ಪುತ್ತೂರು: ಮರದ ಕೊಂಬೆ ಬಿದ್ದು ಯುವಕ ಮೃತ್ಯು
Team Udayavani, Feb 9, 2022, 2:25 PM IST
ಪುತ್ತೂರು: ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.
ತಿಂಗಳಾಡಿ ಸಮೀಪದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ದುರ್ದೈವಿ.
ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮೃತ ಬಾತಿಷ್ ಎಸ್ಕೆಎಸ್ಎಸ್ಎಫ್ ಸಕ್ರಿಯ ಸದಸ್ಯರಾಗಿದ್ದು, ತಾಯಿ, ಪತ್ನಿ, 6 ಮಂದಿ ಸಹೋದರರು, ಓರ್ವ ಸಹೋದರಿ ಹಾಗೂ 3 ವರ್ಷದ ಪುಟ್ಟ ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.