ಹಿಂದುತ್ವದ ಹೊಡೆತಕ್ಕೆ ಕರಗಿದ ಮತಬ್ಯಾಂಕ್‌

ಫೆ.5ರಿಂದ ಪ್ರತ್ಯೇಕ ಯಾತ್ರೆ ಮೂಲಕ ಜನರ ವಿಶ್ವಾಸ ಗಳಿಸಲು ಹೊರಟ ಕೈ

Team Udayavani, Jan 31, 2023, 6:15 AM IST

ಹಿಂದುತ್ವದ ಹೊಡೆತಕ್ಕೆ ಕರಗಿದ ಮತಬ್ಯಾಂಕ್‌

ಬೆಂಗಳೂರು: ಒಂದು ಕಾಲದಲ್ಲಿ ತನ್ನ ಅಭೇದ್ಯ ಕೋಟೆಯಾಗಿದ್ದ ಮಲೆನಾಡು ಮತ್ತು ಕರಾವಳಿ ಕ್ಷೇತ್ರಗಳು ಈ ಬಾರಿಯೂ ಕಾಂಗ್ರೆಸ್‌ಗೆ ಕಬ್ಬಿಣದ ಕಡಲೆಯಾಗಿದ್ದು, ಹೊಸ ತಂತ್ರಗಳನ್ನು ಹೆಣೆಯಲಾರಂಭಿಸಿದೆ.
ಬಿಜೆಪಿಯ ಹಿಂದುತ್ವದ ಹೊಡೆತದಿಂದ ಶಕ್ತಿ ಕಳೆದುಕೊಂಡ ಕಾಂಗ್ರೆಸ್‌ ಫೆಬ್ರವರಿ ಐದರಿಂದ ಪ್ರತ್ಯೇಕ ಯಾತ್ರೆ ಮಾಡಲು ಉದ್ದೇಶಿಸಿದೆಯಲ್ಲದೆ ಕರಾವಳಿಗಾಗಿ ಪ್ರತ್ಯೇಕ ಪ್ರಣಾಳಿಕೆ ಮೂಲಕ ಜನರ ಹತ್ತಿರವಾಗಲು ಯತ್ನಿಸುತ್ತಿದೆ.
ಬಂಗಾರಪ್ಪ, ವೀರಪ್ಪ ಮೊಯ್ಲಿ, ಆಸ್ಕರ್‌ ಫ‌ರ್ನಾಂಡಿಸ್‌, ಮಾರ್ಗರೆಟ್‌ ಆಳ್ವಾ, ಮನೋರಮಾ ಮಧ್ವರಾಜ್‌, ಡಿ.ಕೆ. ತಾರಾದೇವಿ, ಡಿ.ಬಿ.ಚಂದ್ರೇಗೌಡ, ಕೆ.ಎಚ್‌.ಶ್ರೀನಿವಾಸ್‌, ಕಾಗೋಡು ತಿಮ್ಮಪ್ಪ ಘಟಾನುಘಟಿ ನಾಯಕರು ಕಾಂಗ್ರೆಸ್‌ ಅನ್ನು ಕರಾವಳಿ ಹಾಗೂ ಮಲೆನಾಡಿನಲ್ಲಿ ಪ್ರತಿನಿಧಿಸುತ್ತಿದ್ದರು. ಅವಿಭಜಿತ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಅಥವಾ ಜನತಾದಳದ ಪ್ರಭಾವ ಇದ್ದ ಸಮಯದಲ್ಲಿ ಬಿಜೆಪಿ ಒಂದು ಅಥವಾ ಎರಡು ಸ್ಥಾನಗಳಿಗೆ ಸೀಮಿತವಾಗಿದ್ದೂ ಇದೆ. ಈ ಭಾಗದಲ್ಲಿ ಜನತಾದಳದಲ್ಲೂ ನಾಯಕರಿಗೇನೂ ಕೊರತೆ ಇರಲಿಲ್ಲ. ಗೋವಿಂದಗೌಡ, ಎಂ.ಸಿ.ನಾಣಯ್ಯ, ಜೆ.ಎಚ್‌. ಪಟೇಲ್‌, ಅಮರನಾಥ ಶೆಟ್ಟಿ, ಜಯಪ್ರಕಾಶ್‌ ಹೆಗ್ಡೆ ಹೀಗೆ ಹಲವು ನಾಯಕರು ವೈಯಕ್ತಿಕ ಪ್ರಭಾವ ಹೊಂದಿದ್ದರು.

2004ರ ವಿಧಾನಸಭೆ ಚುನಾವಣೆ, 2009 ಲೋಕಸಭೆ ಚುನಾವಣೆ ಅನಂತರದ ದಿನಗಳಲ್ಲಿ ಈ ಭಾಗದಲ್ಲಿ ಸಾಕಷ್ಟು ಬದಲಾವಣೆಗಳು ಕಂಡಿವೆ. ಹಿಂದೂ ಕಾರ್ಯ ಕರ್ತರ ಹತ್ಯೆ ವಿಚಾರ, ಬಾಬಾ ಬುಡನ್‌ಗಿರಿಯ ದತ್ತಪೀಠ ವಿಷಯಗಳು ರಾಜಕೀಯ ಸ್ವರೂಪ ಪಡೆದು ಕ್ರಮೇಣ ಕಾಂಗ್ರೆಸ್‌ ಮತಬ್ಯಾಂಕ್‌ ಕರಗುವಂತಾಗಿದೆ. ಜತೆಗೆ ನಾಯಕರು ಶಕ್ತಿ ಕಳೆದುಕೊಳ್ಳಲಾರಂಭಿಸಿದ್ದರಿಂದ ಬಿಜೆಪಿಯತ್ತ ವಾಲಿದ ಮತಬ್ಯಾಂಕ್‌ ವಾಪಸ್‌ ಪಡೆಯಲು ಆಗಲಿಲ್ಲ. ಮೊದಲಿಗೆ ಬಿಜೆಪಿಯನ್ನು ಗಂಭೀರವಾಗಿ ಪರಿಗಣಿಸದ ಕಾಂಗ್ರೆಸ್‌ ಮೈಮರೆತ ಪರಿಣಾಮ ಇಂದು ಕರಾವಳಿ ಮತ್ತು ಮಲೆನಾಡು ಬಿಜೆಪಿ ಭದ್ರಕೋಟೆಯಂತಾಗಿದೆ. ಹಾಗೆಂದೂ ಸಾರಾಸಗಟಾಗಿ ಬಿಜೆಪಿ ಎಂದೂ ಹೇಳುವಂತಿಲ್ಲ. ಏಕೆಂದರೆ 2013ರ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯೆಯೂ ಹೆಚ್ಚಾಗಿತ್ತು. 2018ರಲ್ಲಿ ಅದು ಮತ್ತೆ ಕಡಿಮೆಯಾಯಿತು.

ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ದೊಡ್ಡ ಸವಾಲು ಆಗಿರುವುದೇ ಕರಾವಳಿ ಮತ್ತು ಮಲೆನಾಡು. ಬಿಜೆಪಿ ಈ ಭಾಗದಲ್ಲಿ ಗೆಲುವು ಸಾಧಿಸಿದ ಅನಂತರ ಎರಡೂ ಪಕ್ಷಗಳು ತಮ್ಮ ಅಸ್ತಿತ್ವಕ್ಕೆ ಹೆಣ ಗಾಡುವಂತಾಗಿದೆ. ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕಿ ಹೊಸತನದ ಮೂಲಕ ಮತದಾರರ ಸೆಳೆಯಲು ಪ್ರತಿ ಚುನಾವಣೆಯಲ್ಲಿ ಒಂದೊಂದು ರೀತಿಯ ಕಾರ್ಯತಂತ್ರ ಮಾಡುತ್ತಿದೆಯಾದರೂ ಆ ವಿಚಾರದಲ್ಲಿ ಕಾಂಗ್ರೆಸ್‌ ಇನ್ನೂ ಎಚ್ಚೆತ್ತುಕೊಂಡಿಲ್ಲ. ಹಳೇ ಮುಖಗಳಿಗೆ ಆದ್ಯತೆ ನೀಡುತ್ತಿದ್ದು ಯುವ ಸಮೂಹ ಸೆಳಯುವುದು ಕಷ್ಟವಾಗುತ್ತಿದೆ ಎಂಬ ಮಾತುಗಳು ಇವೆ.

ಕಾಂಗ್ರೆಸ್‌ ತಕ್ಕ ಮಟ್ಟಿಗೆ ಸಂಘಟನೆ ಹಾಗೂ ಕಾರ್ಯಕರ್ತರು ಮತ್ತು ಮುಖಂಡರ ಪಡೆ ಹೊಂದಿದೆಯಾದರೂ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಜೆಡಿಎಸ್‌ ಇನ್ನೂ ತಿಣುಕಾಡುವಂತಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಭಾಗದಲ್ಲಿ ಈ ಬಾರಿ ಜೆಡಿಎಸ್‌ ಹೆಚ್ಚು ನಿರೀಕ್ಷೆ ಹೊಂದಿದೆ.

ಹಳೇ ಮೈಸೂರು, ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ ಹೊಂದಿರುವಷ್ಟು ಭರವಸೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೊಂದಿಲ್ಲ. ಆದರೆ ಈ ಭಾಗದಲ್ಲಿ ಜನ ಕೈ ಹಿಡಿಯದ ಹೊರತು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುವುದು ಸಾಧ್ಯವಿಲ್ಲ. ಅದೇ ರೀತಿ ಬಿಜೆಪಿಗೆ ಹಳೇ ಮೈಸೂರು ಸೇರಿದಂತೆ ಮಧ್ಯ ಕರ್ನಾಟಕ ಭಾಗದಲ್ಲಿ ಇನ್ನೂ ಪೂರ್ಣ ಪ್ರಮಾಣದ ಹಿಡಿತ ಸಿಗದ ಕಾರಣ ಮಲೆನಾಡು ಮತ್ತು ಕರಾವಳಿ ಭಾಗದಲ್ಲೇ ಹೆಚ್ಚು ಸಾಧನೆ ಮಾಡಬೇಕಾಗಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.