ನಿಯಮ ಬಾಹಿರ ಹೆಡ್‌ಲೈಟ್‌ಗಳ ಬಳಕೆ ವ್ಯಾಪಕ

ಬೆಳಕಿನ ಪ್ರಖರತೆಯಿಂದ ಅಪಘಾತ ಇಲಾಖೆಯಿಂದ ಯಾವುದೇ ಕ್ರಮವಿಲ್ಲ !

Team Udayavani, May 28, 2023, 6:36 AM IST

headlight

ಬಂಟ್ವಾಳ: ವಾಹನಗಳಲ್ಲಿ ನಿರ್ದಿಷ್ಟ ಪ್ರಮಾಣದ ಪ್ರಖರತೆಯ ಹೆಡ್‌ಲೈಟ್‌ಗಳನ್ನೇ ಬಳಸಬೇಕು ಎಂದು ಸಾರಿಗೆ ಇಲಾಖೆಯ ನಿಯಮವಿದ್ದರೂ ಇಂದಿನ ದಿನಗಳಲ್ಲಿ ಮಿತಿಮೀರಿದ ಬೆಳಕು ಚೆಲ್ಲುವ ಹೆಡ್‌ಲೈಟ್‌ಗಳನ್ನು ಬಳಸಲಾಗುತ್ತಿದೆ. ಇದು ಬಹಳಷ್ಟು ಅಪಘಾತಗಳಿಗೆ ಕಾರಣವಾಗುತ್ತಿದ್ದು, ಕ್ರಮ ಕೈಗೊಳ್ಳಬೇಕಾದ ಪೊಲೀಸ್‌, ಪ್ರಾದೇಶಿಕ ಸಾರಿಗೆ ಸುಮ್ಮನಿರುವುದು ಜನಸಾಮಾನ್ಯರ ಅಸಮಾಧಾನಕ್ಕೆ ಕಾರಣವಾಗಿದೆ.

ಬಹುತೇಕ ಹೈಎಂಡ್‌ ಕಾರುಗಳಲ್ಲಿ ವ್ಯಾಪಕವಾಗಿ ನಿಯಮ ಮೀರಿದ ಹೆಡ್‌ಲೈಟ್‌ಗಳ ಬಳಕೆಯಾಗುತ್ತಿದ್ದು, ಅಂತಹ ಕಾರುಗಳು ಸಿಕ್ಕರೆ ಎದುರಿನಿಂದ ಬರುವ ವಾಹನಗಳ ಚಾಲಕರನ್ನು ದೇವರೇ ಕಾಪಾಡಬೇಕಾದ ಸ್ಥಿತಿ ನಿರ್ಮಾಣವಾಗುತ್ತದೆ. ಅದರ ಪ್ರಖರ ಬೆಳಕು ಕಣ್ಣಿಗೆ ಬಿದ್ದರೆ ಸಂಪೂರ್ಣ ಕತ್ತಲೆ ಆವರಿಸಿ ಕ್ಷಣಕಾಲ ಎತ್ತ ಹೋಗಬೇಕು ಎಂದೂ ತಿಳಿಯದಾಗುತ್ತದೆ.

ಕಾರುಗಳನ್ನು ಖರೀದಿಸಿದ ಮಂದಿ ಅದನ್ನು ಮಾರ್ಪಾಡು (ಆಲೆóàಶನ್‌) ಮಾಡುವ ಸಂದರ್ಭದಲ್ಲಿ ಹೆಡ್‌ಲೈಟ್‌ ಸೇರಿದಂತೆ ಎಲ್ಲವನ್ನೂ ಬದಲಿಸುತ್ತಾರೆ. ಈ ವೇಳೆ ನಿಯಮ ಮೀರಿದ ವ್ಯಾಟ್ಸ್‌ ಗಳ ಹೆಡ್‌ಲೈಟ್‌ಗಳನ್ನು ಅಳವಡಿಸುತ್ತಾರೆ. ಇದರ ವಿರುದ್ಧ ಸಂಬಂಧಪಟ್ಟವರು ಕಾರ್ಯಾಚರಣೆಗೆ ಇಳಿಯದಿರುವ ಪರಿಣಾಮ ಅವುಗಳ ಬಳಕೆ ಹೆಚ್ಚುತ್ತಲೇ ಇದೆ.

ರಾತ್ರಿ ಪ್ರಯಾಣದ ಸಂದರ್ಭ ಪ್ರಖರ ಬೆಳಕಿನ ಹೆಡ್‌ಲೈಟ್‌ನ ವಾಹನ ಎದುರಾದರೆ ಸಂಪೂರ್ಣ ಕತ್ತಲ ಸ್ಥಿತಿ (ಬ್ಲೆ$çಂಡ್‌ನೆಸ್‌) ಸೃಷ್ಟಿಯಾಗಿ ನಮ್ಮ ಮುಂದೆ ಯಾರಾದರೂ ಹೋಗುತ್ತಿದ್ದಾರೆಯೇ, ಬೇರೆ ವಾಹನಗಳು ಇವೆಯೇ, ಮುಂದೆ ರಸ್ತೆ ಸರಿ ಇದೆಯೇ ಎಂಬಿತ್ಯಾದಿ ಯಾವ ವಿಚಾರಗಳೂ ಗಮನಕ್ಕೆ ಬಾರದೆ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ವಾಹನ ವೇಗವಾಗಿದ್ದರೆ ಚಾಲಕನ ನಿಯಂತ್ರಣ ಕಳೆದುಕೊಳ್ಳುವ ಅಪಾಯವೂ ಇರುತ್ತದೆ.

ದ್ವಿಚಕ್ರ ವಾಹನಗಳು, ಕಾರುಗಳು, ರಾತ್ರಿ ವೇಳೆ ಘಟ್ಟದ ಮೇಲಿನಿಂದ ಕರಾವಳಿಗೆ ತರಕಾರಿ ಇತ್ಯಾದಿ ಸರಕು ಸಾಗಿಸುವ ವಾಹನಗಳಲ್ಲಿ ಇಂತಹ ನಿಯಮ ಬಾಹಿರ ಹೆಡ್‌ಲೈಟ್‌ಗಳ ಬಳಕೆ ಹೆಚ್ಚಾಗಿ ಕಂಡುಬರುತ್ತಿದೆ. ಹೈಎಂಡ್‌ ಕಾರುಗಳು ಪ್ರಭಾವಿಗಳ ಕೈಯಲ್ಲೇ ಇರುವುದರಿಂದ ಇಲಾಖೆ ಸುಮ್ಮನಿದೆಯೇ ಎಂದು ಜನಸಾಮಾನ್ಯರು ಪ್ರಶ್ನಿಸುತ್ತಿದ್ದಾರೆ. ದ್ವಿಚಕ್ರ ವಾಹನ, ಇತರ ವಾಹನಗಳಲ್ಲಿ ಹೋಗುವ ಸಾಮಾನ್ಯರು ತಪ್ಪು ಮಾಡಿದಾಗ ಗಲ್ಲಿ ಗಲ್ಲಿಗಳಲ್ಲಿ ನಿಂತು ತಪಾಸಣೆ ಮಾಡುವ ಪೊಲೀಸ್‌ ಇಲಾಖೆ ಇಂತಹ ವಾಹನಗಳ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸುವಂತಾಗಿದೆ.

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.