ಮೀಸಲಾತಿ ಮಿತಿ ಪರಾಮರ್ಶೆಗೆ ಸಕಾಲ


Team Udayavani, Mar 10, 2021, 6:30 AM IST

ಮೀಸಲಾತಿ ಮಿತಿ ಪರಾಮರ್ಶೆಗೆ ಸಕಾಲ

ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಜಾತಿ, ವರ್ಗ, ಸಮುದಾಯಗಳ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸದುದ್ದೇಶದಿಂದ ಸರಕಾರಿ ಉದ್ಯೋಗ, ಶಿಕ್ಷಣ, ಆಡಳಿತ ವ್ಯವಸ್ಥೆಗಳಲ್ಲಿ ಮೀಸಲಾತಿ ನೀಡುವ ಪರಿಕಲ್ಪನೆ ಸಂವಿಧಾನದಲ್ಲಿಯೇ ಇದೆ. ಸಂವಿಧಾನ ಜಾರಿಗೆ ಬಂದು ಏಳು ದಶಕಗಳೇ ಕಳೆದಿದ್ದರೂ ಮೀಸಲಾತಿಯ ಉದ್ದೇಶ ಈಡೇರಿದೆಯೇ? ಎಂದು ಆತ್ಮಾವಲೋಕನ ಮಾಡಿಕೊಂಡರೆ ನಾವು ಎಡವಿರುವುದು ಸ್ಪಷ್ಟವಾಗುತ್ತದೆ. ಹಾಗೆಂದು ಮೀಸಲಾತಿಯಿಂದ ಪರಿಶಿಷ್ಟ ಜಾತಿ, ಪಂಗಡ, ಬುಡಕಟ್ಟು, ಹಿಂದುಳಿದ ಸಮುದಾಯದ ಮಂದಿಗೆ ಪ್ರಯೋಜನವಾಗಿಲ್ಲ ಎಂದರೆ ಅದು ಖಂಡಿತಾ ತಪ್ಪಾದೀತು. ಈ ಎಲ್ಲ ವರ್ಗಗಳ ಕೆಲವರಾದರೂ ಮೀಸಲಾತಿಯ ಕಾರಣದಿಂದಾಗಿಯೇ ಉನ್ನತ ಸ್ಥಾನಕ್ಕೇರಿದ್ದಾರೆ.

ಮೀಸಲಾತಿ ವಿಚಾರವಾಗಿ ಕಳೆದ ಹಲವಾರು ದಶಕಗಳಿಂದ ಚರ್ಚೆ, ಜಿಜ್ಞಾಸೆಗಳು ನಡೆಯುತ್ತಲೇ ಬಂದಿವೆ. ಮೀಸಲಾತಿಯ ಔಚಿತ್ಯದ ಬಗೆಗೇ ಹಲವಾರು ಬಾರಿ ಪ್ರಶ್ನೆಗಳು ಎದ್ದಿವೆಯಾದರೂ ಸಂವಿಧಾನದಲ್ಲಿಯೇ ಈ ವಿಚಾರ ಪ್ರಸ್ತಾವವಾಗಿರುವುದರಿಂದ ಇವು ಅಷ್ಟೇ ವೇಗದಲ್ಲಿ ಹಿನ್ನೆಲೆಗೆ ಸರಿದಿವೆ. 1992ರಲ್ಲಿ ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಒಂಬತ್ತು ಸದಸ್ಯರ ಪೀಠ ಎಲ್ಲ ಸಮುದಾಯಗಳಿಗೆ ನೀಡಲಾಗುವ ಮೀಸಲಾತಿ ಪ್ರಮಾಣ ಶೇ. 50ರ ಗಡಿಯನ್ನು ಮೀರಬಾರದು ಎಂಬ ಮಹತ್ತರವಾದ ತೀರ್ಪನ್ನು ನೀಡಿತ್ತು. ಇದಾದ ಬಳಿಕ ಮೀಸಲಾತಿ ಹೋರಾಟ ಒಂದಿಷ್ಟು ತಣ್ಣಗಾಗಿತ್ತು. 2018ರಲ್ಲಿ ಮಹಾರಾಷ್ಟ್ರ ಸರಕಾರ ಮರಾಠ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ. 16ರಷ್ಟು ಮೀಸಲಾತಿಯನ್ನು ನೀಡುವ ಕಾಯಿದೆ ಜಾರಿಗೆ ತಂದ ಬಳಿಕ ಮೀಸಲಾತಿ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂತು. ಈ ನಿರ್ಧಾರದಿಂದಾಗಿ ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇ. 50ರ ಗಡಿಯನ್ನು ಮೀರಿ, ಹೊಸ ವಿವಾದವೊಂದು ಸೃಷ್ಟಿಯಾಯಿತಲ್ಲದೆ ಅನ್ಯ ರಾಜ್ಯಗಳೂ ಇದೇ ರೀತಿಯ ಬೇಡಿಕೆಯನ್ನು ಇಡಲಾರಂಭಿಸಿದವು. ತಮಿಳುನಾಡು ಸಹಿತ ಇನ್ನಿತರ ಕೆಲವೊಂದು ರಾಜ್ಯಗಳಲ್ಲಿಯೂ ಮೀಸಲಾತಿ ಪ್ರಮಾಣ ಈಗ ಶೇ. 50ರ ಗಡಿ ಮೀರಿದೆ. 2018ರಲ್ಲಿ ಕೇಂದ್ರ ಸರಕಾರ ಜಾರಿಗೆ ತಂದ ಸಂವಿಧಾನದ 102ನೇ ತಿದ್ದುಪಡಿಯ ಅನುಸಾರ ಸದ್ಯ ಮೀಸಲಾತಿ ಪಟ್ಟಿಗೆ ಜಾತಿ ಅಥವಾ ಸಮುದಾಯಗಳನ್ನು ಸೇರ್ಪಡೆಗೊಳಿಸುವ ಅಧಿಕಾರ ರಾಷ್ಟ್ರಪತಿಗಳದ್ದಾಗಿದೆ.

ಮಹಾರಾಷ್ಟ್ರ ಸರಕಾರದ ಮೀಸಲಾತಿ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಸೋಮವಾರದ ವಿಚಾರಣೆಯ ವೇಳೆ ಪಂಚ ಸದಸ್ಯ ಪೀಠ ಎಲ್ಲ ರಾಜ್ಯಗಳಿಗೆ ನೋಟಿಸ್‌ ಜಾರಿಗೊಳಿಸಿ ಈ ಸಂಬಂಧ ಅಭಿಪ್ರಾಯವನ್ನು ಕೋರಿದೆ. ಮೀಸಲಾತಿಗಾಗಿ ನಿರ್ದಿಷ್ಟ ಸಮುದಾಯವನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿದೆ ಎಂದು ಘೋಷಿಸುವ ಅಧಿಕಾರ ರಾಜ್ಯಗಳ ಶಾಸಕಾಂಗಗಳಿಗೆ ಇದೆಯೇ? ಎಂಬ ಕುರಿತಂತೆ ಸುಪ್ರೀಂ ಕೋರ್ಟ್‌ ಪರಿಶೀಲನೆ ನಡೆಸುವ ಜತೆಯಲ್ಲಿ ಶೇ. 50ರ ಮೀಸಲಾತಿ ಗಡುವಿನ ಕುರಿತಂತೆಯೂ ಪರಾಮರ್ಶೆ ನಡೆಸುವುದಾಗಿ ತಿಳಿಸಿದೆ.

ಮೀಸಲಾತಿಯ ಪ್ರಮಾಣ ವರ್ಷಗಳುರುಳಿದಂತೆಯೇ ಹೆಚ್ಚುತ್ತಿರು ವುದು, ಮೀಸಲಾತಿ ಪಟ್ಟಿಗೆ ಜಾತಿ, ಸಮುದಾಯಗಳ ನಿರಂತರ ಸೇರ್ಪಡೆ ಮತ್ತು ಇದರಿಂದ ಅರ್ಹರಿಗಾಗುತ್ತಿರುವ ಅನ್ಯಾಯ, ಮೀಸಲಾತಿಯ ದುರುಪಯೋಗ, ಸದ್ಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯಲ್ಲಿ ಜಾತಿವಾರು ಮೀಸಲಾತಿಯ ಅಗತ್ಯತೆ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಒದಗಿಸುವುದು..ಮತ್ತಿತರ ಗಂಭೀರ ವಿಚಾರಗಳ ಬಗೆಗೆ ದೇಶದಲ್ಲಿ ಗಂಭೀರ ಮಟ್ಟದ ಚರ್ಚೆ ನಡೆಯಬೇಕಿದೆ. ಇಂಥ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ಮೀಸಲಾತಿ ನಿಗದಿತ ಪ್ರಮಾಣ ಪರಾಮರ್ಶೆಯ ಚರ್ಚೆಗೆ ನಾಂದಿ ಹಾಡಿರುವುದು ಶ್ಲಾಘನೀಯವೇ ಸರಿ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.