ಅಪಾಯಕಾರಿಯಾಗಿಯೇ ಉಳಿದ ಪಾಜೆಗುಡ್ಡೆ ರಸ್ತೆ ತಿರುವು


Team Udayavani, Mar 25, 2021, 5:20 AM IST

ಅಪಾಯಕಾರಿಯಾಗಿಯೇ ಉಳಿದ ಪಾಜೆಗುಡ್ಡೆ ರಸ್ತೆ ತಿರುವು

ಕಾರ್ಕಳ: ಬಜಗೋಳಿ-ಹೊಸ್ಮಾರು ರಾಜ್ಯ ಹೆದ್ದಾರಿಯ ಪಾಜೆಗುಡ್ಡೆ ಅಪಾಯಕಾರಿ ತಿರುವನ್ನು ವಿಸ್ತರಿಸುವ ಕೆಲಸ ನಡೆದರೂ ಈಗಲೂ ತಿರುವು ಅಪಾಯಕಾರಿಯಾಗಿಯೇ ಉಳಿದಿದೆ. ಇದನ್ನು ಪರಿಹರಿಸಲು ಅರಣ್ಯ ಮತ್ತು ಲೋಕೋಪಯೋಗಿ ಇಲಾಖೆಗಳು ಸಮನ್ವಯ ಸಾಧಿಸಬೇಕು ಎನ್ನುವ ಆಗ್ರಹ ವ್ಯಕ್ತವಾಗಿದೆ.

ಪಾಜೆಗುಡ್ಡೆ ತಿರುವು ಸರಿಪಡಿಸುವ ಕಾಮಗಾರಿ ಯನ್ನು ಮಳೆಹಾನಿ ಯೋಜನೆಯಡಿ ಪಿಬ್ಲ್ಯುಡಿ ಇಲಾಖೆ ಇತ್ತೀಚೆಗೆ ನಡೆಸಿತ್ತು. 22 ಲಕ್ಷ ರೂ. ವೆಚ್ಚದಲ್ಲಿ ವಿಸ್ತರಣೆ ಕೆಲಸ ನಡೆಸಲಾಗಿತ್ತು. ಜೆಸಿಬಿ ಯಂತ್ರಗಳ ಮೂಲಕ ರಸ್ತೆ ವಿಸ್ತರಣೆ ನಡೆಸಿದ್ದರೂ, ಅದರಿಂದ ಪ್ರಯೋಜನವಾಗಿಲ್ಲ. ಪ್ರಯಾಣದಲ್ಲಿ ಸ್ವಲ್ಪ ಮಟ್ಟಿಗೆ ಸುಧಾರಣೆ ಆಗಿದ್ದರೂ ತಿರುವು ಈಗಲೂ ಹಾಗೆಯೇ ಇದೆ. ಅಪಘಾತಗಳಿಗೆ ಆಹ್ವಾನ ನೀಡುವಂತಿದೆ.

ಇಲ್ಲಿ ಕಾಮಗಾರಿ ನಡೆಸಲು ಅರಣ್ಯ ಕಾನೂನು ತೊಡಕಿದೆ. ತಿರುವಿನ ಇಕ್ಕೆಲಗಳಲ್ಲಿ ಅರಣ್ಯ ಭೂಮಿ ಇದೆ, ಮರಗಳಿವೆ. ರಸ್ತೆಯೂ “ಯೂ’ ಮಾದರಿಯಲ್ಲಿದೆ. ರಸ್ತೆ ವಿಸ್ತರಣೆಗೊಳಿಸಲು ಮರಗಳ ತೆರವು ಆಗಬೇಕಿದ್ದು ಕಾನೂನು ಪ್ರಕಾರ ಆಗಬೇಕಿದೆ.

ಅಪಾಯ ಜೀವಂತ
ಇತ್ತೀಚೆಗೆ ನಡೆಸಿದ ಕಾಮಗಾರಿ ವೇಳೆ ತಿರುವು ಬದಿಯಲ್ಲಿ ನೀರು ಹರಿದು ಹೋಗಲು ಚರಂಡಿ ನಿರ್ಮಿಸಲಾಗಿದೆ. ರಸ್ತೆ ಸ್ವಲ್ಪ ತಗ್ಗಿಸಲಾಗಿದ್ದು, ರಸ್ತೆ ಹೊಂಡ ದುರಸ್ತಿ ಮಾಡಲಾಗಿದೆ. ಹೊರತು ಬೇರೇನೂ ಆಗಿಲ್ಲ. ಆದ್ದರಿಂದ ಅಪಾಯದ ಸನ್ನಿವೇಶ ಜೀವಂತವಾಗಿದೆ.

ಕೈತೊಳೆದುಕೊಳ್ಳೋ ಕೆಲಸ ಬೇಡ
ಸ್ಥಳದಲ್ಲಿ ಈಗ ಅಲ್ಪ ಕಾಮಗಾರಿ ನಡೆದಿದ್ದರೂ ಶಾಶ್ವತವಾಗಿ ಪರಿಹಾರವಾಗಿಲ್ಲ. ಅರಣ್ಯ ಇಲಾಖೆ ಅಡ್ಡಿ ನಿವಾರಿಸಿ, ಶಾಶ್ವತವಾಗಿ ಈ ತಿರುವನ್ನು ನೇರಗೊಳಿಸಿ ಅಭಿವೃದ್ಧಿ ಪಡಿಸಿದರಷ್ಟೇ ಪ್ರಯೋಜನವಾಗಬಹುದು. ಅಲ್ಪ ಸ್ವಲ್ಪ ಹಣವನ್ನು ಕಾಮಗಾರಿಗೆ ಬಳಸಿ ಕೈ ತೊಳೆದುಕೊಂಡರೆ ಏನೂ ಪ್ರಯೋಜನವಾಗದು ಎನ್ನುತ್ತಾರೆ ಸ್ಥಳಿಯರು.

ಕಾಮಗಾರಿಗೆ ಅವಕಾಶವಿದೆ
ರಸ್ತೆ ಅಭಿವೃದ್ಧಿಗೆ ಅರಣ್ಯ ಸಂರಕ್ಷಣೆ ಕಾಯ್ದೆ ಪ್ರಕಾರ ಅರ್ಜಿ ಸಲ್ಲಿಸಿದಲ್ಲಿ ಅನುಮತಿ ದೊರೆಯುತ್ತದೆ. ಇದರ ಪ್ರಕಾರ ಅರ್ಜಿ ಸಲ್ಲಿಸಿ ಅನುಮತಿ ಪಡೆದು ರಸ್ತೆ ಅಭಿವೃದ್ಧಿ ಮಾಡುವುದಕ್ಕೆ ಅವಕಾಶವಿದೆ.
-ಪ್ರಕಾಶ್‌, ಆರ್‌ಎಫ್ಓ, ಮೂಡಬಿದಿರೆ ಅರಣ್ಯ ವಿಭಾಗ

50 ಲ.ರೂ. ಅನುದಾನ ಅಗತ್ಯ
ಭೌಗೋಳಿಕವಾಗಿ ತಿರುವು ಅಪಾಯಕಾರಿಯಾಗಿದೆ. ತಿರುವನ್ನು ಸಾಧ್ಯವಾದಷ್ಟು ತಗ್ಗಿಸಿ, ನೇರಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದೇವೆ. ವಾಹನ ಸವಾರರೇ ಸಾಕಷ್ಟು ಎಚ್ಚರಿಕೆಯಿಂದ ಸುರಕ್ಷಿತ ವಾಹನ ಚಾಲನೆ ಮಾಡಬೇಕು. ಕನಿಷ್ಠ 50 ಲಕ್ಷ ರೂ ಅನುದಾನ ದೊರೆತಲ್ಲಿ ಉತ್ತಮವಾಗಿಸಲು ಸಾಧ್ಯ.
-ಸುಂದರ , ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಪಿಡಬ್ಲ್ಯುಡಿ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.