ಯಾವುದೇ ಕಾರಣಕ್ಕೂ ರಾಜೀನಾಮೆ‌‌ ನೀಡುವ ಪ್ರಶ್ನೆಯೇ ಇಲ್ಲ: ಕೆ.ಎಸ್.ಈಶ್ವರಪ್ಪ


Team Udayavani, Apr 13, 2022, 1:47 PM IST

1-ssdsad

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಕೋಲಾಹಲ ನಡೆಯುತ್ತಿರುವ ವೇಳೆ , ‘ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡುವುದಿಲ್ಲ’ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಬುಧವಾರ ಒತ್ತಿ ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದರಲ್ಲಿ ಷಡ್ಯಂತ್ರವಿದ್ದು ಈ ಬಗ್ಗೆ ತನಿಖೆ ನಡೆಯಬೇಕು. ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಮಗ್ರ ತನಿಖೆ ನಡೆಸಲು ಮನವಿ ಮಾಡಿದ್ದೇನೆ. ನಾಳೆ ಅಥವಾ ನಾಡಿದ್ದು ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದು ತಿಳಿಸಿದರು.

ಕಾನೂನು ಬಾಹಿರವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಡೆದಂತಹ ವಿಚಾರದಲ್ಲಿ ಕಾಂಗ್ರೆಸ್ ನವರು ರಾಜೀನಾಮೆ ಕೇಳುತ್ತಿದ್ದಾರೆ. ಡೆತ್ ನೋಟೇ ಬರೆದಿಲ್ಲ. ಸುಳ್ಳು ಹಬ್ಬಿಸಿ ರಾಜೀನಾಮೆ ಕೇಳುತ್ತಿದ್ದಾರೆ.ನಮ್ಮ ಇಲಾಖೆಯಲ್ಲಿ ಯಾವುದೇ ಕಾಮಗಾರಿ ಮಾಡಬೇಕಾದರೆ, ಮೊದಲು ಆಡಳಿತಾತ್ಮಕ ಅನುಮೋದನೆ, ಮಂಜೂರಾತಿ
ವರ್ಕ್ ಆರ್ಡರ್ ಇಶ್ಯೂ ಆಗಬೇಕು ಎಂದರು.80  ಸಾರಿ ಅವರ ಮನೆಗೆ ಹೋಗಿದ್ದೆ ಎಂದು ಹೇಳಿದ್ದಾರೆ. ಒಂದೇ ಒಂದು ಸಾರಿ ಅವರ ಮುಖ ನೋಡಲಿಲ್ಲ ಎಂದರು.

ಸಂತೋಷ್ ದೆಹಲಿಗೆ ಹೋಗಲು ಯಾರು ಟಿಕೆಟ್ ಮಾಡಿ ಕೊಟ್ಟರು ? ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂತೋಷ್ ನೀಡಿದ ದೂರಿನ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ ಎಂದರು.

ನಾನು ಸಂತೋಷ್ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದೆ, ಅವರಿಗೆ ಕೋರ್ಟ್ ಕೇಸ್ ಪರಿಗಣಿಸಿ ಸಂತೋಷ್ ಪಾಟೀಲ್ ಮತ್ತು ಕನ್ನಡದ ಮಾಧ್ಯಮವೊಂದಕ್ಕೆ ನೋಟೀಸ್ ನೀಡಿದೆ. ದೆಹಲಿಗೆ ಹೋಗಿ ಅಮಿತ್ ಶಾ ಅವರ ಕಚೇರಿಗೆ ದೂರು ನೀಡುವಲ್ಲಿ ಧೈರ್ಯ ತೋರಿದ್ದ ಸಂತೋಷ್ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ನನಗೆ ಅನಿಸುತ್ತಿದೆ , ಅದಿನ್ನೂ ಪೂರ್ಣವಾಗಿ ಸ್ಪಷ್ಟವಾಗಿಲ್ಲ ಎಂದರು.

ನೀತಿ, ನಿಯಮ ಕಾನೂನು ಮೀರಿ ಹಣ ಕೊಡಲು ಬರುವುದಿಲ್ಲ ಎಂದು ಈಗಾಗಲೇ ನಮ್ಮ ಇಲಾಖೆ ಸ್ಪಷ್ಟನೆ ನೀಡಿದೆ, ಕೋರ್ಟ್ ನಲ್ಲಿ ಪ್ರಕರಣ ಮುಂದುವರಿಯುತ್ತದೆ ಎಂದರು.

ಸಂತೋಷ್ ಡೆತ್ ನೋಟ್ ಬರೆದಿಲ್ಲ, ವಾಟ್ಸ್ಆಪ್ ನಲ್ಲಿ ಟೈಪ್ ಮಾಡಿದ್ದಾರೆ. ಅಲ್ಲಿ ಕೈ ಬರಹವಿಲ್ಲ, ಸಹಿಯೂ ಇಲ್ಲ ಎಂದರು.

ಕಾನೂನು ಬೇಕು ನಿಜ. ಅದಕ್ಕಿಂತಲೂ ಪ್ರಾಮಾಣಿಕತೆ ಮುಖ್ಯ. ಗುತ್ತಿಗೆದಾರರ ಸಂಘದವರು ಯಾರಿಗೆ 40 ಪರ್ಸೆಂಟ್ ಕಮಿಷನ್ ನೀಡಿದ್ದಾರೆ ಎಂದು‌ ನೇರವಾಗಿ ಹೇಳಲಿ.ನಮ್ಮದು ಒಂದು ತಪ್ಪಿದ್ದರೆ ಹೇಳಿ ನಾನು ತಿದ್ದಿಕೊಳ್ಳುತ್ತೇನೆ ಎಂದರು.

ಕಾಂಗ್ರೆಸ್ಸಿಗರು ಇಂದ್ರಲೋಕ, ಚಂದ್ರಲೋಕಕ್ಕೆ‌ ಹೋಗಿ ಪ್ರತಿಭಟನೆ ಮಾಡಲಿ. ನೂರಕ್ಕೆ ನೂರು ನಾನು ರಾಜೀನಾಮೆ ನೀಡುವುದಿಲ್ಲ ಎಂದರು.

ಕುಮಾರ ಸ್ವಾಮಿ ಅವರು ಷಡ್ಯಂತ್ರ ನಡೆದಿದೆ ಎಂದು ಹೇಳಿದ್ದಾರೆ ಸಂತೋಷ. ಕಾಂಗ್ರೆಸ್ ನವರ ತರ ಅವರು ನನ್ನ ರಾಜೀನಾಮೆ ಕೇಳಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಈ ಜನ್ಮದಲ್ಲಿ ಸಿಎಂ ಸ್ಥಾನದಲ್ಲಿ ಕೂರುವುದಿಲ್ಲ. ಮತ್ತೆ ರಾಜ್ಯದಲ್ಲಿ‌ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದರು.

ಮುಸಲ್ಮಾನರನ್ನು ಕಾಂಗ್ರೆಸ್ಸಿಗರು ಯಾವಾಗ ನಡುನೀರಿನಲ್ಲಿ ಕೈಬಿಡುತ್ತಾರೋ ಗೊತ್ತಿಲ್ಲ.ಶಿವಮೊಗ್ಗದಲ್ಲಿ ಮುಸಲ್ಮಾನರಿಗೆ ನಾವು ಏನು ಅನ್ಯಾಯ ಮಾಡಿದ್ದೇವೆ. ಗೂಂಡಾಗಿರಿ ಮಾಡುವ ಮುಸಲ್ಮಾನ‌ ಗುಂಡಾಗಳು ಹರ್ಷನನ್ನು ಕೊಲೆ ಮಾಡಿದ್ದರು ಎಂದಿದ್ದೆ. ದೇಶಭಕ್ತ ಮುಸಲ್ಮಾನರು ಹರ್ಷನನ್ನು ಕೊಲೆ‌ ಮಾಡಿದರು ಎಂದು ಹೇಳಬೇಕಿತ್ತೆ? ಎಲ್ಲ ಮುಸಲ್ಮಾನರನ್ನು ಗೂಂಡಾ ಎಂದು ಹೇಳುವುದಿಲ್ಲ ಎಂದರು.

ಲಕ್ಷ್ಮಿ ಹೆಬ್ಬಾಳ್ಕರ್ ಗೆ ತಲೆ ಕೆಟ್ಟರೆ ನಾನೇನು ಮಾಡಲಿ. ಹೆಣ್ಣು ಮಕ್ಕಳ ಬಗ್ಗೆ ನನಗೆ ಭಾರಿ ಗೌರವವಿದೆ.ನನ್ನ ಮೇಲೆ‌ ಸುಖಾಸುಮ್ಮನೆ ಆರೋಪ ಮಾಡಿದರೆ ಹೇಗೆ.ಸುಮ್ಮನೆ ಏನೇನೋ ಹೇಳುತಿದ್ದಾರೆ. ಕರ್ನಾಟಕದಲ್ಲಿ ಮುಸಲ್ಮಾನರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದೆ ಎಂದರು.

ಹಿಜಾಬ್ ವಿಷಯದಲ್ಲಿ ಕೋರ್ಟ್‌ ತೀರ್ಪು ಖಂಡಿಸಿ ಮುಸಲ್ಮಾನರು ರಾಜ್ಯ ಬಂದ್ ಮಾಡಿದಾಗ ಕಾಂಗ್ರೆಸ್ಸಿಗರು ಮುಸಲ್ಮಾನರು ಶಾಂತಿಯುತವಾಗಿ ಬಂದ್ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಕೋರ್ಟ್ ಬಗ್ಗೆಯೂ ಕಾಂಗ್ರೆಸ್ಸಿಗರಿಗೆ ಗೌರವವಿಲ್ಲ ಎಂದರು.

ಸಂತೋಷ್ ಸಾವಿನ ಪ್ರಕರಣ ಬಿಜೆಪಿ ಹೈಕಮಾಂಡ್ ವರೆಗೂ ಹೋಗಿಲ್ಲ.ಹೈಕಮಾಂಡ್ ನಿಂದ ಯಾವುದೇ ಕರೆ ನನಗೆ ಬಂದಿಲ್ಲ ಎಂದರು.

ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಭಾರೀ ಪ್ರತಿಭಟನೆ ನಡೆಸುತ್ತಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.