ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ; ಯಡಿಯೂರಪ್ಪ ಅವರೇ ಸುಪ್ರೀಂ: ಅರುಣ್ ಸಿಂಗ್
Team Udayavani, Jan 3, 2021, 6:06 PM IST
ಶಿವಮೊಗ್ಗ: ಸಚಿವ ಸಂಪುಟಕ್ಕೆ ಸದ್ಯಕ್ಕೆ ಸರ್ಜರಿಯಿಲ್ಲ, ಈ ಕುರಿತು ಚರ್ಚೆಯೂ ಕೂಡ ನಡೆದಿಲ್ಲ. ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ರಾಜ್ಯ ವಿಶೇಷ ಸಭೆ ಬಳಿಕ ಮಾಧ್ಯಮದೊಮದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರೇ ರಾಜ್ಯದ ನಾಯಕರು, ಅವರೇ ಸಿಎಂ. ಸಂಪುಟ ಸರ್ಜರಿ ಬಗ್ಗೆ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಯತ್ನಾಳ್ ಕುರಿತು ಕೇಳಿದ ಪ್ರಶ್ನೆಗೆ ಗರಂ ಆದ ಅರುಣ್ ಸಿಂಗ್, ಯತ್ನಾಳ್ ಯಾರು ? ಅವರ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿ ಗಮಹನಹರಿಸುತ್ತಿದೆ ಎಂದು ತಿಳಿಸಿದರು.
ಶಿವಮೊಗ್ಗನಗರದ ಹೊರವಲಯದ ಪ್ರೇರಣ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ವಿಶೇಷ ಸಭೆ ಮುಕ್ತಾಯವಾಗಿದ್ದು, ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಹೊರನಡೆದಿದ್ದಾರೆ.
ಕಳೆದ ಎರಡು ದಿನಗಳಿಂದ ಶಿವಮೊಗ್ಗದಲ್ಲಿ ಬೀಡು ಬಿಟ್ಟಿದ್ದ ರಾಜ್ಯ ಬಿಜೆಪಿ ಪಕ್ಷದ ಪ್ರಮುಖ ನಾಯಕರು, ಸಭೆ ಮುಗಿಸಿ ಬೆಂಗಳೂರು ಕಡೆ ಪ್ರಯಾಣ ಬೆಳಸಿದ್ದಾರೆ.
ಇದನ್ನೂ ಓದಿ: ಹುಟ್ಟೂರಿನಲ್ಲಿ ಸಂಗೀತ ಲೋಕ ಸೃಷ್ಟಿಸಿದ ರವಿ ಬಸ್ರೂರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ