ಕೋವಿಡ್: ಹಿರಿಯ ಭಕ್ತರಿಗೆ, ಮಕ್ಕಳಿಗೆ ತಿರುಪತಿ ತಿರುಮಲ ಬಾಲಾಜಿ ದರ್ಶನಕ್ಕೆ ಅವಕಾಶ
ಕೋವಿಡ್ 19 ಕುರಿತು ಬೇಕಾದ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ದೇವರ ದರ್ಶನಕ್ಕೆ ಆಗಮಿಸಬೇಕು
Team Udayavani, Dec 13, 2020, 9:55 AM IST
ಆಂಧ್ರಪ್ರದೇಶ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಹಿರಿಯ ವ್ಯಕ್ತಿಗಳು, ಮಕ್ಕಳಿಗೆ ತಿರುಪತಿ ತಿರಮಲ ವೆಂಕಟೇಶ್ವರ ದರ್ಶನಕ್ಕೆ ಅವಕಾಶ ಇಲ್ಲವಾಗಿತ್ತು. ಇದೀಗ ಕೋವಿಡ್ ನಿಯಮಾವಳಿ ಪ್ರಕಾರ ಹಿರಿಯ ಭಕ್ತರು ಮತ್ತು ಮಕ್ಕಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡುವುದಾಗಿ ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ ತಿಳಿಸಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 65ವರ್ಷಕ್ಕಿಂತ ಮೇಲ್ಪಟ್ಟವರು, ಹತ್ತು ವರ್ಷದೊಳಗಿನ ಮಕ್ಕಳು, ಗರ್ಭಿಣಿ ಮಹಿಳೆಯರು ಮನೆಯಲ್ಲಿಯೇ ಇರುವಂತೆ ಸೂಚಿಸಿತ್ತು. ಕೋವಿಡ್ ಸೋಂಕಿನ ನಿಟ್ಟಿನಲ್ಲಿ ದೇವಾಲಯಗಳಲ್ಲಿ ಪ್ರವೇಶ ಅವಕಾಶ ಇಲ್ಲವಾಗಿತ್ತು.
ಕೇಂದ್ರದ ಸೂಚನೆಯಂತೆ ಮಾರ್ಚ್ 20ರಿಂದ ಹಿರಿಯ ವ್ಯಕ್ತಿಗಳು, ಗರ್ಭಿಣಿಯರಿಗೆ, ಹತ್ತು ವರ್ಷದೊಳಗಿನ ಮಕ್ಕಳಿಗೆ ತಿರುಮಲ ತಿರುಪತಿ ಬಾಲಾಜಿ ದರ್ಶನಕ್ಕೆ ಅವಕಾಶ ನೀಡಿಲ್ಲವಾಗಿತ್ತು. ಜೂನ್ ತಿಂಗಳಿನಲ್ಲಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದ ನಂತರ ಭಕ್ತರಿಂದ ದೊಡ್ಡ ಪ್ರಮಾಣದಲ್ಲಿ ದರ್ಶನಕ್ಕೆ ಅವಕಾಶ ಕೊಡುವಂತೆ ಬೇಡಿಕೆ ಬಂದಿರುವುದಾಗಿ ಟಿಟಿಡಿ ತಿಳಿಸಿದೆ.
ಇದನ್ನೂ ಓದಿ:ಕಬ್ಬಿನ ಗದ್ದೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು: ಗ್ರಾ.ಪಂ. ಸ್ಪರ್ಧೆಯ ದ್ವೇಷದ ಶಂಕೆ!
ದೀರ್ಘಕಾಲದ ಕೇಶಮುಂಡನ(ಮುಡಿ ಒಪ್ಪಿಸುವುದು), ಕಿವಿ ಚುಚ್ಚುವುದು, ಮಕ್ಕಳಿಗೆ ಅನ್ನಪ್ರಾಶನ ಸೇರಿದಂತೆ ಹಲವು ಹರಕೆ ತೀರಿಸಲು ಅವಕಾಶ ಮಾಡಿಕೊಡಬೇಕೆಂದು ವಿನಂತಿಸಿಕೊಂಡಿದ್ದರು. ಇದು ಭಕ್ತರ ದೀರ್ಘಕಾಲದ ಸಂಪ್ರದಾಯವಾಗಿರುವುದಾಗಿ ಟಿಟಿಡಿ ವಿವರಿಸಿದೆ.
ಹೀಗಾಗಿ ಭಕ್ತರ ಭಾವನೆಗಳನ್ನು ಪರಿಗಣಿಸಿ ಹಿರಿಯ ಭಕ್ತರಿಗೆ, ಮಕ್ಕಳಿಗೆ ಕೋವಿಡ್ 19 ಸೂಕ್ತ ಮುನ್ನೆಚ್ಚರಿಕೆ ಕ್ರಮದೊಂದಿಗೆ ಬಾಲಾಜಿ ದರ್ಶನಕ್ಕೆ ಅವಕಾಶ ಮಾಡಿಕೊಡಲು ಟಿಟಿಡಿ ನಿರ್ಧರಿಸಿರುವುದಾಗಿ ತಿಳಿಸಿದೆ.
ಹಿರಿಯ ಭಕ್ತರು, ಮಕ್ಕಳು ಕೋವಿಡ್ 19 ಕುರಿತು ಬೇಕಾದ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ದೇವರ ದರ್ಶನಕ್ಕೆ ಆಗಮಿಸಬೇಕು ಎಂದು ತಿಳಿಸಿದೆ. ಇದರಲ್ಲಿ ಯಾವುದೇ ಸ್ಪೆಷಲ್ ಕ್ಯೂಗಳಿಗೆ ಅವಕಾಶ ಇಲ್ಲವಾಗಿದ್ದು, ಎಲ್ಲರೂ ಜನರಲ್ ಕ್ಯೂನಲ್ಲಿಯೇ ತೆರಳಿ ದೇವರ ದರ್ಶನ ಪಡೆಯಬೇಕು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ