ಕಡಬದಲ್ಲಿ ಮೂರನೇ ದಿನದ ಕಾರ್ಯಾಚರಣೆ ಯಶಸ್ವಿ; ಒಂದು ಕಾಡಾನೆ ಸೆರೆ
Team Udayavani, Feb 23, 2023, 6:35 PM IST
ಸುಬ್ರಹ್ಮಣ್ಯ: ಮೂರನೇ ದಿನದ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸಂಜೆ ವೇಳೆ ಒಂದು ಕಾಡಾನೆಯನ್ನು ಕಾರ್ಯಾಚರಣೆ ತಂಡ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಕಡಬ ತಾಲೂಕಿನ ಐತ್ತೂರು ಗ್ರಾಮದ ಸುಂಕದಕಟ್ಟೆ ಬಳಿಯ ಮುಜೂರು, ಮಂಡೆಕರ ಭಾಗದಲ್ಲಿ ನಾಲ್ಕು ಕಾಡಾನೆ ಇದೆ ಎಂಬ ಮಾಹಿತಿಯಂತೆ ಕಾರ್ಯಾಚರಣೆ ತಂಡ ಪತ್ತೆ ಕಾರ್ಯ ನಡೆಸಿದ್ದರು. ಸುಂಕದಕಟ್ಟೆ-ಕೊಂಬಾರು ರಸ್ತೆಯ ಬಳಿ ಕಾಡಾನೆ ಇರುವುದನ್ನು ತಂಡ ಪತ್ತೆ ಹಚ್ಚಿ ವ್ಯವಸ್ಥಿತವಾಗಿ ಕಾಡಾನೆ ಇರುವಲ್ಲಿ ತೆರಳಿ ವೈದ್ಯರು ಗನ್ ಮೂಲಕ ಅರೆವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಬಳಿಕ ಆನೆಯ ಪ್ರಜ್ಞೆ ಹೋದ ಬಳಿಕ ಕಾಡಾನೆಯನ್ನು ಕಟ್ಟಿ ಹಾಕುವ ಕಾರ್ಯ ನಡೆಸಲಾಗಿದೆ. ಸಾಕಾನೆಗಳ ತಂಡ ಕಾಡಾನೆಯನ್ನು ಪಳಗಿಸಿ ಲಾರಿಗೆ ಹಾಕುವ ಕಾರ್ಯ ನಡೆಯಲಿದೆ ಎಂದು ತಿಳಿದುಬಂದಿದೆ.
ಸೋಮವಾರ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಬಲಿಯಾಗಿದ್ದರು. ಬಳಿಕ ಕಾಡಾನೆ ಸೆರೆಗೆ ಐದು ಸಾಕಾನೆಗಳನ್ನು ತರಿಸಲಾಗಿ, ಮಂಗಳವಾರದಿಂದ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿತ್ತು.
ನಿರ್ಬಂಧ
ಕಾಡಾನೆ ಸೆರೆ ಕಾರ್ಯಾಚರಣೆ ವೀಕ್ಷಣೆಗೆ ಜನರು ಸೇರುವುದರಿಂದ ಕಾರ್ಯಚರಣೆಗೆ ಅಡ್ಡಿಯಾಗುವುದರಿಂದ ಗುರುವಾರ ಕಾರ್ಯಾಚರಣೆ ಬಳಿ ಜನರಿಗೆ ನಿರ್ಬಂಧ ವಿಧಿಸಲಾಗಿತ್ತು, ಅಲ್ಲದೆ ಸುಂಕದಕಟ್ಟೆ-ಕೊಂಬಾರು ರಸ್ತೆಯಲ್ಲಿ ವಾಹನ ಓಡಾಟ ನಿರ್ಬಂಧಿಸಲಾಗಿತ್ತು. ಕಾಡಾನೆ ಸಾಗುವ ಹಾಗೂ ಕಾರ್ಯಚರಣೆ ನಡೆಯುವ ವ್ಯಾಪ್ತಿಯಲ್ಲಿ ಮೆಸ್ಕಾಂ ವತಿಯಿಂದ ಲೈನ್ ಕಡಿತ ಮಾಡುವ ಕಾರ್ಯ ಮಾಡುವ ಮೂಲಕ ಮುಂಜಾಗ್ರತೆ ವಹಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ