ಆಂಧ್ರದಲ್ಲಿ ಧಾರಾಕಾರ ಮಳೆ; ಮೂವರ ಸಾವು, 30 ಮಂದಿ ಕಣ್ಮರೆ: ದೇವಸ್ಥಾನ, ಹಳ್ಳಿ ಮುಳುಗಡೆ
ಚೆಯ್ಯುರು ನದಿ ಉಕ್ಕಿ ಹರಿದ ಪರಿಣಾಮ ಹಲವಾರು ಹಳ್ಳಿಗಳು ಜಲಾವೃತಗೊಂಡಿದೆ.
Team Udayavani, Nov 19, 2021, 1:42 PM IST
ಹೈದರಬಾದ್: ಧಾರಾಕಾರ ಮಳೆ, ಪ್ರವಾಹದ ಪರಿಣಾಮ ಮೂವರು ಸಾವನ್ನಪ್ಪಿದ್ದು, 30 ಮಂದಿ ನಾಪತ್ತೆಯಾಗಿರುವ ಘಟನೆ ಶುಕ್ರವಾರ(ನವೆಂಬರ್ 19) ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಅಣೆಕಟ್ಟಿನ ನೀರಿನ ಮಟ್ಟ ಮೀರಿ ಹರಿದಿದ್ದು ಹಲವಾರು ಹಳ್ಳಿಗಳು ಜಲಾವೃತವಾಗಿದೆ. ನಂದಾಲುರ್ ನಲ್ಲಿ ಸ್ವಾಮಿ ಆನಂದ ದೇವಸ್ಥಾನ ಮುಳುಗಡೆಯಾಗಿರುವುದಾಗಿ ವರದಿ ತಿಳಿಸಿದೆ.
ತಮಿಳುನಾಡು ಮತ್ತು ಆಂಧ್ರಪ್ರದೇಶದ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ಶುಕ್ರವಾರ ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದೆ. ಚೆಯ್ಯುರು ನದಿ ಉಕ್ಕಿ ಹರಿದ ಪರಿಣಾಮ ಹಲವಾರು ಹಳ್ಳಿಗಳು ಜಲಾವೃತಗೊಂಡಿದೆ.
ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲಸೀಮಾ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ನೆಚ್ಚರಿಕೆ ನೀಡಿತ್ತು ಎಂದು ವರದಿ ತಿಳಿಸಿದೆ.
ಭಾರೀ ಮಳೆಗೆ ತಿರುಪತಿ ಕಂಡು ಕೇಳರಿಯದ ಪ್ರವಾಹ ಸ್ಥಿತಿಗೆ ಕಂಗೆಟ್ಟು ಹೋಗಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಸಾವಿರಾರು ಭಕ್ತರು ಪರದಾಡುವಂತಾಗಿದೆ. ತಿರುಮಲ ಬೆಟ್ಟದಲ್ಲಿರುವ ದೇವಸ್ಥಾನದ ನಾಲ್ಕು ರಸ್ತೆಗಳು ಪ್ರವಾಹದಿಂದ ಆವೃತ್ತವಾಗಿದ್ದು, ಭಕ್ತರು ಹರಸಾಹಸಪಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ