ಮೂವರು ಸಚಿವರ ಖಾತೆಗಳಲ್ಲಿ ಮತ್ತೆ ಬದಲಾವಣೆ : ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ
Team Udayavani, Jan 25, 2021, 4:32 PM IST
ಬೆಂಗಳೂರು: ಬಿಎಸ್ ವೈ ಸಂಪುಟದ ಸಚಿವರುಗಳ ಖಾತೆಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಡಾ.ಕೆ ಸುಧಾಕರ್, ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ಅವರುಗಳ ಖಾತೆಯನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ರಾಜ್ಯಪಾಲರ ಅಂಕಿತವೂ ದೊರೆತಿದೆ.
ಆರೋಗ್ಯ ಸಚಿವ ಕೆ ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ ಖಾತೆ ನೀಡಲಾಗಿದೆ. ಮೊನ್ನೆ ಖಾತೆ ಬದಲಾವಣೆ ಸಂದರ್ಭದಲ್ಲಿ ಈ ಖಾತೆಯನ್ನು ಮಾಧುಸ್ವಾಮಿಯವರಿಗೆ ನೀಡಲಾಗಿತ್ತು. ಇದಕ್ಕೆ ಸುಧಾಕರ್ ಆಕ್ಷೇಪ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ:ಮುಂದುವರಿದ ಖಾತೆ ಸಂಗೀತ ಕುರ್ಚಿ: ಮತ್ತೆ ಸಚಿವರ ಖಾತೆ ಬದಲಾವಣೆಗೆ ಮುಂದಾದ ಸಿಎಂ!
ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ ಸಿ ಮಾಧುಸ್ವಾಮಿ ಅವರಿಗೆ ಖಾತೆ ಬದಲಾವಣೆ ಮಾಡಿ ಪ್ರವಾಸೋದ್ಯಮ, ಪರಿಸರ ಖಾತೆ ಮತ್ತು ಪರಿಸರ ವಿಜ್ಞಾನ ಖಾತೆಯನ್ನು ನೀಡಲಾಗಿದೆ.
ಪ್ರವಾಸೋದ್ಯ ಸಚಿವರಾಗಿದ್ದ ಆನಂದ್ ಸಿಂಗ್ ಅವರಿಗೆ ಮೂಲಸೌಕರ್ಯ ಅಭಿವೃದ್ಧಿ ಇಲಾಖ ಹಾಗೂ ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ