ರಾಜ್ಯದಲ್ಲಿ ಸದ್ಯ ಲಾಕ್‌ಡೌನ್‌ ಇಲ್ಲ : ಸಚಿವ ಸಂಪುಟ ನಿರ್ಧಾರ


Team Udayavani, Mar 23, 2021, 7:10 AM IST

ರಾಜ್ಯದಲ್ಲಿ ಸದ್ಯ ಲಾಕ್‌ಡೌನ್‌ ಇಲ್ಲ : ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹೆಚ್ಚಳವಾಗುತ್ತಿದ್ದರೂ ಸದ್ಯ ಲಾಕ್‌ಡೌನ್‌ ಮಾಡದಿರಲು ಸಚಿವ ಸಂಪುಟ ನಿರ್ಧರಿಸಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗಿದ್ದು, ಯಾವುದೇ ಕಾರಣಕ್ಕೂ ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸದಿರಲು ಸರಕಾರ ನಿರ್ಧರಿಸಿದೆ. ಸೋಂಕಿನ ಪ್ರಮಾಣ ಹೆಚ್ಚಳವಾದರೆ ಬಿಗಿ ಕ್ರಮ ಕೈಗೊಂಡು, ಸೋಂಕು ಹರಡುವಿಕೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಕೊರೊನಾ ಪ್ರಮಾಣ ಹೆಚ್ಚಳ ಕುರಿತು ಒಂದು ವಾರ ಕಾದುನೋಡಲು ಸರಕಾರ ನಿರ್ಧರಿಸಿದ್ದು, ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಶಾಲೆ-ಕಾಲೇಜು ಸ್ಥಗಿತವಿಲ್ಲ
ಈಗಾಗಲೇ ಆರಂಭವಾಗಿರುವ ಶಾಲಾ, ಕಾಲೇಜುಗಳನ್ನು ಸ್ಥಗಿತ ಮಾಡುವುದಿಲ್ಲ. ಆಫ್ಲೈನ್‌, ಆನ್‌ಲೈನ್‌ ತರಗತಿಗಳು ಶೈಕ್ಷಣಿಕ ವೇಳಾಪಟ್ಟಿಯಂತೆ ನಡೆಯ ಲಿವೆ ಎಂದು ಡಿಸಿಎಂ, ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಡೋಸ್‌ ಅವಧಿ ಹೆಚ್ಚಳ
ಕೊವಿಶೀಲ್ಡ್‌ ಲಸಿಕೆಯ ಮೊದಲ ಡೋಸ್‌ ಪಡೆದ ಬಳಿಕ ಎರಡನೇ ಡೋಸ್‌ ಪಡೆಯಲು ಇರುವ ಅವಧಿಯನ್ನು ಈಗಿನ 28 ದಿನಗಳ ಬದಲಾಗಿ 6-8 ವಾರಗಳಿಗೆ ಹೆಚ್ಚಿಸಬೇಕು ಎಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರಕಾರ ಪತ್ರ ಬರೆದಿದೆ. ಕೊವ್ಯಾಕ್ಸಿನ್‌ ಲಸಿಕೆಗೆ ಈ ನಿಯಮ ಅನ್ವಯವಾಗದು ಎಂದೂ ಸ್ಪಷ್ಟಪಡಿಸಿದೆ.

ಲಾಕ್‌ಡೌನ್‌ ಬೇಡ, ಲಸಿಕೆ ಕೊಡಿ
“ಮತ್ತೆ ಲಾಕ್‌ಡೌನ್‌ ಬೇಡ, ಲಸಿಕೆ ಕೊಡಿ’ ಎಂಬ ಕೂಗು ಕಾರ್ಮಿಕರು, ಉದ್ಯಮಿಗಳ ಸಹಿತ ಸಾರ್ವಜನಿಕ ವಲಯದಿಂದ ಬಲವಾಗಿದೆ.

ಪ್ರಸ್ತುತ ಕೊರೊನಾ ಎರಡನೇ ಅಲೆ ಭೀತಿಯಿಂದಾಗಿ ಮತ್ತೆ ಲಾಕ್‌ಡೌನ್‌ ಚರ್ಚೆ ಮುನ್ನೆಲೆಗೆ ಬಂದಿದೆ.

ಕಳೆದ ವರ್ಷದ ಲಾಕ್‌ಡೌನ್‌ನಿಂದ ತೊಂದರೆ ಅನುಭವಿಸಿ ಇಂದಿಗೂ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿರುವ ಶ್ರಮಿಕ ವರ್ಗ ಲಾಕ್‌ಡೌನನ್ನು ಬಲವಾಗಿ ವಿರೋಧಿಸುತ್ತಿದೆ. ಸೋಂಕು ಹತೋಟಿಗೆ “ಲಸಿಕೆ” ಪರ್ಯಾಯ ಮತ್ತು ಪ್ರಬಲ ಮಾರ್ಗ ವಾಗಿದ್ದು, ಶೀಘ್ರ ನಮಗೆಲ್ಲ ಲಸಿಕೆ ಕೊಡಿ ಎಂದು ಒತ್ತಾಯಿಸುತ್ತಿವೆ.

ರಾಜ್ಯದಲ್ಲಿ ಶ್ರಮಿಕರು ಮೂರು ಕೋಟಿಗೂ ಅಧಿಕ ಮಂದಿ ಇದ್ದಾರೆ. ಇವರು ದಿನದ ಅಥವಾ ಮಾಸಿಕ ಕೂಲಿಯನ್ನು ಅವಲಂಬಿಸಿದ್ದಾರೆ. ಮತ್ತೆ ಲಾಕ್‌ಡೌನ್‌ ಅವರ ಕೂಲಿಯನ್ನು ಕಿತ್ತುಕೊಂಡಂತೆ. ಲಸಿಕೆ ಲಭ್ಯವಿದ್ದು, ಕಾರ್ಮಿಕ ವರ್ಗಕ್ಕೆ ನೀಡಬೇಕು. ಕೆಲಸ ಸ್ಥಳದಲ್ಲಿ ಮುಂಜಾಗ್ರತೆ ಕ್ರಮ ಪಾಲನೆಗೆ ಜಾಗೃತಿ ಮೂಡಿಸಿ, ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಿ ಸೋಂಕಿನಿಂದ ರಕ್ಷಿಸಬೇಕು ಎಂದು ರಾಜ್ಯ ಕಾರ್ಮಿಕ ಸಂಘಟನೆಗಳ ಮುಖಂಡರಾದ ವರಲಕ್ಷ್ಮೀ ಆಗ್ರಹಿಸಿದ್ದಾರೆ.

ಆರ್ಥಿಕತೆಯ ಆಧಾರಸ್ತಂಭಕ್ಕೆ ಲಸಿಕೆ ನೀಡಿ
ಶ್ರಮಿಕ ವರ್ಗವೇ ದೇಶದ ಆರ್ಥಿಕತೆಯ ಆಧಾರಸ್ತಂಭ. ಮೊದಲು ಅವರಿಗೆ ಲಸಿಕೆ ನೀಡಿ ಸೋಂಕು ಹರಡುವಿಕೆ ತಡೆಗಟ್ಟಬೇಕು ಎನ್ನುವುದು ಆರ್ಥಿಕ ತಜ್ಞರ ಅಭಿಪ್ರಾಯ.

ಸದ್ಯ ಕೊರೊನಾ ಲಸಿಕೆ ಲಭ್ಯವಿದ್ದು, ದೊಡ್ಡ ಪ್ರಮಾಣದಲ್ಲಿ, ಹೆಚ್ಚು ಜನರಿಗೆ ಶೀಘ್ರದಲ್ಲಿ ಲಸಿಕೆ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ತರಬೇಕು. ಮುಖ್ಯವಾಗಿ ಸೋಂಕು ಹರಡುವಿಕೆಗೆ ಕಾರಣರಾಗುವ 20ರಿಂದ 45 ವರ್ಷದವರಿಗೆ ಶೀಘ್ರ ಲಸಿಕೆ ಹಾಕಬೇಕು. ಇದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಸರಕಾರ ಕೈಗೊಳ್ಳಬೇಕು.
– ಡಾ| ದೇವಿ ಶೆಟ್ಟಿ , ಅಧ್ಯಕ್ಷರು, ನಾರಾಯಣ ಹೃದಯಾಲಯ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.