ನಾನು ಸಚಿವ ಸ್ಥಾನಾಕಾಂಕ್ಷಿ ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ: ವಿಜಯೇಂದ್ರ
ಸಚಿವ ಸ್ಥಾನಕ್ಕೆ ಒತ್ತಡ ಎನ್ನುವುದು ಸತ್ಯಕ್ಕೆ ದೂರ
Team Udayavani, Mar 13, 2022, 2:27 PM IST
ಹುಬ್ಬಳ್ಳಿ: ‘ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ವೇಳೆ ನಾನು ಸಚಿವಾಕಾಂಕ್ಷಿ ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ, ಯಡಿಯೂರಪ್ಪ ತಮ್ಮ ಪುತ್ರನಿಗೆ ಸಚಿವ ಸ್ಥಾನ ಕೊಡಿಸಲು ಒತ್ತಡ ಹೇರುತ್ತಿದ್ದಾರೆ ಎನ್ನುವುದು ಸತ್ಯಕ್ಕೆ ದೂರ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಆಗಿದ್ದು ವೈಯಕ್ತಿಕ ಕಾರಣಕ್ಕಾಗಿ. ಕೆಲ ಸಂಘಟನೆಯ ಕುರಿತು ಚರ್ಚೆ ಮಾಡಿದ್ದೇವೆ ಹೊರತು ಯಾವುದೇ ಸ್ಥಾನಮಾನಕ್ಕಾಗಿ ಅಲ್ಲ ಎಂದರು.
ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ವರಲ್ಲಿ ಬಿಜೆಪಿ ಜಯ ಸಾಧಿಸಿದೆ. ಕರ್ನಾಟಕದ ಮುಂದಿನ ಚುನಾವಣೆಯಲ್ಲಿ ಸಹ ಗೆಲ್ಲಲಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿ ಜನಪರ ಬಜೆಟ್, ಪ್ರಧಾನಿ ಮೋದಿ ಕಾರ್ಯಕ್ರಮದ ಶಕ್ತಿ ಇಟ್ಟುಕೊಂಡು ಚುನಾವಣೆ ಎದುರಿಸಲಿದ್ದೇವೆ. ಕಾಂಗ್ರೆಸ್ ಗೆ ಪಂಚ ರಾಜ್ಯಗಳ ಫಲಿತಾಂಶ ನಿದ್ದೆಗೆಡಿಸಿದೆ. ಇದು ಬಿಜೆಪಿ ಕಾರ್ಯಕರ್ತರಿಗೆ ಆನೆಬಲ ತುಂಬಿದೆ ಎಂದರು.
ಕಾಂಗ್ರೆಸ್ ಗೆ ಯುವಕರು ಹೋಗುತ್ತಿಲ್ಲ. ಅವರ ಸದಸ್ಯತ್ವ ನೋಂದಣಿಗೆ ಹಿನ್ನಡೆ ಆಗುತ್ತಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರೇ ಯುವ ಸಮಾವೇಶದಲ್ಲಿ ಹೇಳಿದ್ದಾರೆ. ಯುವ ಸಮೂಹ ಮೋದಿ ಅವರ ಕಾರ್ಯಕ್ರಮ ನೋಡಿ ಬಿಜೆಪಿಗೆ ಹರಿದುಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟ ಆಗಲಿದೆ. ಆ ಕೆಲಸ ನಾವು ಮಾಡಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ