World’s Highest Shiva Temple; ವಾಲುತ್ತಿದೆ ವಿಶ್ವದ ಅತಿ ಎತ್ತರದ ಶಿವ ದೇಗುಲ!
6-10 ಡಿಗ್ರಿ ಬಾಗಿದ ರುದ್ರಪ್ರಯಾಗ್ನ ತುಂಗನಾಥ ದೇವಾಲಯ:ಸಂರಕ್ಷಿತ ಸ್ಮಾರಕ ಎಂದು ಘೋಷಿಸಲು ಒತ್ತಾಯ
Team Udayavani, May 19, 2023, 7:38 AM IST
ಡೆಹ್ರಾಡೂನ್: ಜಗತ್ತಿನಲ್ಲೇ ಅತಿ ಎತ್ತರದಲ್ಲಿರುವ ಶಿವ ದೇಗುಲ ಎಂದೇ ಖ್ಯಾತಿ ಪಡೆದಿರುವ ತುಂಗನಾಥ ದೇವಾಲಯವು 5ರಿಂದ 6 ಡಿಗ್ರಿಯಷ್ಟು ವಾಲಿದೆಯಂತೆ!
ಭಾರತೀಯ ಪುರಾತತ್ವ ಇಲಾಖೆ ನಡೆಸಿದ ಅಧ್ಯಯನದಿಂದ ಈ ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಉತ್ತರಾಭಿಮುಖವಾಗಿ ಮತ್ತು ಸಮುದ್ರಮಟ್ಟದಿಂದ ಬರೋಬ್ಬರಿ 12,800 ಅಡಿ ಎತ್ತರದಲ್ಲಿ ತುಂಗನಾಥ ದೇಗುಲವಿದೆ. ಗವ್ಹಾಲ್ ಹಿಮಾಲಯದ ರುದ್ರಪ್ರಯಾಗ್ ಜಿಲ್ಲೆಯಲ್ಲಿರುವ ಈ ಶಿವ ದೇವಸ್ಥಾನವು 5ರಿಂದ 6 ಡಿಗ್ರಿಯಷ್ಟು ವಾಲಿದರೆ, ದೇಗುಲದ ಸಂಕೀರ್ಣದಲ್ಲಿರುವ ಇತರೆ ಸಣ್ಣಪುಟ್ಟ ಕಟ್ಟಡಗಳು 10 ಡಿಗ್ರಿಗಳಷ್ಟು ವಾಲಿದೆ ಎಂದು ವರದಿ ತಿಳಿಸಿದೆ.
ಈ ವರದಿ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿರುವ ಪುರಾತತ್ವ ಅಧಿಕಾರಿಗಳು, ಆದಷ್ಟು ಹೇಗ ತುಂಗನಾಥ ದೇಗುಲವನ್ನು ಸಂರಕ್ಷಿತ ಸ್ಮಾರಕ ಎಂದು ಘೋಷಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ಇದನ್ನು ರಾಷ್ಟ್ರೀಯ ಮಹತ್ವ ಹೊಂದಿರುವ ಸಂರಕ್ಷಿತ ಸ್ಮಾರಕ ಎಂದು ಘೋಷಿಸುವ ಪ್ರಕ್ರಿಯೆ ಆರಂಭಿಸಿದೆ. ಜತೆಗೆ, ಈ ಕುರಿತು ಸಾರ್ವಜನಿಕರ ಅಭಿಪ್ರಾಯಗಳನ್ನೂ ಆಹ್ವಾನಿಸಿದೆ.
ಹಾನಿಗೆ ಕಾರಣ?
ದೇವಾಲಯವು ಏಕಾಏಕಿ ವಾಲಲು ಕಾರಣವೇನು ಎಂಬುದರ ಬಗ್ಗೆ ಪರಿಶೀಲಿಸಲು ಕ್ರಮ ಕೈಗೊಳ್ಳುತ್ತೇವೆ. ಸಂರಕ್ಷಣೆ ಅಗತ್ಯವಿದೆಯೇ, ಸ್ಮಾರಕದ ಪುನಸ್ಥಾಪನೆ ಮಾಡಬೇಕೇ, ಮಾಡುವುದಿದ್ದರೆ ಎಷ್ಟನ್ನು ಮಾಡಬೇಕು, ದೇಗುಲ ಮತ್ತಷ್ಟು ವಾಲುವ ಸಾಧ್ಯತೆಯಿದೆಯೇ ಎಂಬ ಬಗ್ಗೆ ಪರಿಶೀಲಿಸಲಾಗುತ್ತದೆ ಎಂದು ಪುರಾತತ್ವ ಸರ್ವೇ ಅಧಿಕಾರಿಗಳು ಹೇಳಿದ್ದಾರೆ.
ತುಂಗನಾಥ ಎನ್ನುವುದು 8ನೇ ಶತಮಾನದಲ್ಲಿ ನಿರ್ಮಿಸಲಾದ ಜಗತ್ತಿನ ಅತಿ ಎತ್ತರದ ಶಿವ ದೇಗುಲ. ಪ್ರತಿ ವರ್ಷ ಇಲ್ಲಿಗೆ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಕೇದಾರನಾಥ ಮತ್ತು ಬದ್ರಿನಾಥ ದೇಗುಲಗಳನ್ನು ನಿರ್ವಹಿಸುತ್ತಿರುವ ಬದ್ರಿ-ಕೇದಾರ ದೇಗುಲ ಸಮಿತಿಯೇ ಈ ದೇಗುಲದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ