ಸಂಕಷ್ಟದಲ್ಲಿ ಅಬ್ಬರಿಸಿದ ತಿಲಕ್ ವರ್ಮ; ಆರ್ ಸಿಬಿಗೆ 172 ರನ್ ಗುರಿ ನೀಡಿದ ಮುಂಬೈ
Team Udayavani, Apr 2, 2023, 9:47 PM IST
ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಸಕ್ತ ಐಪಿಎಲ್ ನ ಬಹು ನಿರೀಕ್ಷಿತ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 172 ರನ್ ಗುರಿ ಮುಂದಿಟ್ಟಿದೆ.
ಸಂಕಷ್ಟಕ್ಕೆ ಸಿಲುಕಿದ್ದ ತಂಡ
20 ರನ್ ಆಗುವಷ್ಟರಲ್ಲಿ ಮೊದಲ 3 ವಿಕೆಟ್ ಕಳೆದುಕೊಂಡ ಮುಂಬೈ ಸಂಕಷ್ಟಕ್ಕೆ ಸಿಲುಕಿತು. ನಾಯಕ ರೋಹಿತ್ ಶರ್ಮಾ 10 ಎಸೆತಗಳಲ್ಲಿ 1 ರನ್ ಗಳಿಸಿ ಹೀನಾಯ ನಿರ್ವಹಣೆ ತೋರಿ ಔಟಾದರು. ಇಶಾನ್ ಕಿಶನ್ 10 ರನ್ , ಕ್ಯಾಮರೂನ್ ಗ್ರೀನ್ 5 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಕೂಡ 15 ರನ್ ಗಳಿಸಿ ನಿರ್ಗಮಿಸಿದರು. ಆ ಬಳಿಕ ಬಂದ ಎಡಗೈ ಬ್ಯಾಟ್ಸ್ ಮ್ಯಾನ್ ತಿಲಕ್ ವರ್ಮ ನೆಲಕಚ್ಚಿ ಆಟವಾಡಿ ತಂಡಕ್ಕೆ ಆಧಾರವಾದರು. ದಿಗ್ಗಜರು ವಿಫಲರಾದರು ಮುಂಬೈ ಗೌರವಯುತ ಮೊತ್ತ ಕಲೆ ಹಾಕುವಲ್ಲಿ ನೆರವಾದರು. ಔಟಾಗದೆ 84 ರನ್ ಗಳಿಸಿದರು. 46 ಎಸೆತಗಳಲ್ಲಿ 9 ಬೌಂಡರಿ ಮತ್ತು 4 ಆಕರ್ಷಕ ಸಿಕ್ಸರ್ ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿದ್ದವು. ಅಲ್ಪ ಮೊತ್ತಕ್ಕೆ ಕುಸಿಯುತ್ತದೆ ಎಂಬ ಆರ್ ಸಿಬಿ ಅಭಿಮಾನಿಗಳ ನಿರೀಕ್ಷೆ ಹುಸಿ ಮಾಡಿದರು. ನೆಹಾಲ್ ವಧೇರಾ 21 ರನ್ ಗಳಿಸಿದರು. ಅರ್ಷದ್ ಖಾನ್ ಔಟಾಗದೆ 15 ರನ್ ಗಳಿಸಿದರು. 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು.
20 ರ ಹರೆಯದ ಹೈದರಾಬಾದ್ ಮೂಲದ ಆಟಗಾರ ತಿಲಕ್ ವರ್ಮ ಹೊಸ ಭರವಸೆ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು