ಜಮ್ಮು-ಕಾಶ್ಮೀರ: ಮೂವರು ಲಷ್ಕರ್ ಭಯೋತ್ಪಾದಕರ ಬಂಧನ, ಶಸ್ತ್ರಾಸ್ತ್ರ, ಸ್ಫೋಟಕ ವಶ
ಉಗ್ರರು ಸರ್ ಪಂಚ್ ಹತ್ಯೆಯ ಪ್ರಕರಣದಲ್ಲಿ ಶಾಮೀಲಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, May 23, 2022, 3:37 PM IST
ಜಮ್ಮು-ಕಾಶ್ಮೀರ: ಲಷ್ಕರ್ ಎ ತೊಯ್ಬಾ ಸಂಘಟನೆಯ ಮೂವರು ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ (ಮೇ 23) ಬಂಧಿಸಿದ್ದು, ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಐಪಿಎಲ್ ಪ್ಲೇ ಆಫ್ ಗೆ ವರುಣನ ಕಾಟ; ಗಾಳಿಗೆ ಹಾರಿ ಹೋಯ್ತು ಈಡನ್ ಗಾರ್ಡನ್ ನ ಹೊದಿಕೆ!
ಬಂಧಿತ ಉಗ್ರರು ಬಾರಾಮುಲ್ಲಾದ ಪಠಾಣ್ ಪ್ರದೇಶದ ಸರ್ ಪಂಚ್ ಹತ್ಯೆಯ ಪ್ರಕರಣದಲ್ಲಿ ಶಾಮೀಲಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 15ರಂದು ಗೋಶ್ ಬುಘ್ ನ ಮಂಝೂರ್ ಅಹ್ಮದ್ ಬಾಂಗೂ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ಶಾಮೀಲಾಗಿರುವುದಾಗಿ ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿತ ಉಗ್ರರನ್ನು ನೂರ್ ಮೊಹಮ್ಮದ್ ಯಾಟೂ, ಮೊಹಮ್ಮದ್ ರಫೀಕ್ ಪರ್ರೆ ಮತ್ತು ಆಶೀಖ್ ಹುಸೈನ್ ಪರ್ರೆ ಎಂದು ಗುರುತಿಸಲಾಗಿದ್ದು, ಈ ಮೂವರು ಗೋಶ್ ಬುಘ್ ನಿವಾಸಿಗಳು ಎಂದು ಬಾರಾಮುಲ್ಲಾ ಎಸ್ ಎಸ್ ಪಿ ರಾಯೀಸ್ ಅಹ್ಮದ್ ಭಟ್ ತಿಳಿಸಿದ್ದಾರೆ.
ಬಂಧಿತ ಭಯೋತ್ಪಾದಕರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಲಷ್ಕರ್ ಎ ತೊಯ್ಬಾದ ಮೊಹಮ್ಮದ್ ಅಫ್ಜಲ್ ಲೋನ್ ಜತೆ ಸಂಪರ್ಕದಲ್ಲಿದ್ದರು ಎಂದು ವರದಿ ತಿಳಿಸಿದೆ. ಬಂಧಿತ ಉಗ್ರರಿಂದ ಮೂರು ಪಿಸ್ತೂಲ್, ಮೂರು ಗ್ರೆನೇಡ್ಸ್ ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂವಿಧಾನದ ಕುರಿತು ವಿವಾದ : ಕೇರಳ ಸಚಿವ ಸಾಜಿ ಚೆರಿಯನ್ ರಾಜೀನಾಮೆ
ಕೇರಳ: ಸಂವಿಧಾನ ವಿರೋಧಿ ಹೇಳಿಕೆ:ಭಾರೀ ಆಕ್ರೋಶದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಸಾಜಿ ರಾಜೀನಾಮೆ
ಮುಂಬಯಿಯಲ್ಲಿ ಮುಂದುವರಿದ ವರ್ಷಧಾರೆ; ಭೂಕುಸಿತ-ತಗ್ಗುಪ್ರದೇಶ ಜಲಾವೃತ, ಟ್ರಾಫಿಕ್ ಜಾಮ್
ಗೋವಾ ರಾಜ್ಯಾದ್ಯಂತ ಭಾರಿ ಮಳೆ ; ಜನಜೀವನ ಅಸ್ತವ್ಯಸ್ಥ
ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ; ಉಪರಾಷ್ಟ್ರಪತಿಯಾಗಿ ಆಯ್ಕೆ?
MUST WATCH
ಹೊಸ ಸೇರ್ಪಡೆ
ಸಂವಿಧಾನದ ಕುರಿತು ವಿವಾದ : ಕೇರಳ ಸಚಿವ ಸಾಜಿ ಚೆರಿಯನ್ ರಾಜೀನಾಮೆ
ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್
ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
ಹೈಕೋರ್ಟ್ ಸೂಚನೆಯಂತೆ ವಿರೂಪಾಪೂರಗಡ್ಡಿ ಹಳೆ ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ
ಸೈನಿಕ ಹುಳುವಿನ ಕೀಟ ಬಾಧೆ ತಡೆಯಲು ಪರಿಹಾರ