ವಾಸ್ತುಶಿಲ್ಪದ ಅಚ್ಚರಿ: ಮೂಡುಬಿದಿರೆ ಸಾವಿರಕಂಬದ ಬಸದಿಗೆ ಮೂರನೇ ಸ್ಥಾನ

ಜೈನ ಬಸದಿಗಳ ವಿಶ್ವಪರಂಪರೆಯ ವಾಸ್ತುಶಿಲ್ಪದ ಅಚ್ಚರಿ

Team Udayavani, Aug 24, 2020, 12:12 PM IST

ವಾಸ್ತುಶಿಲ್ಪದ ಅಚ್ಚರಿ: ಮೂಡುಬಿದಿರೆ ಸಾವಿರಕಂಬದ ಬಸದಿಗೆ ಮೂರನೇ ಸ್ಥಾನ

ಮೂಡುಬಿದಿರೆ: ವಿಶ್ವ ಪರಂಪರೆಯ ಪವಿತ್ರ ತಾಣಗಳಲ್ಲಿ ಒಂದಾದ ಜೈನ ಕಾಶಿ ಮೂಡುಬಿದಿರೆಯ ಸಾವಿರ ಕಂಬದ ಬಸದಿ ಎಂದೇ ಪ್ರಸಿದ್ಧವಾದ ತ್ರಿಭುವನ ತಿಲಕ ಚೂಡಾಮಣಿ ಬಸದಿಯು ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿಗಳ ಪೈಕಿ ಮೂರನೇ ಸ್ಥಾನ ಪಡೆದಿದೆ ಎಂದು ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಅತ್ಯಂತ ಸೂಕ್ಷ್ಮ ಕೆತ್ತನೆಯ ತೀರ್ಥಂಕರ ಜಿನ ಬಿಂಬಗಳು, ಸರ್ವ ಧರ್ಮ ಸಮನ್ವಯದ ಅನೇಕ ಕಲ್ಲಿನ ಚಿತ್ತಾರಗಳು, ಬೆಡಗಿನ ಭಿತ್ತಿಚಿತ್ರಗಳುಳ್ಳ ವಾಸ್ತುವೈಭವದ ಬಸದಿಗಳ ಪಟ್ಟಿಯಲ್ಲಿ ಸಾವಿರ ಕಂಬದ ಬಸದಿಯು ರಾಜಸ್ಥಾನದ ರಣಾಕ್‌ಪುರ್‌ ಬಸದಿ, ದಿಲ್‌ವಾರಾ ದೇಗುಲದ ಅನಂತರದ ಸ್ಥಾನದಲ್ಲಿ ಗುರುತಿಸಲ್ಪಟ್ಟಿರುವುದು ದಿಲ್ಲಿಯ ಜೈನ ಸನ್ಸ್‌ ಮೂಲಕ ಖಚಿತವಾಗಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಚತುರ್ಮುಖ ಬಸದಿಗೆ ನಾಲ್ಕನೇ ಸ್ಥಾನ
ದೇಶದ 13 ಇತರ ಬಸದಿಗಳಲ್ಲಿ ನಾಲ್ಕನೇ ಸ್ಥಾನವನ್ನು ಕಾರ್ಕಳದ ಚತುರ್ಮುಖ ಬಸದಿ ಗಳಿಸಿದೆ. ಉಳಿದಂತೆ ಕ್ರಮವಾಗಿ ಗುಜರಾತ್‌ನ ಭಾವನಗರ ಜಿಲ್ಲೆಯ ಪಾಲಿಟಾನದ ಜೈನ ಮಂದಿರಗಳು, ಗಿರ್‌ನಾರ್‌ ಜೈನ ಮಂದಿರಗಳು, ಹತೀಸಿಂಗ್‌ ಜೈನ ಮಂದಿರ, ಮಧ್ಯಪ್ರದೇಶದ ಜೈನ ಮಂದಿರಗಳು, ಹನುಮಾನ್‌ ತಾಲ್‌ ಬಸದಿ, ಪಾರ್ಶ್ವನಾಥ ಬಸದಿ, ಶ್ರೀ ದಿಗಂಬರ್‌ ಜೈನ್‌ ಲಾಲ್‌ ಮಂದಿರ್‌, ಕರ್ನಾಟಕದ ಮಾಡಗೊಂಡನಹಳ್ಳಿಯ ಮಂದಾರಗಿರಿ ಬೆಟ್ಟದ ಗುರುಮಂದಿರ (ಪೀಕಾಕ್‌ ಜೈನ ದೇವಾಲಯ) ಮತ್ತು ಝಾರ್ಖಂಡ್‌ನ‌ ಶ್ರೀ ಸಮ್ಮೇದ್‌ ಶಿಖರ್‌ಜೀ ಇವುಗಳನ್ನು ಗುರುತಿಸಲಾಗಿದೆ ಎಂದು ಸ್ವಾಮೀಜಿ ಅವರು ತಿಳಿಸಿದ್ದಾರೆ.

ತ್ರಿಕಾಲ ಪೂಜೆಯ ವೇಳೆಗೆ ಮಾತ್ರ ದರ್ಶನ
ಪ್ರತಿವರ್ಷ ವಿಶ್ವದೆಲ್ಲೆಡೆಯಿಂದ ಸಹಸ್ರಸಂಖ್ಯೆಯಲ್ಲಿ ಕಲಾಪ್ರಿಯರು, ಶಾಂತಿಪ್ರಿಯರು ಬಸದಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಈ ಬಾರಿ ಕೊರೊನಾದಿಂದಾಗಿ ಬಸದಿಗೆ ಭೇಟಿ ನೀಡುವ ಯಾತ್ರಿಕರ ಸಂಖ್ಯೆ ಕಡಿಮೆಯಾಗಿದೆ. ಸದ್ಯ ನಿತ್ಯ ತ್ರಿಕಾಲ ಪೂಜೆಯ ವ್ಯವಸ್ಥೆ ಮಾಡಲಾಗಿದ್ದು, ಆ ಸಮಯದಲ್ಲಿ ಮಾತ್ರ ಬಸದಿ ತೆರೆದಿಡಲಾಗುತ್ತದೆ. ಕೊರೋನಾ ಆತಂಕ ಇಳಿಮುಖವಾದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಭಿವೃದ್ಧಿ
ಬಸದಿಯ ಸುತ್ತ ಒಳಚರಂಡಿ, ಬಸದಿ ಒಳಾಂಗಣ ಜೀರ್ಣೋದ್ಧಾರ ಛಾವಣಿಗೆ ತಾಮ್ರ ಹೊದಿಸುವುದು ಮೊದಲಾದ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರಕಾರ ಘೋಷಿಸಿದಂತೆ 2 ಕೋಟಿ ರೂ.ಗಳ ಅನುದಾನ ಪ್ರವಾಸೋದ್ಯಮ ಇಲಾಖೆಯಿಂದ ಬಿಡುಗಡೆಯಾಗಿತ್ತು. ಆದರೆ ಕೊರೊನಾದಿಂದಾಗಿ ಕಾಮಗಾರಿ ವಿಳಂಬವಾಗಿದೆ. ಈ ಎಲ್ಲ ಕಾಮಗಾರಿಗಳು ಪರಂಪರೆಗೆ ಪೂರಕವಾಗಿ ಆದಷ್ಟು ಶೀಘ್ರವಾಗಿ ಆಗಲಿ ಎಂದು ಸ್ವಾಮೀಜಿ ಆಶಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.