Wrestlers: ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ- ಕೇಂದ್ರಕ್ಕೆ ಕುಸ್ತಿಪಟುಗಳ ಎಚ್ಚರಿಕೆ
Team Udayavani, May 30, 2023, 5:41 PM IST
ನವದೆಹಲಿ: ದೆಹಲಿಯ ಜಂತರ್ಮಂತರ್ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಹೊರಹಾಕಿದ್ದಕ್ಕೆ ಆಕ್ರೋಶಗೊಂಡಿರುವ ಕುಸ್ತಿಪಟುಗಳು ತಾವು ದೇಶಕ್ಕೋಸ್ಕರ ಕಷ್ಟಪಟ್ಟು ಸಂಪಾದಿಸಿರುವ ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಡಬ್ಲುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಜಂತರ್ ಮಂತರ್ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ಧ ಭಾರತೀಯ ಕುಸ್ತಿಪಟುಗಳನ್ನು ಜಂತರ್ ಮಂತರ್ನಿಂದ ಪೋಲಿಸರು ಹೊರಹಾಕಿದ್ದರು. ಆದರೂ ಛಲ ಬಿಡದ ಅವರು ಇಂಡಿಯಾ ಗೇಟ್ನಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಪ್ರಾಣ ಇರುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ 2016 ರ ಒಲಂಪಿಕ್ ಕಂಚು ವಿಜೇತೆ ಸಾಕ್ಷಿ ಮಲಿಕ್, ʻಕುಸ್ತಿ ಪಟುಗಳು ಇಂದು ಸಂಜೆ 6 ಗಂಟೆಗೆ ಹರಿದ್ವಾರಕ್ಕೆ ತೆರಳಿ ತಮ್ಮ ಪದಕಗಳನ್ನು ಗಂಗಾ ನದಿಗೆ ಹಾಕಲಿದ್ದಾರೆʼ ಎಂದಿದ್ದಾರೆ.
ಭಾನುವಾರ ದೆಹಲಿಯ ಜಂತರ್ ಮಂತರ್ನಲ್ಲಿ ಕಾನೂನು, ಸುವ್ಯವಸ್ಥೆ ಉಲ್ಲಂಘಿಸಿದ ಆರೋಪದಲ್ಲಿ ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಮತ್ತು ಭಜರಂಗ್ ಪೂನಿಯಾ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದರು.
ಇದು ದೇಶಾದ್ಯಂತ ಭಾರಿ ಟೀಕೆಗೆ ಗುರಿಯಾಗಿತ್ತು. ಜಾವಲಿನ್ ಚಾಂಪಿಯನ್ ನೀರಜ್ ಛೋಪ್ರಾ, ಶೂಟರ್ ಅಭಿನವ್ ಬಿಂದ್ರಾ ಸೇರಿ ಅನೇಕರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದರು.
ಇದನ್ನೂ ಓದಿ: Excise policy; ದೆಹಲಿ ಮಾಜಿ ಡಿಸಿಎಂ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
— Sakshee Malikkh (@SakshiMalik) May 30, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ