಗಿಸುವ ಉದ್ದೇಶವಿದೆಯೇ? ಎಂದು ಪ್ರಶ್ನಿಸಿದೆ.
ಕೆಪಿಸಿಸಿ ಕಚೇರಿಯಲ್ಲಿ ಪಿಸು ಮಾತು ಬಂದಾಗಲೇ ಡಿ.ಕೆ.ಶಿವಕುಮಾರ್ ಎಚ್ಚೆತ್ತುಕೊಳ್ಳಬೇಕಿತ್ತು. ಸಿದ್ದರಾಮಯ್ಯ ಟೂಲ್ ಕಿಟ್ ಆಟ ಅದಾಗಲೇ ಶುರುವಾಗಿತ್ತು, ಅಮಾಯಕರ ತಲೆದಂಡವಾಯಿತಷ್ಟೇ. ಈಗ ಸಿದ್ದರಾಮಯ್ಯ ಮತ್ತೊಂದು ಸುತ್ತಿನ ಟೂಲ್ಕಿಟ್ ಪ್ರಹಸನ ಆರಂಭಿಸಿದ್ದಾರೆ, ಈ ಬಾರಿ ದೊಡ್ಡ ಬೇಟೆಯಾಡುವುದು ಖಚಿತ! ಎಂದು ಬರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ