ಕಾಂತಾರ ಬೌದ್ಧಿಕ ಅಪಹಾಸ್ಯದ ಸಿನಿಮಾ…ಚೇತನ್ ಆಯ್ತು ಈಗ ಬಂಗಾಲಿ ನಿರ್ದೇಶಕ ಬಸು ಟೀಕೆ

ನಾಯಕ ಪಾತ್ರಧಾರಿಯ ಕೊನೆಯ ಹಂತ ನಗೆಪಾಟೀಲಿನದ್ದಾಗಿದೆ

Team Udayavani, Oct 28, 2022, 5:55 PM IST

ಕಾಂತಾರ ಬೌದ್ಧಿಕ ಅಪಹಾಸ್ಯದ ಸಿನಿಮಾ…ಚೇತನ್ ಆಯ್ತು ಈಗ ಬಂಗಾಲಿ ನಿರ್ದೇಶಕ ಬಸು ಟೀಕೆ

ನವದೆಹಲಿ: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಸಿನಿಮಾ ಕನ್ನಡ, ಹಿಂದಿ, ಮಲಯಾಳಂ ಭಾಷೆಯಲ್ಲಿಯೂ ಭರ್ಜರಿ ಯಶಸ್ವಿ ಪ್ರದರ್ಶನ ಕಂಡು 200 ಕೋಟಿ ರೂ. ಗಳಿಕೆ ಕಂಡಿರುವ ನಡುವೆಯೇ ನಟ ಚೇತನ್ ಚಿತ್ರದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗಿತ್ತು. ಕಾಂತಾರ ಸಿನಿಮಾದಲ್ಲಿನ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುವುದಿಲ್ಲ ಎಂದು ನಟ ಚೇತನ್ ಆರೋಪಿಸಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಮತ್ತೊಬ್ಬ ಸಿನಿಮಾ ನಿರ್ದೇಶಕ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಪಶ್ಚಿಮಬಂಗಾಳದ ನಿರ್ದೇಶಕ ಅಭಿರೂಪ್ ಬಸು ಎಕಾನಾಮಿಕ್ಸ್ ಟೈಮ್ಸ್ ಗೆ ನೀಡಿರುವ ಸಂದರ್ಶನದಲ್ಲಿ ಕಾಂತಾರ ಸಿನಿಮಾದ ಬಗ್ಗೆ ಕಟುವಾಗಿ ಟೀಕಿಸಿದ್ದು, ಈ ಸಿನಿಮಾ ಜನರು ದೈವದ ಮಧ್ಯಪ್ರವೇಶವನ್ನು ನಂಬುವಂತೆ ಒತ್ತಾಯಿಸಿದೆ ಎಂದು ದೂರಿದ್ದಾರೆ.

ಕಾಂತಾರ ಸಿನಿಮಾ ಬುದ್ಧಿವಂತಿಕೆಯ ಅಪಹಾಸ್ಯ ಎಂದೇ ಭಾವಿಸುತ್ತೇನೆ. ಈ ಚಿತ್ರವನ್ನು ತುಂಬಾ ಕೆಟ್ಟದಾಗಿ ನಿರ್ಮಾಣ ಮಾಡಲಾಗಿದೆ. ಕಳಪೆ ಗುಣಮಟ್ಟದ್ದಾಗಿದೆ. ಈ ಸಿನಿಮಾದಲ್ಲಿ ಯಾವುದೇ ನೈಜವಾದ ಪಾತ್ರಗಳಿಲ್ಲ. ಸ್ವಯಂ ಘೋಷಿತ ಕಥೆಯಲ್ಲಿನ ತಿರುವುಗಳು ಅಪ್ರಾಮಾಣಿಕತೆ ಮತ್ತು ಗಿಮಿಕ್ ಗಳಿಂದ ಕೂಡಿದೆ. ನಾಯಕ ಪಾತ್ರಧಾರಿಯ ಕೊನೆಯ ಹಂತ ನಗೆಪಾಟಲು ಎಂದು ಬಸು ವ್ಯಂಗ್ಯವಾಡಿದ್ದಾರೆ.

ನಾನು ಈ ಸಿನಿಮಾದ ಬಗ್ಗೆ ನಿಜಕ್ಕೂ ಹೆಚ್ಚು ಕುತೂಹಲಿಗನಾಗಿಲ್ಲ. ಪೌರಾಣಿಕ ಪಾತ್ರಗಳ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸಾಬೀತುಪಡಿಸಲು ದೇಶದಲ್ಲಿ ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಅತಿಮಾನುಷ ಶಕ್ತಿಯನ್ನು ನಂಬುವಂತೆ ಒತ್ತಾಯಿಸುವ ಕಾಂತಾರ ಸಿನಿಮಾ ಇಂತಹದ್ದೇ ಭಾವನೆಗಳ, ಕಥಾ ಹಂದರದ ಸಿನಿಮಾಗಳಿಗೆ ಆಘಾತಕಾರಿಯಾಗಲಿಕ್ಕಿಲ್ಲ ಎಂದು ಭಾವಿಸುವುದಾಗಿ ಬಸು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಯಾರೀತ ಅಭಿರೂಪ್ ಬಸು?

ಕೋಲ್ಕತಾದ ಪ್ರಶಸ್ತಿ ವಿಜೇತ ನಿರ್ದೇಶಕ ಅಭಿರೂಪ್ ಬಸು. ಚಿತ್ರಕಥೆಗಾರ ಕೂಡ ಹೌದು. ಅಭಿರೂಪ್ ಜೆಕ್ ರಿಪಬ್ಲಿಕ್ ನ ಪ್ರತಿಷ್ಠಿತ ಪ್ರೇಗ್ ಫಿಲ್ಮ್ ಸ್ಕೂಲ್ ನಲ್ಲಿ ಚಲನಚಿತ್ರಗಳ ಬಗ್ಗೆ ಅಭ್ಯಸಿಸಿದ್ದು, ಇರಾನ್ ಸಿನಿಮಾ ನಿರ್ಮಾಪಕ ಮಣಿ ಹಾಘಿಗಿ ಅವರೊಂದಿಗೆ ಚಿತ್ರಕಥೆಯ ಅಧ್ಯಯನ ನಡೆಸಿರುವುದಾಗಿ ವರದಿ ತಿಳಿಸಿದೆ.

ಬಸು ನಿರ್ದೇಶನದ Meal ಮತ್ತು Laali ಸಿನಿಮಾ 70ಕ್ಕೂ ಅಧಿಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಪರ್ಧಿಸಿದ್ದು, ಹಲವಾರು ಪ್ರಶಸ್ತಿಗಳನ್ನು ಪಡೆದಿದೆ. ಇತ್ತೀಚೆಗಷ್ಟೇ ಗುಡ್ ಗುಡಿ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.