ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ವಿಜಯಪುರ ಪೊಲೀಸರಿಂದ ಮೂವರ ಬಂಧನ
Team Udayavani, Apr 15, 2021, 10:39 PM IST
ವಿಜಯಪುರ : ನಗರದ ಆಶ್ರಮ ರಸ್ತೆಯ ಪಾನ್ಶಾಪ್ ಮುಂದೆ ನಿಂತು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ, ನಗದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಆರಮ ರಸ್ತೆಯಲ್ಲಿನ ರಾಜು ಪಾನ್ಶಾಪ್ ಎದುರು ಕ್ರಿಕೆಟ್ ಬಟ್ಟಿಂಗ್ ನಡೆಯುವ ಕುರಿತು ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಕಾಳಿಕಾ ನಗರ ನಿವಾಸಿ ಸೋಮನಾಥ ಚನ್ನಪ್ಪ ಹಿರೊಳ್ಳಿ (28), ತೊರವಿ ನವರಸರಪುರ ನಿವಾಸಿ ಹಮೀದ್ ಬಾಬುಸಾಬ್ ಜಹಗೀರದಾರ (40) ಹಾಗೂ ಸಿಂದಗಿ ಮೂಲದ ಶರಣಪ್ಪ ಶಂಕ್ರಪ್ಪ ಜಹಾಗೀರದಾರ (40) ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಬಂಧಿತ ಆರೋಪಿಗಳು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ.
ಬಂಧಿತರರಿಂದ ಎರಡು ಮೊಬೈಲ್ ಹಾಗೂ 39,300 ರೂ. ನಗದು ಹಣ ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯಲ್ಲಿ ಅಪರಾಧ ವಿಭಾಗದ ಸಿಪಿಐ ಸುರೇಶ ಬೆಂಡೆಗುಂಬಳ, ಅನಿಲ ದೊಡಮನಿ, ರಾಜು ನಾಯಕ, ಎಂ.ಎಂ.ಅಂಬಿಗೇರ, ಐ.ಎ.ಕೋಟ್ಯಾಳ ಇವರು ಪಾಲ್ಗೊಂಡಿದ್ದರು.
ಇದನ್ನೂ ಓದಿ :ದೇಶದಲ್ಲಿ ಕೋವಿಡ್ ಅಟ್ಟಹಾಸದ ಆತಂಕ : NEET ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ