ಬಡವರ ಆಹಾರದ ಕಿಟ್ ಇಲಿಗಳ ಪಾಲು; ಅಧಿಕಾರಿಗಳ ವೇತನಕ್ಕೆ ಕತ್ತರಿ !
Team Udayavani, Feb 10, 2021, 10:40 PM IST
ಬೆಂಗಳೂರು: ಬಡವರು ಹಾಗೂ ನಿರ್ಗತಿಕರಿಗೆ ನೀಡಬೇಕಿದ್ದ ಆಹಾರದ ಕಿಟ್ಗಳನ್ನು ಹಂಚದೆ ಆಹಾರದ ಕಿಟ್ಗಳನ್ನು ಇಲಿ ಮತ್ತು ಹೆಗ್ಗಣದ ಪಾಲು ಮಾಡಿದ ಪಾಲಿಕೆಯ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಚುರುಕು ಮುಟ್ಟಿಸಿದ್ದಾರೆ.
ಕೊರೊನಾ ಸೋಂಕಿನಿಂದಾಗಿ ಯಲಹಂಕ ವಲಯದಲ್ಲಿ ಕಂಟೈನ್ಮೆಂಟ್ ಝೋನ್ ಮಾಡಲಾಗಿದ್ದ ಸಂದರ್ಭದಲ್ಲಿ
ಆಹಾರದ ಕಿಟ್ಗಳನ್ನು ಹಂಚಿಕೆ ಮಾಡಲು ಪಾಲಿಕೆ ಮುಂದಾಗಿತ್ತು. ಈ ಹಂತದಲ್ಲಿ ಕಂಟೈನ್ಮೆಂಟ್ ಝೋನ್ ನಲ್ಲಿ 4,300 ಆಹಾರದ ಕಿಟ್ಗಳನ್ನು ನೀಡುವ ಗುರಿ ಇತ್ತು. ಇದರಲ್ಲಿ 1100 ಆಹಾರದ ಕಿಟ್ಗಳನ್ನು ಹಂಚಿಕೆ ಮಾಡಲಾಗಿದೆ. ಉಳಿದ 3,200 ಆಹಾರದ ಕಿಟ್ಗಳಲ್ಲಿ 750 ಕಿಟ್ಗಳು ಇಲಿ ಮತ್ತು ಹೆಗ್ಗಣದ ಪಾಲಾಗಿವೆ. ಈ ಕಿಟ್ಗಳನ್ನು ಯಲಹಂಕ ವಲಯದಲ್ಲಿರುವ ಬಡವರಿಗೆ ಹಂಚಿಕೆ ಮಾಡುವಂತೆ ಕಳೆದ ಮೂರು ತಿಂಗಳ ಹಿಂದೆಯೇ ಆಯುಕ್ತರು ಆದೇಶ ಮಾಡಿದ್ದರೂ ಅಧಿಕಾರಿಗಳು ಕ್ರಮ ವಹಿಸಿಲ್ಲ. ಹೀಗಾಗಿ, ಈ ಪ್ರಕರಣವನ್ನು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎಂದು ಪರಿಗಣಿಸಲಾಗಿದ್ದು, ಅಧಿಕಾರಿಗಳ ವೇತನದಿಂದ ವಸೂಲಿ ಮಾಡಲು ಆಯುಕ್ತರು ಆದೇಶ ಮಾಡಿದ್ದಾರೆ. ತಲಾ ಒಂದು ಆಹಾರದ ಕಿಟ್ಗೆ 500 ರೂ. ನಿಗದಿ ಮಾಡಲಾಗಿದ್ದು, ಹಾಳಾಗಿರುವ 750 ಆಹಾರದ ಕಿಟ್ಗಳಿಗೆ ತಲಾ 500 ರೂ. ನಂತೆ ಒಟ್ಟು 3.75 ಲಕ್ಷ ರೂ. ಮೊತ್ತವನ್ನು 9ಜನ ಸಹಾಯಕ ಎಂಜಿನಿಯರ್ಗಳಿಂದ ವಸೂಲಿ ಮಾಡುವಂತೆ ಆದೇಶ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!