ಎರಡನೇ ದಿನವೂ ಚುರುಕುಗೊಂಡ ಲಸಿಕೆ ಅಭಿಯಾನ
Team Udayavani, Mar 3, 2021, 6:20 AM IST
ಬೆಂಗಳೂರು: ಕೊರೊನಾ ಲಸಿಕೆ ಅಭಿಯಾನದ ದ್ವಿತೀಯ ಹಂತದ ಎರಡನೇ ದಿನವಾದ ಮಂಗಳವಾರ ರಾಜ್ಯಾದ್ಯಂತ ಲಸಿಕೆ ನೀಡಿಕೆ ಚುರುಕು ಪಡೆದಿದ್ದು, ಒಟ್ಟು 6,313 ಸಾರ್ವಜನಿಕರು ಲಸಿಕೆ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಮಂಗಳವಾರ ಲಸಿಕೆ ಪಡೆದರು. ಮೊದಲ ದಿನಕ್ಕೆ ಹೋಲಿಸಿದರೆ ಮಂಗಳವಾರ ಬೆಂಗಳೂರಿನಲ್ಲಿ ಒಂದು ಸಾವಿರಕ್ಕೂ ಹೆಚ್ಚು, ಮೈಸೂರು, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿಯಲ್ಲಿ ತಲಾ ನೂರಕ್ಕೂ ಹೆಚ್ಚು ಮಂದಿ ಲಸಿಕೆ ಪಡೆದಿದ್ದಾರೆ. ಅತೀ ಕಡಿಮೆ- ಚಾಮರಾಜನಗರ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿಯಲ್ಲಿ ತಲಾ ನೂರಕ್ಕಿಂತಲೂ ಕಡಿಮೆ ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕೆಲವೆಡೆ ಎರಡನೇ ದಿನವೂ ಕೋವಿನ್ ಪೋರ್ಟಲ್ ತಾಂತ್ರಿಕ ಸಮಸ್ಯೆ ಮುಂದು ವರಿದಿದೆ. ಆಗಾಗ ಸರ್ವರ್ ಡೌನ್ ಆಗುತ್ತಿದ್ದುದ ರಿಂದ ಫಲಾನುಭವಿಗಳ ಮಾಹಿತಿ ಸೇರ್ಪಡೆಗೆ, ಪರಿಶೀಲನೆಗೆ ಸಮಸ್ಯೆಯಾಗಿದೆ.
ಮನೆಯಲ್ಲೇ ಲಸಿಕೆ ಪಡೆದ ಬಿ.ಸಿ. ಪಾಟೀಲ್
ಕೃಷಿ ಸಚಿವ ಬಿ.ಸಿ. ಪಾಟೀಲ್ ಮಂಗಳವಾರ ಹಿರೇಕೆರೂರಿನ ತಮ್ಮ ಮನೆಯಲ್ಲೇ ಸರಕಾರಿ ವೈದ್ಯರಿಂದ ಲಸಿಕೆ ಪಡೆದಿದ್ದು, ವಿವಾದದ ಸ್ವರೂಪ ಪಡೆದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಬಿ.ಸಿ. ಪಾಟೀಲ್, ಜನರಿಗೆ ತೊಂದರೆ ಕೊಡಬಾರದೆಂದು ಮನೆಯಲ್ಲೇ ಲಸಿಕೆ ಹಾಕಿಸಿಕೊಂಡಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು