ಅಂಡಾರು ಗ್ರಾಮಸ್ಥರಿಗಿಲ್ಲ ತಾ| ಕೇಂದ್ರ ಸಂಪರ್ಕಿಸುವ ಬಸ್‌ ವ್ಯವಸ್ಥೆ


Team Udayavani, Apr 16, 2021, 3:30 AM IST

ಅಂಡಾರು ಗ್ರಾಮಸ್ಥರಿಗಿಲ್ಲ ತಾ| ಕೇಂದ್ರ ಸಂಪರ್ಕಿಸುವ ಬಸ್‌ ವ್ಯವಸ್ಥೆ

ಅಜೆಕಾರು: ವರಂಗ ಗ್ರಾ.ಪಂ. ವ್ಯಾಪ್ತಿಯ ಅಂಡಾರು ಗ್ರಾಮಸ್ಥರಿಗೆ ತಾಲೂಕು ಕೇಂದ್ರ ಹೆಬ್ರಿ ಸಂಪರ್ಕಿಸಲು ಬಸ್‌ ವ್ಯವಸ್ಥೆ ಇಲ್ಲದೆ ಸಂಕಷ್ಟ ಪಡುವಂತಾಗಿದೆ. ತಾಲೂಕು ಕೇಂದ್ರವಾಗಿ ಹೆಬ್ರಿ ಹಲವು ವರ್ಷ ಕಳೆದಿದ್ದರೂ ತಾ| ವ್ಯಾಪ್ತಿಯ ಗ್ರಾಮಗಳನ್ನು ಸಂಪರ್ಕಿಸಲು ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲವಾಗಿದೆ.

ತಾಲೂಕು ಕೇಂದ್ರಕ್ಕಿಲ್ಲ
ಅಂಡಾರು ಕಾರ್ಕಳ ತಾಲೂಕಿಗೆ ಹತ್ತಿರವಾಗಿದ್ದರೂ ವರಂಗ ಗ್ರಾ.ಪಂ. ವ್ಯಾಪ್ತಿಗೆ ಬರುವುದರಿಂದ ಹೆಬ್ರಿ ತಾಲೂಕಿಗೆ ಸೇರಿಸಲಾಗಿತ್ತು. ಅಂಡಾರು ಗ್ರಾಮ ದಿಂದ ಕಾರ್ಕಳಕ್ಕೆ ಪ್ರತಿ ಅರ್ಧ ಗಂಟೆಗೆ ಒಂದು ಖಾಸಗಿ ಬಸ್‌ ವ್ಯವಸ್ಥೆ ಇತ್ತು ಹಾಗಾಗಿ ಅಂದು ತಾಲೂಕು ಕೇಂದ್ರವಾಗಿದ್ದ ಕಾರ್ಕಳಕ್ಕೆ ಸಂಚರಿಸಲು ಅನುಕೂಲ ವಾಗಿತ್ತು. ಆದರೆ ಹೆಬ್ರಿ ತಾ| ಕೇಂದ್ರವಾದ ಬಳಿಕ ಅಂಡಾರು ಗ್ರಾಮಸ್ಥರು ನೇರವಾಗಿ ತಾ| ಕೇಂದ್ರ ಸಂಪರ್ಕಿಸಲು ಒಂದೂ ಬಸ್‌ ವ್ಯವಸ್ಥೆ ಇಲ್ಲದೆ ಹೈರಾಣಾಗಿದ್ದಾರೆ.

ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಣ್ಣ ಸಣ್ಣ ತಾಲೂಕು, ಜಿಲ್ಲಾ ಕೇಂದ್ರಗಳನ್ನು ರಚಿಸ ಲಾಗುತ್ತದೆ. ಆದರೆ ಅಂಡಾರು ಗ್ರಾಮಸ್ಥರಿಗೆ ಹೆಬ್ರಿ ತಾಲೂಕು ಕೇಂದ್ರವಾದ ಬಳಿಕ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೋಬಳಿ ಕೇಂದ್ರವೂ ಇಲ್ಲ
ಕಾರ್ಕಳ ತಾ| ಕೇಂದ್ರವಾಗಿದ್ದ ಸಂದರ್ಭ ಅಜೆಕಾರು ಹೋಬಳಿ ಕೇಂದ್ರವಾಗಿದ್ದು ಇದರ ವ್ಯಾಪ್ತಿಯಲ್ಲಿ ಅಂಡಾರು ಗ್ರಾಮವೂ ಇತ್ತು. ಹೋಬಳಿ ಕೇಂದ್ರ ದಲ್ಲಿ ಹಲವು ಕೆಲಸಗಳಾಗುತ್ತಿತ್ತು. ಈಗ ತಾಲೂಕು ಬೇರೆಯಾದ್ದರಿಂದ ಎಲ್ಲದಕ್ಕೂ ಹೆಬ್ರಿಗೇ ಹೋಗಬೇಕು. ಸದ್ಯ ಹೆಬ್ರಿ ತಾ.ಪಂ.ನ 11 ಕ್ಷೇತ್ರಗಳಲ್ಲಿ ಅಂಡಾರು ಸಹ ಒಂದು ಕ್ಷೇತ್ರ ವಾಗಿದ್ದು ಪೂರ್ಣ ಪ್ರಮಾಣದ ತಾ.ಪಂ. ಕ್ಷೇತ್ರಕ್ಕೆ ಬಸ್‌ ಸಂಚಾರ ಭಾಗ್ಯ ಇಲ್ಲದಾಗಿದೆ.

ವಿದ್ಯಾರ್ಥಿಗಳಿಗೆ ಅನುಕೂಲ
ಬಸ್‌ ಸಂಚಾರ ಶುರುವಾದರೆ ಅಂಡಾರು ಗ್ರಾಮಸ್ಥರಿಗಲ್ಲದೆ ಅಂಡಾರು, ಶಿರ್ಲಾಲು, ಕೆರ್ವಾಶೆ ಗ್ರಾಮದ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ. ಈ ಭಾಗದ ಹೆಚ್ಚಿನ ವಿದ್ಯಾರ್ಥಿಗಳು ಮುನಿಯಾಲಿನ ಸರಕಾರಿ ಪಬ್ಲಿಕ್‌ ಸ್ಕೂಲ್‌ಗೆ ತೆರಳುವುದರಿಂದ ಕಾಡುಹೊಳೆ ಮಾರ್ಗವಾಗಿ ಬಸ್‌ ವ್ಯವಸ್ಥೆ ಆದಲ್ಲಿ ಅನುಕೂಲವಾಗಲಿದೆ.

ಸರಕಾರಿ ಬಸ್‌ ವ್ಯವಸ್ಥೆಗೆ ಆಗ್ರಹ
ಹೆಬ್ರಿ ತಾ| ಕೇಂದ್ರದಿಂದ ವರಂಗ, ಮುನಿಯಾಲು, ಕಾಡುಹೊಳೆ ಮಾರ್ಗವಾಗಿ ಅಂಡಾರಿಗೆ ಸರಕಾರಿ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ. ಅಲ್ಲದೆ ಹೆಬ್ರಿಯಿಂದ ಅಂಡಾರು ಮಾರ್ಗವಾಗಿ ಧರ್ಮಸ್ಥಳ, ಶೃಂಗೇರಿ ಸೇರಿದಂತೆ ವಿವಿಧ ಧಾರ್ಮಿಕ ಸ್ಥಳಗಳಿಗೆ ಸಂಚರಿಸಲು ಹತ್ತಿರದ ರಸ್ತೆ ಇರುವುದರಿಂದ, ಇಲ್ಲಿ ಸರಕಾರಿ ಬಸ್‌ ಸಂಚರಿಸಿದರೆ ಅಭಿವೃದ್ಧಿಗೆ
ಪೂರಕವಾಗಲಿದೆ. ಆದ್ದರಿಂದ ಬಸ್‌ ವ್ಯವಸ್ಥೆ ಕಲ್ಪಿಸ ಬೇಕೆನ್ನುವ ಆಗ್ರಹ ಇಲ್ಲಿನವರದ್ದಾಗಿದೆ.

ಸುತ್ತು ಬಳಸಿ ಸಂಚಾರ
ಅಂಡಾರು ಗ್ರಾಮವು ಹೆಬ್ರಿಯಿಂದ ಸುಮಾರು 25 ಕಿ.ಮೀ. ದೂರದಲ್ಲಿದ್ದು ಬಸ್‌ ವ್ಯವಸ್ಥೆಗೆ ಕಾರ್ಕಳ ತಾಲೂಕಿನ ಅಜೆಕಾರು ಮಾರ್ಗವಾಗಿ ಸುಮಾರು 35 ಕಿ.ಮೀ.ಯಷ್ಟು ಸುತ್ತು ಬಳಸಿ ಸಂಚರಿಸಬೇಕಾಗಿದೆ. ಸದ್ಯ ಅಂಡಾರಿನಿಂದ ಸಂಚರಿಸುವ ಎಲ್ಲ ಬಸ್‌ಗಳೂ ಕಾರ್ಕಳಕ್ಕೆ ಮಾತ್ರ ಹೋಗುತ್ತವೆ. ಎರಡು ಮೂರು ಬಸ್‌ಗಳನ್ನು ಬದಲಾಯಿಸಬೇಕಾದ್ದರಿಂದ ಹಿರಿಯರಿಗೆ ಅನನುಕೂಲವಾಗಿದೆ. ಹೆಬ್ರಿ ತಾ| ಕೇಂದ್ರದಿಂದ ಅಂಡಾರು ಗ್ರಾಮವನ್ನು ಸಂಪರ್ಕಿಸಲು ಕಾಡುಹೊಳೆ ಮಾರ್ಗವಾಗಿ ಉತ್ತಮ ರಸ್ತೆ ವ್ಯವಸ್ಥೆ ಇದ್ದು ಖಾಸಗಿ ಅಥವಾ ಸರಕಾರಿ ಬಸ್‌ ಸಂಚಾರದ ವ್ಯವಸ್ಥೆ ತ್ವರಿತವಾಗಿ ಕಲ್ಪಿಸಬೇಕಾಗಿದೆ.

ಅಧಿಕಾರಿಗಳೊಂದಿಗೆ ಚರ್ಚೆ
ಅಂಡಾರು ಗ್ರಾಮದ ಜನತೆ ತಾಲೂಕು ಕೇಂದ್ರಕ್ಕೆ ತಲುಪಲು ಸುತ್ತು ಬಳಸಿ ಸಂಚರಿಸಬೇಕಾಗಿದೆ. ಗ್ರಾಮಕ್ಕೆ ತಾ| ಕೇಂದ್ರದಿಂದ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು.
-ಜ್ಯೋತಿ ಹರೀಶ್‌, ಸದಸ್ಯರು, ಜಿಲ್ಲಾ ಪಂಚಾಯತ್‌

ಸರಕಾರಕ್ಕೆ ಪ್ರಸ್ತಾವನೆ
ಹೆಬ್ರಿ ತಾಲೂಕು ಕೇಂದ್ರದ ಗಡಿ ಗ್ರಾಮವಾಗಿರುವ ಅಂಡಾರು ಗ್ರಾಮಕ್ಕೆ ಬಸ್‌ ಸೌಕರ್ಯ ಅತ್ಯಗತ್ಯ. ಈ ನಿಟ್ಟಿನಲ್ಲಿ ಸರಕಾರಿ ಬಸ್‌ ಸಂಚಾರ ವ್ಯವಸ್ಥೆ ಪ್ರಾರಂಭ ಮಾಡುವಂತೆ ತಾ.ಪಂ. ಸಭೆಯಲ್ಲಿ ನಿರ್ಣಯ ಕೈಗೊಂಡು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

-ರಮೇಶ್‌ ಕುಮಾರ್‌, ಅಧ್ಯಕ್ಷರು, ತಾ. ಪಂ., ಹೆಬ್ರಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.