ಜಡ್ಜ್ ಗಳಿಗೆ ಬೆದರಿಕೆ : ಸುಪ್ರೀಂ ಕೋರ್ಟ್ ಕಳವಳ
ಸಿಬಿಐ, ಐಬಿಯಿಂದಲೂ ಯಾವುದೇ ಪ್ರಯೋಜನವಿಲ್ಲ ಎಂದ ಸಿಜೆಐ
Team Udayavani, Aug 6, 2021, 6:55 PM IST
ನವ ದೆಹಲಿ : ಜಡ್ಜ್ ಗಳಿಗೆ ಬೆದರಿಕೆ ಕರೆಗಳು ಹಾಗೂ ಅವಹೇಳನಕಾರಿ ಸಂದೇಶಗಳು ಕಳುಹಿಸುವಂಥ ಪ್ರಕರಣಗಳು ಹೆಚ್ಚುತ್ತಿವೆ. ನ್ಯಾಯಾಂಗಕ್ಕೆ ಈ ವಿಚಾರದಲ್ಲಿ ಗುಪ್ತಚರ ಸಂಸ್ಥೆ (ಐಬಿ)ಯಾಗಲೀ, ಸಿಬಿಐಯಾಗಲೀ ನೆರವಿಗೆ ಬರುತ್ತಿಲ್ಲ. ಈ ಕುರಿತು ದೂರು ಸಲ್ಲಿಸುವ ಸ್ವಾತಂತ್ರ್ಯವೂ ನ್ಯಾಯಾಂಗ ಅಧಿಕಾರಿಗಳಿಗೆ ಇಲ್ಲದಾಗಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಜಾರ್ಖಂಡ್ನ ಧನ್ ಬಾದ್ ನಲ್ಲಿ ಜಡ್ಜ್ ಉತ್ತಮ್ ಆನಂದ್ ಅವರನ್ನು ಆಟೋ ಡಿಕ್ಕಿ ಹೊಡೆಸಿ ಕೊಲೆ ಮಾಡಿದ ಪ್ರಕರಣದ ಬೆನ್ನಲ್ಲೇ ನ್ಯಾಯಾಲಯದಿಂದ ಈ ಅಭಿಪ್ರಾಯ ಹೊರಬಿದ್ದಿದೆ. ಜತೆಗೆ, ನ್ಯಾಯಾಂಗ ಅಧಿಕಾರಿಗಳಿಗೆ ಯಾವ ರೀತಿ ಭದ್ರತೆಯನ್ನು ಒದಗಿಸುತ್ತಿದ್ದೀರಿ ಎಂಬ ಬಗ್ಗೆ ವಿವರಣೆ ಇರುವ ಸ್ಥಿತಿಗತಿ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೂ ಕೋರ್ಟ್ ಸೂಚಿಸಿದೆ.
ಇದನ್ನೂ ಓದಿ :ಕ್ಯಾನ್ಸರ್ ಪೀಡಿತೆ ಅಕ್ಕನನ್ನು ಬದುಕಿಸಿಕೊಳ್ಳಲು ಬೀದಿಯಲ್ಲಿ ಕಾಳು ಮಾರುತ್ತಿರುವ ಪುಟ್ಟ ಬಾಲಕ
ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಹೈಕೋರ್ಟ್ ಜಡ್ಜ್ ಗಳ ಮೇಲೆ ಕೇವಲ ದೈಹಿಕವಾಗಿ ಮಾತ್ರವಲ್ಲ, ವಾಟ್ಸ್ ಆ್ಯಪ್- ಫೇಸ್ ಬುಕ್ ಗಳಲ್ಲಿ ಅವಹೇಳನಕಾರಿ ಸಂದೇಶಗಳ ಮೂಲಕ ಮಾನಸಿಕವಾಗಿಯೂ ಬೆದರಿಕೆ ಹಾಕಲಾಗುತ್ತದೆ. ಒಂದೆರಡು ಪ್ರದೇಶಗಳಲ್ಲಿ ಈ ಬಗ್ಗೆ ಸಿಬಿಐ ತನಿಖೆಗೂ ಕೋರ್ಟ್ಗಳು ಆದೇಶಿಸಿವೆ. ಈ ಪೈಕಿ ಒಂದು ಕಡೆ ಸಿಬಿಐ ಏನನ್ನೂ ಮಾಡಿಲ್ಲ. ಸಿಬಿಐನ ವರ್ತನೆಯಲ್ಲಿ ಬದಲಾವಣೆಯನ್ನು ನಾವು ನಿರೀಕ್ಷಿಸಿದ್ದೆವು. ಆದರೆ, ಅವರ ವರ್ತನೆಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ ಎಂದು ಸಿಜೆಐ ಎನ್.ವಿ. ರಮಣ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ