ಗ್ರೆನೇಡ್ ದಾಳಿ ಬೆನ್ನಲ್ಲೇ ಕಾಶ್ಮೀರದಲ್ಲಿ ಮೂವರು ಸಕ್ರಿಯ ಭಯೋತ್ಪಾದಕರ ಬಂಧನ
Team Udayavani, Feb 12, 2022, 11:51 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಪ್ರದೇಶದಲ್ಲಿ ಅಲ್-ಬದ್ರ್ ನಿಷೇಧಿತ ಉಗ್ರಗಾಮಿ ಸಂಘಟನೆಯ ಮೂವರು ಸಕ್ರಿಯ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರು ಮತ್ತು ಇತರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ “ಮೂವರು ಸಕ್ರಿಯ ಅಲ್-ಬದ್ರ್ ಭಯೋತ್ಪಾದಕರನ್ನು ಡಾಂಗಿವಾಚಿ ಗ್ರಾಮದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಡಿಪೋರಾದಲ್ಲಿ ಶುಕ್ರವಾರ ಸಂಜೆ ಪೊಲೀಸ್ ಮತ್ತು ಬಿಎಸ್ಎಫ್ ಜಂಟಿ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದ ಘಟನೆಯ ಬೆನ್ನಲ್ಲೇ ಉಗ್ರರನ್ನು ಬಂಧಿಸಲಾಗಿದೆ. ದಾಳಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು, ಇತರ ನಾಲ್ವರು ಸಿಬ್ಬಂದಿಯನ್ನು ಗಾಯಗೊಂಡಿದ್ದರು.
ಬಂಧಿತ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಕಾನೂನಿನ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.