ಪಂಜಾಬ್‌-ಕೆಕೆಆರ್‌ ಪಂದ್ಯಕ್ಕೆ ಮಳೆ ಭೀತಿ : ಇತ್ತಂಡಗಳಿಗೂ ಗಾಯಾಳುಗಳದ್ದೇ ಚಿಂತೆ


Team Udayavani, Apr 1, 2023, 7:21 AM IST

pun kkr

ಮೊಹಾಲಿ: ಗಾಯದ ಹೊಡೆತಕ್ಕೆ ಸಿಲುಕಿರುವ ಹಾಗೂ ಪ್ರಮುಖ ವಿದೇಶಿ ಆಟ ಗಾರರ ಅನುಪಸ್ಥಿತಿಯಿಂದ ಚಿಂತೆಗೀಡಾಗಿರುವ ಪಂಜಾಬ್‌ ಕಿಂಗ್ಸ್‌ ಮತ್ತು ಕೋಲ್ಕತಾ ನೈಟ್‌ರೈಡರ್ ತಂಡಗಳು ಶನಿವಾರ 16ನೇ ಐಪಿಎಲ್‌ ಅಭಿಯಾನ ಆರಂಭಿಸಲಿವೆ. ಪಂಜಾಬ್‌ನ “ಹೋಮ್‌ ಗ್ರೌಂಡ್‌” ಆಗಿರುವ ಮೊಹಾಲಿ ಈ ಪಂದ್ಯದ ತಾಣ. ಆದರೆ ಈ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ.

ಕಳೆದ ಕೆಲವು ವರ್ಷಗಳಿಂದ ಇತ್ತಂಡಗಳೂ ತಂಡದ ಆಯ್ಕೆ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಸ್ಥಿರ ಪ್ರದರ್ಶನ ನೀಡುತ್ತ ಬಂದಿವೆ. ಎಲ್ಲಿಯೂ ನೆಚ್ಚಿನ ತಂಡಗಳೆಂದು ಗುರುತಿಸಲ್ಪಡಲೇ ಇಲ್ಲ. 2022ರ ಋತುವಿನಲ್ಲಿ ಪಂಜಾಬ್‌ 6ಕ್ಕೆ ಹಾಗೂ 2 ಬಾರಿಯ ಚಾಂಪಿಯನ್‌ ಕೆಕೆಆರ್‌ 7ನೇ ಸ್ಥಾನಕ್ಕೆ ಕುಸಿದಿತ್ತು.

ನೂತನ ನಾಯಕರು
ಎರಡೂ ತಂಡಗಳು ನೂತನ ನಾಯಕರನ್ನು ಹೊಂದಿರುವುದು ವಿಶೇಷ. ಪಂಜಾಬ್‌ ತಂಡವನ್ನು ಶಿಖರ್‌ ಧವನ್‌ ಹಾಗೂ ಕೆಕೆಆರ್‌ ತಂಡವನ್ನು ನಿತೀಶ್‌ ರಾಣಾ ಮುನ್ನಡೆಸಲಿದ್ದಾರೆ. ಕಳೆದ ಸೀಸನ್‌ನಲ್ಲಿ ಕ್ರಮವಾಗಿ ಮಾಯಾಂಕ್‌ ಅಗರ್ವಾಲ್‌ ಹಾಗೂ ಶ್ರೇಯಸ್‌ ಅಯ್ಯರ್‌ ಈ ತಂಡಗಳ ಕಪ್ತಾನರಾಗಿದ್ದರು. ಟ್ರೆವರ್‌ ಬೇಲಿಸ್‌ ಮತ್ತು ಚಂದ್ರಕಾಂತ್‌ ಪಂಡಿತ್‌ ಈ ಬಾರಿಯ ಕೋಚ್‌ ಆಗಿದ್ದಾರೆ.

ಕಾಗದದಲ್ಲಿ ಕೆಕೆಆರ್‌ಗಿಂತ ಪಂಜಾಬ್‌ ತಂಡ ತುಸು ಬಲಿಷ್ಠವಾಗಿ ಗೋಚರಿಸುತ್ತಿದೆ. ಆದರೆ ಇಂಗ್ಲೆಂಡ್‌ನ‌ ಪ್ರಮುಖ ಆಟಗಾರ ಜಾನಿ ಬೇರ್‌ಸ್ಟೊ ಈ ಋತುವಿನಿಂದಲೇ ಬೇರ್ಪಟ್ಟಿದ್ದು ಪಂಜಾಬ್‌ ಪಾಲಿಗೊಂದು ಹಿನ್ನಡೆ. ಇವರ ಸ್ಥಾನವನ್ನು ಆಸ್ಟ್ರೇಲಿಯದ ಮ್ಯಾಥ್ಯೂ ಶಾರ್ಟ್‌ ತುಂಬಲಿದ್ದಾರೆ. ಇವರು ಧವನ್‌ ಜತೆ ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆ ಇದೆ.

ಇಸಿಬಿಯಿಂದ ಇನ್ನೂ ಕ್ಲಿಯರೆನ್ಸ್‌ ಪಡೆಯದ ಲಿಯಮ್‌ ಲಿವಿಂಗ್‌ಸ್ಟೋನ್‌, ರಾಷ್ಟ್ರೀಯ ತಂಡದೊಂದಿಗೆ ಸರಣಿ ಆಡುತ್ತಿರುವ ಕಾಗಿಸೊ ರಬಾಡ ಕೂಡ ಮೊದಲ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಆದರೆ ಸವ್ಯಸಾಚಿಗಳಾದ ಸ್ಯಾಮ್‌ ಕರನ್‌ ಮತ್ತು ಸಿಕಂದರ್‌ ರಝ ಅವರ ಸೇರ್ಪಡೆಯಿಂದ ಲಾಭವಾಗುವ ಸಾಧ್ಯತೆ ಇದೆ. ಕರನ್‌ ಅವರೊಂದಿಗೆ ಅರ್ಷದೀಪ್‌ ಸಿಂಗ್‌, ರಿಷಿ ಧವನ್‌, ರಾಹುಲ್‌ ಚಹರ್‌ ಬೌಲಿಂಗ್‌ ವಿಭಾಗವನ್ನು ನೋಡಿಕೊಳ್ಳಬೇಕಿದೆ.

ಆರ್‌ಸಿಬಿಯಂತೆ ಪಂಜಾಬ್‌ ಕೂಡ ಇನ್ನೂ ಕಪ್‌ ಎತ್ತಿಲ್ಲ. 2014ರಲ್ಲಿ ಫೈನಲ್‌ ತಲುಪಿದ್ದೇ ಅತ್ಯುತ್ತಮ ಸಾಧನೆ.

ರಾಣಾ ಅಚ್ಚರಿಯ ನಾಯಕ
ಕೆಕೆಆರ್‌ ನಿತೀಶ್‌ ರಾಣಾ ಸಾರಥ್ಯದಲ್ಲಿ ಎಂಥ ಪ್ರದರ್ಶನ ನೀಡೀತು ಎಂಬ ಕುತೂಹಲವಿದೆ. ರಾಣಾ ಅವರನ್ನು ನಾಯಕತ್ವಕ್ಕೆ ಆರಿಸಿದ್ದೇ ಒಂದು ಅಚ್ಚರಿ ಹಾಗೂ ಅನಿರೀಕ್ಷಿತ ಬೆಳವಣಿಗೆ.

ಹಾರ್ಡ್‌ ಹಿಟ್ಟರ್ ಹಾಗೂ ಉತ್ತಮ ದರ್ಜೆಯ ಆಲ್‌ರೌಂಡರ್‌ಗಳನ್ನು ಕೆಕೆಆರ್‌ ಹೊಂದಿದೆ. ರಸೆಲ್‌, ಸುನೀಲ್‌ ನಾರಾಯಣ್‌, ವೀಸ್‌, ವೆಂಕಟೇಶ್‌ ಅಯ್ಯರ್‌, ಶಕಿಬ್‌ ಇವರಲ್ಲಿ ಪ್ರಮುಖರು. ಆದರೆ ಬಾಂಗ್ಲಾ ಕ್ರಿಕೆಟಿಗರಾದ ಶಕಿಬ್‌ ಅಲ್‌ ಹಸನ್‌ ಮತ್ತು ಲಿಟನ್‌ ದಾಸ್‌ ಆರಂಭಿಕ ಪಂದ್ಯಕ್ಕೆ ಲಭ್ಯರಿಲ್ಲ.
ತಂಡದ ಅಗ್ರ ಕ್ರಮಾಂಕಕ್ಕೆ ವೀಸ್‌, ರಿಂಕು ಸಿಂಗ್‌, ರೆಹಮಾನುಲ್ಲ ಗುರ್ಬಜ್‌; ಬೌಲಿಂಗ್‌ ವಿಭಾಗಕ್ಕೆ ಸೌಥಿ, ಉಮೇಶ್‌ ಯಾದವ್‌, ಶಾರ್ದೂಲ್‌ ಠಾಕೂರ್‌, ವರುಣ್‌ ಚಕ್ರವರ್ತಿ ಆಧಾರವಾಗಬೇಕಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.